ಬ್ರೇಕಿಂಗ್ ನ್ಯೂಸ್
25-04-26 10:56 pm HK Staffer ಕರ್ನಾಟಕ
ಬೆಂಗಳೂರು, ಎಪ್ರಿಲ್ 25: ಬಿಎಂಟಿಸಿ ಬಸ್ ಚಾಲನೆ ಮಾಡುತ್ತಿದ್ದಾಗಲೇ ಚಾಲಕನಿಗೆ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ್ದು ಪರಿಹಾರ ನೀಡಬೇಕೆಂದು ಬಸ್ ಸಿಬಂದಿ ದಿಢೀರ್ ಪ್ರತಿಭಟನೆ ನಡೆಸಿದ ಘಟನೆ ಜಿಗಣಿ ಡಿಪೋದಲ್ಲಿ ನಡೆದಿದೆ.
32 ವರ್ಷದ ರಮೇಶ್ ಸಾವನ್ನಪ್ಪಿದ ಬಿಎಂಟಿಸಿ ಬಸ್ ಚಾಲಕನಾಗಿದ್ದು ಎದೆ ನೋವು ಬರುತ್ತಿದ್ದಾಗಲೇ ಬಸ್ಸನ್ನು ನಿಲ್ಲಿಸಿ ಕುಸಿದು ಬಿದ್ದಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದೆ. ಬಸ್ ಜಿಗಣಿಯಿಂದ ಬೊಮ್ಮಸಂದ್ರಕ್ಕೆ ಹೋಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ.
ಘಟನೆಯಿಂದ ಬೇಸತ್ತ ಬಿಎಂಟಿಸಿ ಜಿಗಣಿ ಡಿಪೋದ ಸಹೋದ್ಯೋಗಿಗಳು ಸಂಜೆಯಾಗುತ್ತಲೇ ಬಸ್ ಗಳನ್ನು ನಿಲ್ಲಿಸಿ ಪ್ರತಿಭಟನೆ ಮಾಡಿದ್ದಾರೆ. ಮೃತನ ಕುಟುಂಬಕ್ಕೆ ಕೂಡಲೇ ಸೂಕ್ತ ಪರಿಹಾರ ಘೋಷಣೆ ಮಾಡಬೇಕೆಂದು ಒತ್ತಾಯಿಸಿ ರಾತ್ರಿ ವರೆಗೂ ಧರಣಿ ನಡೆಸಿದ್ದಾರೆ. ಈ ಹಿಂದೆ ಒಬ್ಬ ಚಾಲಕ ಇದೇ ರೀತಿ ಮೃತಪಟ್ಟಿದ್ದು ಬಿಎಂಟಿಸಿ ಪರಿಹಾರ ಕೊಡಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಡಿಪೋ ಮ್ಯಾನೇಜರ್ ಕೌಸರ್ ಬಾನು ಮೇಲೆ ಆಕ್ರೋಶ ತಿರುಗಿದ್ದು ಕಳೆದ ಬಾರಿ ಇದೇ ರೀತಿ ಮಲ್ಲಿಕಾರ್ಜುನ ಎಂಬಾತ ಸಾವನ್ನಪ್ಪಿದ್ದರು. ಆದರೆ ಅವರ ಕುಟುಂಬಕ್ಕೆ ಕನಿಷ್ಠ ಇನ್ಶುರೆನ್ಸ್ ಸಹ ಬಂದಿಲ್ಲ. ಇದೀಗ ರಮೇಶ್ ಕುಟುಂಬಕ್ಕು ಅದೇ ರೀತಿ ಅನ್ಯಾಯವಾಗುವ ಸಾಧ್ಯತೆ ಇದೆ. ಕೂಡಲೇ ಪರಿಹಾರ ಘೋಷಣೆ ಮಾಡಿ ಅವರಿಗೆ ನ್ಯಾಯ ಕೊಡಿಸುವಂತೆ ಸಿಬಂದಿ ಒತ್ತಾಯಿಸಿದ್ದಾರೆ. ಆದರೆ ಪ್ರತಿಭಟನೆ ನಡೆಸಿ ನ್ಯಾಯ ಕೇಳಿದ್ದಕ್ಕೆ ಸಿಬ್ಬಂದಿಗೆ ಗೇಸ್ ಪಾಸ್ ನೀಡಲು ಕೌಸರ್ ಬಾನು ಪ್ಲಾನ್ ಮಾಡಿದ್ದಾರೆಂಬ ಭಾವನೆಯಲ್ಲಿ ರಾತ್ರಿ ವರೆಗೂ ಧಿಕ್ಕಾರ ಕೂಗುತ್ತಾ ಧರಣಿ ನಡೆಸಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm