ಬ್ರೇಕಿಂಗ್ ನ್ಯೂಸ್
23-04-26 10:54 am HK News Staffer ಕರ್ನಾಟಕ
ಬೆಂಗಳೂರು, ಏಪ್ರಿಲ್ 23: ರಾಜ್ಯದ ಎಸ್ಎಸ್ಎಲ್ಸಿ ಪರೀಕ್ಷೆ–1ರ ಫಲಿತಾಂಶ ಇಂದು ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ ಅಧಿಕೃತವಾಗಿ ಫಲಿತಾಂಶ ಪ್ರಕಟಿಸಲಿದ್ದಾರೆ.
ಸಚಿವರ ಘೋಷಣೆ ಬಳಿಕ ಫಲಿತಾಂಶವನ್ನು ಇಲಾಖೆಯ ವೆಬ್ಸೈಟ್ಗಳಲ್ಲಿ ವೀಕ್ಷಿಸಲು ಅವಕಾಶ ಕಲ್ಪಿಸಲಾಗುತ್ತದೆ. ಈ ಬಾರಿ ಕರ್ನಾಟಕ ಹೈಕೋರ್ಟ್ ಆದೇಶದ ಹಿನ್ನೆಲೆ ಮಹತ್ವದ ಬದಲಾವಣೆ ಮಾಡಲಾಗಿದ್ದು, ಹಿಂದಿ ಸೇರಿದಂತೆ ತೃತೀಯ ಭಾಷೆಗೆ ಗ್ರೇಡ್ ಬದಲಾಗಿ ಅಂಕ ನೀಡಲಾಗಿದೆ. ಇದರ ಪರಿಣಾಮವಾಗಿ ಈ ವರ್ಷದ ಫಲಿತಾಂಶವನ್ನು 525 ಅಂಕಗಳ ಬದಲು 625 ಅಂಕಗಳಿಗೆ ಪ್ರಕಟಿಸಲಾಗುತ್ತಿದೆ.
ಈ ಬಾರಿ ಸುಮಾರು 8 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅವರ ಭವಿಷ್ಯ ಇಂದು ನಿರ್ಧಾರವಾಗಲಿದೆ. ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ ರಾಜ್ಯಾದ್ಯಂತ 2,871 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು.
ವಿದ್ಯಾರ್ಥಿಗಳಿಗೆ ಮತ್ತೊಂದು ವಿಶೇಷ ಸೌಲಭ್ಯವಾಗಿ, ಈ ವರ್ಷ ಮೊದಲ ಬಾರಿಗೆ ಅಂಕಪಟ್ಟಿಯನ್ನು DigiLocker ನಲ್ಲಿ ಲಭ್ಯವಾಗುವಂತೆ ಮಾಡಲಾಗಿದೆ. ಮಧ್ಯಾಹ್ನ 12 ಗಂಟೆಯ ನಂತರ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
ಫಲಿತಾಂಶವನ್ನು https://karresults.nic.in ವೆಬ್ಸೈಟ್ ಹಾಗೂ ಕರ್ನಾಟಕ ಒನ್ ಮೊಬೈಲ್ ಆಪ್ನಲ್ಲಿ ವೀಕ್ಷಿಸಬಹುದಾಗಿದೆ.
2025-26 ರ SSLC ಪರೀಕ್ಷೆಗಳು ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ ಯಶಸ್ವಿಯಾಗಿ ಪೂರ್ಣಗೊಂಡಿತ್ತು. ಆದರೆ ವಿದ್ಯಾರ್ಥಿಗಳಲ್ಲಿ ಹಿಂದಿ ಪರೀಕ್ಷೆಯ ಬಗ್ಗೆ ಗೊಂದಲ ಉಂಟಾಗಿತ್ತು. ಏಕೆಂದರೆ ಸರ್ಕಾರ ಏಕಾಏಕಿ ಹಿಂದಿ ಭಾಷೆ ಅಂಕಗಳ ಬದಲು, ಗ್ರೇಡ್ ನೀಡುವುದಾಗಿ ಘೋಷಣೆ ಮಾಡಿತ್ತು. ಇದರ ನಡುವೆಯೇ ಹಲವರು ಕೋರ್ಟ್ ಮೊರೆ ಹೋಗಿದ್ದರು. ಈ ಕುರಿತು ವಿಚಾರಣೆ ನಡೆಸಿದ್ದ ಕೋರ್ಟ್, ಅಂಕಗಳನ್ನೇ ನೀಡಲು ಸರ್ಕಾರಕ್ಕೆ ನಿರ್ದೇಶನ ನೀಡಿ ಆದೇಶ ಜಾರಿ ಮಾಡಿತ್ತು. ಇದರೊಂದಿಗೆ ಸರ್ಕಾರ ಕೂಡ ಕೋರ್ಟ್ ಆದೇಶದಂತೆ ತೃತೀಯ ಭಾಷೆಗೆ ಅಂಕ ನೀಡಲು ಮುಂದಾಗಿದೆ. ಆದರೆ ಈ ಬಾರಿ ತೃತೀಯ ಭಾಷೆಯಲ್ಲಿ ಎಲ್ಲಾ ವಿದ್ಯಾರ್ಥಿಗಳು ಪಾಸ್ ಆಗುವ ಸಾಧ್ಯತೆ ಇದೆ. ಏಕೆಂದರೆ ಫೇಲ್ ಆಗುವ ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕ ಭಾಗ್ಯ ನೀಡುವ ಚಿಂತನೆಯನ್ನು ಸರ್ಕಾರ ಮಾಡಿದೆ. ಇದರೊಂದಿಗೆ ಕಳೆದ ಬಾರಿಗಿಂತ ಈ ಬಾರಿ ಹೆಚ್ಚು ಫಲಿತಾಂಶ ಸಿಗುವ ನಿರೀಕ್ಷೆ ಇದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm