ಬ್ರೇಕಿಂಗ್ ನ್ಯೂಸ್
24-04-26 10:52 pm HK News Staffer ಕರ್ನಾಟಕ
ಕಾರವಾರ, ಏಪ್ರಿಲ್ 24: ಪರೀಕ್ಷಾ ಪ್ರಾಧಿಕಾರದ ಎಡವಟ್ಟಿನಿಂದ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಫೇಲ್ ಆಗಿದ್ದ ಅಂಧ ವಿದ್ಯಾರ್ಥಿನಿ ಲೀಸಾ ಖಾನಮ್ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಗುರುವಾರ ಪ್ರಕಟವಾದ ಅಧಿಕೃತ ಫಲಿತಾಂಶದಲ್ಲಿ ಸಮಾಜ ವಿಜ್ಞಾನ ವಿಷಯದಲ್ಲಿ ‘ಗೈರು’ ಎಂದು ನಮೂದಾಗಿದ್ದ ಕಾರಣ ಲೀಸಾ ಫೇಲ್ ಎಂದು ತೋರಿಸಲಾಗಿತ್ತು. ಆದರೆ ಇಂದು ಹೊರಬಂದ ಮತ್ತೊಂದು ಫಲಿತಾಂಶದಲ್ಲಿ ಆಕೆ ಶಾಲೆಯ ಟಾಪರ್ ಎಂದು ಹೇಳಲಾಗುತ್ತಿದೆ.
ಶಿರಸಿಯ ಇಂದಿರಾ ನಗರದ ಯೂನಿಯನ್ ಉರ್ದು ಪ್ರೌಢಶಾಲೆಯ ವಿದ್ಯಾರ್ಥಿನಿಯಾಗಿರುವ ಲೀಸಾ ಖಾನಮ್, ಎಲ್ಲಾ ಪರೀಕ್ಷೆಗಳನ್ನು ಬರೆದಿದ್ದರೂ ಪರೀಕ್ಷಾ ಪ್ರಾಧಿಕಾರದ ತಪ್ಪಿನಿಂದ ಸಮಾಜ ವಿಜ್ಞಾನ ವಿಷಯದಲ್ಲಿ ಗೈರು ಎಂದು ದಾಖಲಾಗಿತ್ತು. ಇದರ ಪರಿಣಾಮವಾಗಿ 84.16% ಅಂಕ ಗಳಿಸಿದ್ದರೂ ಕೂಡ ಆಕೆಯ ಫಲಿತಾಂಶ ಫೇಲ್ ಎಂದು ಪ್ರಕಟವಾಗಿತ್ತು.
ಈ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆಗೆ ಕಾರಣವಾದ ಹಿನ್ನೆಲೆಯಲ್ಲಿ ಮರುಪರಿಶೀಲನೆ ನಡೆಸಲಾಗಿದ್ದು, ಈಗ ಲಭ್ಯವಾಗಿರುವ ಮಾಹಿತಿಯ ಪ್ರಕಾರ ಅದೇ ವಿಷಯದಲ್ಲಿ ಲೀಸಾಗೆ 97 ಅಂಕಗಳು ಬಂದಿದ್ದು, ಶಾಲೆಯ ಟಾಪರ್ ಆಗಿ ಹೊರಹೊಮ್ಮಿದ್ದಾಳೆ ಎನ್ನಲಾಗಿದೆ.
ಆದರೆ, ಈ ಬಗ್ಗೆ ಸ್ಪಷ್ಟನೆ ನೀಡಿರುವ ಶಿರಸಿ ಡಿಡಿಪಿಐ, ಪ್ರಸ್ತುತ ಹರಿದಾಡುತ್ತಿರುವ ಫಲಿತಾಂಶ ಅಧಿಕೃತ ಪ್ರತಿಯಲ್ಲ ಎಂದು ತಿಳಿಸಿದ್ದಾರೆ. ವಿದ್ಯಾರ್ಥಿನಿಯ ಪೇಪರ್ ಮಿಸ್ ಆಗಿರುವುದು ನಿಜವಾಗಿದ್ದು, ಅದರ ಪರಿಶೀಲನೆ ಇನ್ನೂ ಮುಂದುವರಿದಿದೆ. ಅಂತಿಮ ಅಧಿಕೃತ ಫಲಿತಾಂಶ ಪ್ರಕಟಿಸಲು ಇನ್ನೂ ಎರಡು ದಿನಗಳ ಕಾಲಾವಕಾಶ ಬೇಕು ಎಂದು ಹೇಳಿದ್ದಾರೆ.
ಈ ಬೆಳವಣಿಗೆಯಿಂದಾಗಿ ಪ್ರತಿಭಾವಂತ ಅಂಧ ವಿದ್ಯಾರ್ಥಿನಿಯ ಭವಿಷ್ಯ ಸದ್ಯ ಅತಂತ್ರ ಸ್ಥಿತಿಯಲ್ಲಿದ್ದು, ಪರೀಕ್ಷಾ ವ್ಯವಸ್ಥೆಯ ಮೇಲಿನ ವಿಶ್ವಾಸಕ್ಕೂ ಪ್ರಶ್ನೆ ಎದ್ದಿದೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm