ಬ್ರೇಕಿಂಗ್ ನ್ಯೂಸ್
23-04-26 01:07 pm HK News Staffer ಕರ್ನಾಟಕ
ಪುತ್ತೂರು, ಎಪ್ರಿಲ್ 23: ಸಹಪಾಠಿ ಯುವತಿಯನ್ನು ಪ್ರೀತಿಸಿ ಮಗು ಕರುಣಿಸಿದ ಪ್ರಕರಣದಲ್ಲಿ ಕೇಸು ರದ್ದು ಕೋರಿ ಸಲ್ಲಿಸಿದ್ದ ಬಿಜೆಪಿ ಮುಖಂಡನ ಪುತ್ರ ಕೃಷ್ಣ ರಾವ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಒಪ್ಪಿತ ಸಂಬಂಧದಲ್ಲಿ ಮಗುವಾದ ಮೇಲೆ ಯುವತಿಯನ್ನು ಮದುವೆಯಾಗಿ ಸಲಹುವುದೇ ಉತ್ತಮ. ಡಿಎನ್ಎ ವರದಿಯಲ್ಲಿ ಮಗುವಿಗೆ ಜೈವಿಕ ತಂದೆ ಆತನೇ ಎಂದು ಸಾಬೀತಾದ ಬಳಿಕ ಮದುವೆಗೆ ಹಿಂಜರಿಯುವುದು ಸರಿಯಲ್ಲ ಎಂದು ಹೇಳಿದೆ.
ತನ್ನ ಮೇಲೆ ದಾಖಲಾಗಿರುವ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಕೃಷ್ಣ ಜೆ. ರಾವ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ನಡೆಸಿದೆ. ಈ ಸಂದರ್ಭದಲ್ಲಿ ಡಿಎನ್ಎ ವರದಿ ಉಲ್ಲೇಖಿಸಿದ ಪೀಠವು, ಆರೋಪಿಯೇ ಮಗುವಿನ ಜೈವಿಕ ತಂದೆ ಎಂಬುದು ದೃಢಪಟ್ಟಿರುವುದರಿಂದ ಸಂತ್ರಸ್ತೆಯನ್ನು ಮದುವೆಯಾಗುವುದೇ ಸೂಕ್ತ ಎಂದು ಸಲಹೆ ಮಾಡಿದೆ.
ಇದಲ್ಲದೆ, ವಿಚಾರಣೆ ಸಂದರ್ಭದಲ್ಲಿ ನ್ಯಾಯಾಧೀಶರು ಪ್ರಮುಖ ಪ್ರಶ್ನೆಗಳನ್ನು ಎತ್ತಿದ್ದಾರೆ. ಮಗು ಮತ್ತು ತಾಯಿಯನ್ನು ಬೀದಿಗೆ ತಳ್ಳುವುದು ನ್ಯಾಯವೇ? ಮಗುವಿನ ಆರೈಕೆ ಮಾಡುವುದು ತಂದೆಯಾಗಿ ಆರೋಪಿಯ ಆದ್ಯ ಕರ್ತವ್ಯವಲ್ಲವೇ? ಸಂತ್ರಸ್ತೆಗೆ ಮಾಸಿಕ ಜೀವನಾಂಶ ನೀಡಲು ಆರೋಪಿ ಸಿದ್ಧನಿದ್ದಾನೆಯೇ? ಈ ಪ್ರಶ್ನೆಗಳಿಗೆ ಉತ್ತರಿಸಲು ಮತ್ತು ತನ್ನ ನಿಲುವು ತಿಳಿಸಲು ಆರೋಪಿ ಪರ ವಕೀಲರಿಗೆ ಸೂಚಿಸಿದ ಪೀಠವು, ವಿಚಾರಣೆಯನ್ನು ಏಪ್ರಿಲ್ 24ಕ್ಕೆ ಮುಂದೂಡಿದೆ.
ವಿಚಾರಣೆ ವೇಳೆ ಆರೋಪಿ ಪರ ವಕೀಲ ಪಿ.ಪಿ. ಹೆಗ್ಡೆ ಅವರು ಇದು ರಾಜಕೀಯ ವಿರೋಧಿಗಳ ಸಂಚು. ಆರೋಪಿಯ ತಂದೆಯ ತೇಜೋವಧೆ ಮಾಡಲು ಈ ಪ್ರಕರಣವನ್ನು ಬಳಸಲಾಗುತ್ತಿದೆ ಎಂದು ವಾದಿಸಿದರು. ಆದರೆ, ಡಿಎನ್ಎ ವರದಿ ಆರೋಪಿ ವಿರುದ್ಧ ಇರುವುದರಿಂದ ನ್ಯಾಯಾಲಯವು ರಾಜಕೀಯ ವಾದ ಬದಿಗಿಟ್ಟು ಮಾನವೀಯ ನೆಲೆಯಲ್ಲಿ ಮಗುವಿನ ಭವಿಷ್ಯದ ಬಗ್ಗೆ ಕಾಳಜಿ ವ್ಯಕ್ತಪಡಿಸಲು ಸಲಹೆ ಮಾಡಿತು.
ಶಾಲಾ ದಿನಗಳಿಂದಲೂ ಸಹಪಾಠಿಯಾಗಿದ್ದ ಯುವತಿಯನ್ನು ಕೃಷ್ಣ ಜೆ. ರಾವ್ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಬಂಧ ಹೊಂದಿದ್ದ. ಯುವತಿ ಗರ್ಭವತಿಯಾದ ಬಳಿಕ ಕುಟುಂಬಸ್ಥರು ಮದುವೆಯಾಗುವುದಾಗಿ ಹೇಳಿ ನಂಬಿಸಿ ವಯಸ್ಸಿನ ಕಾರಣಕ್ಕೆ ಮುಂದೂಡಿದ್ದರು. ಮಗು ಜನಿಸಿದ ನಂತರ ‘ಮಗು ನನ್ನದಲ್ಲ’ ಎಂದು ಹೇಳಿ ಆರೋಪಿ ಮದುವೆಗೆ ನಿರಾಕರಣೆ ಮಾಡಿದ್ದ. ಆದರೆ ಡಿಎನ್ಎ ಪರೀಕ್ಷೆಯಲ್ಲಿ ಮಗು ಆನದ್ದೇ ಎಂದು ವರದಿ ನೀಡಿತ್ತು.
ಈ ಹಿನ್ನೆಲೆಯಲ್ಲಿ ವಿಶ್ವಕರ್ಮ ಸಮಾಜದ ಮುಖಂಡರು ಮದುವೆಗಾಗಿ ಹಿಂದು ಸಂಘಟನೆ ಮತ್ತು ಬಿಜೆಪಿ ನಾಯಕರನ್ನು ಭೇಟಿಯಾಗಿ ಪ್ರಯತ್ನ ಮಾಡಿದ್ದರು. ಆದರೆ ಕೃಷ್ಣ ರಾವ್ ಪ್ರತಿಷ್ಠೆಯ ಕಾರಣಕ್ಕೆ ಮದುವೆಯನ್ನು ನಿರಾಕರಿಸುತ್ತ ಬಂದಿದ್ದಲ್ಲದೆ, ಪ್ರಕರಣ ರದ್ದುಗೊಳಿಸಲು ಪ್ರಭಾವಿ ವಕೀಲರನ್ನು ಮುಂದಿಟ್ಟು ಹೈಕೋರ್ಟ್ ಮೆಟ್ಟಿಲೇರಿದೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm