ಬ್ರೇಕಿಂಗ್ ನ್ಯೂಸ್
21-04-26 09:02 pm HK News Staffer ಕರ್ನಾಟಕ
ಚೆನ್ನೈ, ಎಪ್ರಿಲ್ 21: ತಮಿಳುನಾಡು ಚುನಾವಣೆ ಪ್ರಚಾರದಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡ ಎಐಎಡಿಎಂಕೆ ಪಕ್ಷವನ್ನ ಟೀಕಿಸುವ ಭರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ಮೋದಿಯನ್ನು ಭಯೋತ್ಪಾದಕ ಎಂದು ಹೇಳುವ ಮೂಲಕ ವಿವಾದಕ್ಕೆ ಗುರಿಯಾಗಿದ್ದಾರೆ.
ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಖರ್ಗೆ, ಎಐಡಿಎಂಕೆ ಪಕ್ಷವು ಮೋದಿ ಅವರೊಂದಿಗೆ ಹೇಗೆ ಸೇರಬಹುದು? ಮೋದಿ ಒಬ್ಬ ಭಯೋತ್ಪಾದಕ, ಅವರು ಸಮಾನತೆಯನ್ನ ನಂಬುವುದಿಲ್ಲ. ಅವರ ಪಕ್ಷಕ್ಕೂ ಸಮಾನತೆ ಮತ್ತು ನ್ಯಾಯದಲ್ಲಿ ನಂಬಿಕೆಯಿಲ್ಲ. ಈ ಜನ ಅವರೊಂದಿಗೆ ಸೇರುತ್ತಿದ್ದಾರೆ ಅಂದ್ರೆ, ಅವರು ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತಿದ್ದಾರೆ ಎಂದರ್ಥ ಎಂದು ಹೇಳಿದರು.
ತಮ್ಮ ಹೇಳಿಕೆ ವಿವಾದ ಆಗುತ್ತಲೇ ಸ್ಪಷ್ಟನೆ ನೀಡಿದ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ಒಬ್ಬ ಭಯೋತ್ಪಾದಕ ಎಂದು ನಾನು ಎಂದಿಗೂ ಹೇಳಿಲ್ಲ. ಅವರು ಜನರನ್ನು ಮತ್ತು ರಾಜಕೀಯ ಪಕ್ಷಗಳನ್ನು ಬೆದರಿಸುವ ಕೆಲಸ ಮಾಡುತ್ತಾರೆ ಎಂದು ನಾನು ಹೇಳಲು ಬಯಸಿದ್ದೆ. ಪ್ರಧಾನಿ ಮೋದಿ ಯಾವಾಗಲೂ ಬೆದರಿಕೆ ಹಾಕುತ್ತಾರೆ ಮತ್ತು ಅವರ ನಡವಳಿಕೆ ರಾಜಕೀಯ ವಲಯದಲ್ಲಿ ಭಯ ಉಂಟು ಮಾಡುತ್ತದೆ ಎಂದು ಖರ್ಗೆ ಸ್ಪಷ್ಟಪಡಿಸಿದರು.
ತಮ್ಮ ಹೇಳಿಕೆ ಪ್ರಧಾನಿ ಕಾರ್ಯಶೈಲಿಯನ್ನ ಪ್ರಶ್ನಿಸುವ ಉದ್ದೇಶ ಹೊಂದಿತ್ತೇ ಹೊರತು ವೈಯಕ್ತಿಕ ದಾಳಿ ಮಾಡುವ ಉದ್ದೇಶವನ್ನಲ್ಲ. ಕೇಂದ್ರ ಸರ್ಕಾರ ಮತ್ತು ಸರ್ಕಾರಿ ಸಂಸ್ಥೆಗಳನ್ನು ಪ್ರಧಾನಿ ತಮಗೆ ಬೇಕಾದ ರೀತಿ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಎಂದು ಖರ್ಗೆ ಆರೋಪಿಸಿದರು. ಜಾರಿ ನಿರ್ದೇಶನಾಲಯ, ಆದಾಯ ತೆರಿಗೆ ಇಲಾಖೆ ಮತ್ತು CBI ನಂತಹ ಪ್ರಮುಖ ಸಂಸ್ಥೆಗಳು ಸಂಪೂರ್ಣ ಪ್ರಧಾನಿಯವರ ನಿಯಂತ್ರಣದಲ್ಲಿವೆ ಮತ್ತು ವಿರೋಧಿಗಳನ್ನ ಬೆದರಿಸಲು ಅವುಗಳನ್ನು ಬಳಸಲಾಗುತ್ತಿದೆ ಎಂದವರು ಹೇಳಿದರು.
ಖರ್ಗೆ ಹೇಳಿಕೆಗೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದು ಮೋದಿಯನ್ನು ಅವಮಾನಿಸುವುದು ಕಾಂಗ್ರೆಸ್ನ ಪಿತೂರಿ ಎಂದು ಬಿಜೆಪಿ ವಕ್ತಾರ ಸಂಭಿತ್ ಪಾತ್ರ ಹೇಳಿದ್ದಾರೆ. ಪ್ರಧಾನಿ ಮೋದಿಯನ್ನು ಭಯೋತ್ಪಾದಕ ಎಂದು ಕರೆಯುವುದು ನಾಲಿಗೆಯ ಎಡವಟ್ಟಲ್ಲ, ಬದಲಾಗಿ ರಾಹುಲ್ ಗಾಂಧಿಯವರ ಆಜ್ಞೆಯ ಮೇರೆಗೆ ಮಾಡಿದ ಹೇಳಿಕೆ ಎಂದು ಪತ್ರಾ ಆರೋಪಿಸಿದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm