ಬ್ರೇಕಿಂಗ್ ನ್ಯೂಸ್
24-04-26 10:52 pm HK News Staffer ಕರ್ನಾಟಕ
ಕಾರವಾರ, ಏಪ್ರಿಲ್ 24: ಪರೀಕ್ಷಾ ಪ್ರಾಧಿಕಾರದ ಎಡವಟ್ಟಿನಿಂದ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಫೇಲ್ ಆಗಿದ್ದ ಅಂಧ ವಿದ್ಯಾರ್ಥಿನಿ ಲೀಸಾ ಖಾನಮ್ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಗುರುವಾರ ಪ್ರಕಟವಾದ ಅಧಿಕೃತ ಫಲಿತಾಂಶದಲ್ಲಿ ಸಮಾಜ ವಿಜ್ಞಾನ ವಿಷಯದಲ್ಲಿ ‘ಗೈರು’ ಎಂದು ನಮೂದಾಗಿದ್ದ ಕಾರಣ ಲೀಸಾ ಫೇಲ್ ಎಂದು ತೋರಿಸಲಾಗಿತ್ತು. ಆದರೆ ಇಂದು ಹೊರಬಂದ ಮತ್ತೊಂದು ಫಲಿತಾಂಶದಲ್ಲಿ ಆಕೆ ಶಾಲೆಯ ಟಾಪರ್ ಎಂದು ಹೇಳಲಾಗುತ್ತಿದೆ.
ಶಿರಸಿಯ ಇಂದಿರಾ ನಗರದ ಯೂನಿಯನ್ ಉರ್ದು ಪ್ರೌಢಶಾಲೆಯ ವಿದ್ಯಾರ್ಥಿನಿಯಾಗಿರುವ ಲೀಸಾ ಖಾನಮ್, ಎಲ್ಲಾ ಪರೀಕ್ಷೆಗಳನ್ನು ಬರೆದಿದ್ದರೂ ಪರೀಕ್ಷಾ ಪ್ರಾಧಿಕಾರದ ತಪ್ಪಿನಿಂದ ಸಮಾಜ ವಿಜ್ಞಾನ ವಿಷಯದಲ್ಲಿ ಗೈರು ಎಂದು ದಾಖಲಾಗಿತ್ತು. ಇದರ ಪರಿಣಾಮವಾಗಿ 84.16% ಅಂಕ ಗಳಿಸಿದ್ದರೂ ಕೂಡ ಆಕೆಯ ಫಲಿತಾಂಶ ಫೇಲ್ ಎಂದು ಪ್ರಕಟವಾಗಿತ್ತು.
ಈ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆಗೆ ಕಾರಣವಾದ ಹಿನ್ನೆಲೆಯಲ್ಲಿ ಮರುಪರಿಶೀಲನೆ ನಡೆಸಲಾಗಿದ್ದು, ಈಗ ಲಭ್ಯವಾಗಿರುವ ಮಾಹಿತಿಯ ಪ್ರಕಾರ ಅದೇ ವಿಷಯದಲ್ಲಿ ಲೀಸಾಗೆ 97 ಅಂಕಗಳು ಬಂದಿದ್ದು, ಶಾಲೆಯ ಟಾಪರ್ ಆಗಿ ಹೊರಹೊಮ್ಮಿದ್ದಾಳೆ ಎನ್ನಲಾಗಿದೆ.
ಆದರೆ, ಈ ಬಗ್ಗೆ ಸ್ಪಷ್ಟನೆ ನೀಡಿರುವ ಶಿರಸಿ ಡಿಡಿಪಿಐ, ಪ್ರಸ್ತುತ ಹರಿದಾಡುತ್ತಿರುವ ಫಲಿತಾಂಶ ಅಧಿಕೃತ ಪ್ರತಿಯಲ್ಲ ಎಂದು ತಿಳಿಸಿದ್ದಾರೆ. ವಿದ್ಯಾರ್ಥಿನಿಯ ಪೇಪರ್ ಮಿಸ್ ಆಗಿರುವುದು ನಿಜವಾಗಿದ್ದು, ಅದರ ಪರಿಶೀಲನೆ ಇನ್ನೂ ಮುಂದುವರಿದಿದೆ. ಅಂತಿಮ ಅಧಿಕೃತ ಫಲಿತಾಂಶ ಪ್ರಕಟಿಸಲು ಇನ್ನೂ ಎರಡು ದಿನಗಳ ಕಾಲಾವಕಾಶ ಬೇಕು ಎಂದು ಹೇಳಿದ್ದಾರೆ.
ಈ ಬೆಳವಣಿಗೆಯಿಂದಾಗಿ ಪ್ರತಿಭಾವಂತ ಅಂಧ ವಿದ್ಯಾರ್ಥಿನಿಯ ಭವಿಷ್ಯ ಸದ್ಯ ಅತಂತ್ರ ಸ್ಥಿತಿಯಲ್ಲಿದ್ದು, ಪರೀಕ್ಷಾ ವ್ಯವಸ್ಥೆಯ ಮೇಲಿನ ವಿಶ್ವಾಸಕ್ಕೂ ಪ್ರಶ್ನೆ ಎದ್ದಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm