ಬ್ರೇಕಿಂಗ್ ನ್ಯೂಸ್
16-04-26 10:30 pm HK News Staffer ಕರ್ನಾಟಕ
ಬೆಂಗಳೂರು, ಏ 16: ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ. ಸಲೀಂ ಅವರ ಸೇವಾವಧಿಯನ್ನು ರಾಜ್ಯ ಸರ್ಕಾರ ವಿಸ್ತರಿಸಿದೆ. ಈ ವರ್ಷದ ಜೂನ್ ನಲ್ಲಿ ಸಲೀಂ ಅವರು ನಿವೃತ್ತರಾಗಬೇಕಿತ್ತು. ಆದರೆ ರಾಜ್ಯ ಸರ್ಕಾರ 2027ರ ಅಕ್ಟೋಬರ್ 29ರವರೆಗೆ ಸೇವಾ ಅವಧಿ ವಿಸ್ತರಣೆ ಮಾಡಿದೆ.
2025ರ ಮೇನಲ್ಲಿ ಪ್ರಭಾರ ಡಿಜಿ ಐಜಿಪಿಯಾಗಿ ನೇಮಕವಾಗಿದ್ದ ಸಲೀಂ ಅವರನ್ನು 2025ರ ಆಗಸ್ಟ್ ನಲ್ಲಿ ಪೂರ್ಣಾವಧಿಗೆ ನೇಮಕ ಮಾಡಲಾಗಿತ್ತು. ರಾಜ್ಯದ 43ನೇ ಡಿಜಿ-ಐಜಿಪಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಸುಪ್ರೀಂಕೋರ್ಟ್ ಆದೇಶದಂತೆ ಡಿಜಿಪಿಗೆ ಕನಿಷ್ಠ 2 ವರ್ಷಗಳ ಅಧಿಕಾರಾವಧಿ ಇರಬೇಕು. ಹೀಗಾಗಿ 22.09.2006ರ ಸರ್ವೋಚ್ಚ ನ್ಯಾಯಾಲಯದ ಪ್ರಕಾಶ್ ಸಿಂಗ್ vs ಯೂನಿಯನ್ ಆಫ್ ಇಂಡಿಯಾ ಪ್ರಕರಣದ ತೀರ್ಪಿನ ಅನುಸಾರ ಡಿಜಿ & ಐಜಿಪಿ ಎಂ.ಎ.ಸಲೀಂ ಅವರ ಅವಧಿ ಒಟ್ಟು 2 ವರ್ಷಕ್ಕೆ ವಿಸ್ತರಣೆ ಮಾಡಲಾಗಿದೆ.
2025ರ ಮೇನಲ್ಲಿ ಪ್ರಭಾರ ಡಿಜಿ ಐಜಿಪಿಯಾಗಿ ನೇಮಕವಾಗಿದ್ದ ಸಲೀಂ ಅವರನ್ನು 2025ರ ಆಗಸ್ಟ್ ನಲ್ಲಿ ಪೂರ್ಣಾವಧಿಗೆ ನೇಮಕ ಮಾಡಲಾಗಿತ್ತು. ಇದೀಗ ರಾಜ್ಯ ಸರ್ಕಾರ, ಇನ್ನೊಂದು ವರ್ಷ ಅಂದರೆ 2027ರ ಅಕ್ಟೋಬರ್ 29ರವರೆಗೆ ಸೇವಾ ಅವಧಿ ವಿಸ್ತರಣೆ ಮಾಡಿದೆ.
ಡಾ. ಎಂ ಎ ಸಲೀಂ ಅವರು 1993ನೇ ಸಾಲಿನ ಕರ್ನಾಟಕ ಕೇಡರ್ನ ಅಧಿಕಾರಿಯಾಗಿದ್ದು, ಈ ಹಿಂದೆ ಕಲಬುರಗಿಯಲ್ಲಿ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿಯಾಗಿ, ಕುಶಾಲನಗರ ಉಪ ವಿಭಾಗದಲ್ಲಿ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ಪೊಲೀಸ್ ಮಹಾನಿರ್ದೇಶಕರಾಗಿ ಅಧಿಕಾರ ವಹಿಸಿಕೊಳ್ಳುವ ಮುನ್ನ ಡಾ. ಎಂ. ಎ ಸಲೀಂ ಅವರು ಸಿಐಡಿ ಡಿಜಿಪಿಯಾಗಿದ್ದರು. ಅಲ್ಲದೇ ಪ್ರಮುಖವಾಗಿ ಬೆಂಗಳೂರು ಸ್ಪೆಷಲ್ ಟ್ರಾಫಿಕ್ ಕಮಿಷನರ್ ಆಗಿ ಅನೇಕ ಸಂಚಾರ ಸುಧಾರಣೆ ಜಾರಿಗೆ ತಂದು ಜನಪ್ರಿಯರಾಗಿದ್ದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm