ಬ್ರೇಕಿಂಗ್ ನ್ಯೂಸ್
18-04-26 10:20 am HK News Staffer ಕರ್ನಾಟಕ
ಲಕ್ನೋ, ಎಪ್ರಿಲ್ 18: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ದ್ವಿ ಪೌರತ್ವ ಹೊಂದಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿ, ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಅಲಹಾಬಾದ್ ಹೈಕೋರ್ಟ್ ಶುಕ್ರವಾರ ಆದೇಶ ನೀಡಿದೆ.
ಉತ್ತರ ಪ್ರದೇಶದ ರಾಯ್ಬರೇಲಿ ಜಿಲ್ಲೆಯ ಕೊತ್ವಾಲಿ ಪೊಲೀಸ್ ಠಾಣೆಗೆ ಎಫ್ಐಆರ್ ದಾಖಲಿಸುವಂತೆ ಅಲಹಾಬಾದ್ ಹೈಕೋರ್ಟ್ ಲಕ್ನೋ ಪೀಠವು ಆದೇಶ ಹೊರಡಿಸಿದೆ. ರಾಹುಲ್ ಗಾಂಧಿ ಅವರು ಪ್ರಸ್ತುತ ರಾಯ್ ಬರೇಲಿ ಲೋಕಸಭಾ ಕ್ಷೇತ್ರದ ಸಂಸದರು. ರಾಹುಲ್ ವಿರುದ್ಧ ಕಾನೂನು ಕ್ರಮಕ್ಕೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನ ಪುರಸ್ಕರಿಸಿದ ಕೋರ್ಟ್ ಪ್ರಕರಣ ದಾಖಲಿಸಲು ಆದೇಶಿಸಿದೆ.
ಬೆಂಗಳೂರು ಮೂಲದ ಬಿಜೆಪಿ ಕಾರ್ಯಕರ್ತ ಎಸ್. ವಿಘ್ನೇಶ್ ಶಿಶಿರ್ ಎಂಬವರು ರಾಹುಲ್ ಗಾಂಧಿ ದ್ವಿಪೌರತ್ವ ಹೊಂದಿದ್ದಾರೆಂದು ಆರೋಪಿಸಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಈ ಮೊದಲು ಜನವರಿ 28 ರಂದು ಲಕ್ನೋದ ವಿಶೇಷ ನ್ಯಾಯಾಲಯವು ರಾಹುಲ್ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಕೋರಿದ್ದ ವಿಘ್ನೇಶ್ ಅವರ ಅರ್ಜಿಯನ್ನು ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ರಾಹುಲ್ ಗಾಂಧಿ ಅವರು ಭಾರತೀಯ ಪ್ರಜೆಯ ಜೊತೆಗೆ ಬ್ರಿಟಿಷ್ ಪ್ರಜೆಯೂ ಆಗಿದ್ದಾರೆ ಎಂಬುದನ್ನು ಸಾಬೀತುಪಡಿಸುವ ಬ್ರಿಟನ್ ಸರ್ಕಾರದ ಗೌಪ್ಯ ಇಮೇಲ್ಗಳು ಮತ್ತು ಪ್ರಮುಖ ದಾಖಲೆಗಳು ತಮ್ಮ ಬಳಿ ಇವೆ ಎಂದು ಅರ್ಜಿದಾರ ಶಿಶಿರ್ ಹೇಳಿಕೊಂಡಿದ್ದರು.
ಅಲ್ಲದೇ ಬ್ರಿಟಿಷ್ ಪೌರತ್ವ ಹೊಂದಿರುವುದರಿಂದ ರಾಹುಲ್ ಗಾಂಧಿ ಅವರು ಭಾರತದ ಚುನಾವಣೆಗಳಲ್ಲಿ ಸ್ಪರ್ಧಿಸಲು ಅನರ್ಹರಾಗಿದ್ದಾರೆ ಮತ್ತು ಲೋಕಸಭಾ ಸದಸ್ಯ ಹುದ್ದೆಯನ್ನು ಹೊಂದಲು ಸಾಧ್ಯವಿಲ್ಲ ಎಂದು ಆರೋಪಿಸಿದ್ದರು. ಈ ಸಂಬಂಧ 2025ರ ಡಿಸೆಂಬರ್ 17 ರಂದು ರಾಹುಲ್ ಗಾಂಧಿ ವಿರುದ್ಧ ರಾಯ್ ಬರೇಲಿಯ ವಿಶೇಷ ಜನಪ್ರತಿನಿಧಿ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು. ಬಳಿಕ ಹೈಕೋರ್ಟ್ ಪ್ರಕರಣವನ್ನ ಲಕ್ನೋ ಪೀಠಕ್ಕೆ ವರ್ಗಾಯಿಸಿತ್ತು. ಲಕ್ನೋ ಪೀಠ ಅರ್ಜಿಯನ್ನ ವಜಾಗೊಳಿಸಿದ ಬಳಿಕ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm