ಬ್ರೇಕಿಂಗ್ ನ್ಯೂಸ್
29-04-26 10:36 am HK News Staffer ಕರ್ನಾಟಕ
ಬೆಂಗಳೂರು, ಎಪ್ರಿಲ್ 29: ಐದು ರಾಜ್ಯಗಳ ಚುನಾವಣೆ ಫಲಿತಾಂಶ ಬಂದ ಬಳಿಕ ರಾಜ್ಯದಲ್ಲಿ ನಾಯಕತ್ವ ಬದಲಾಗಲಿದೆ, ಸಿಎಂ ಬದಲಾಗುತ್ತಾರೆ ಎಂಬ ವದಂತಿ ಹರಡಿರುವಾಗಲೇ ಮತ್ತೊಂದು ವಾದವೂ ಹರಡಿದೆ. ಮೇ- ಜೂನ್ ವೇಳೆಗೆ ರಾಜ್ಯಸಭೆ ಚುನಾವಣೆಯಿದ್ದು ಹೈಕಮಾಂಡ್ ಡಿಕೆಶಿಗೆ ಮತ್ತೆ ಕಾರಣ ಕೊಟ್ಟು ಅಧಿಕಾರ ಹಸ್ತಾಂತರ ಮುಂದಕ್ಕೆ ಹಾಕಲಿದೆ ಎಂದು ಸುದ್ದಿ ಹಬ್ಬಿದೆ.
ಅಸೆಂಬ್ಲಿ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಸಂಪುಟ ಪುನರ್ರಚನೆ ಮತ್ತು ನಾಯಕತ್ವ ಬದಲಾವಣೆಗೆ ಕಾಂಗ್ರೆಸ್ ಹೈಕಮಾಂಡ್ ಅನುಮೋದನೆ ನೀಡಲಿದೆ ಎಂದು ಹೇಳಲಾಗುತ್ತಿದ್ದರೂ ಮೇ, ಜೂನ್ನಲ್ಲಿ ಕರ್ನಾಟಕದ ನಾಲ್ಕು ರಾಜ್ಯಸಭೆ ಮತ್ತು ಏಳು ಪರಿಷತ್ ಸ್ಥಾನಗಳಿಗೆ ಚುನಾವಣೆ ಇರುವುದರಿಂದ ಹೈಕಮಾಂಡ್ ನಾಯಕತ್ವ ಬದಲಾವಣೆ ವಿಚಾರವನ್ನು ಮತ್ತಷ್ಟು ಮುಂದೂಡಬಹುದು ಎಂದು ಮೂಲಗಳು ತಿಳಿಸಿವೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ನಾಲ್ಕು ರಾಜ್ಯಸಭಾ ಸದಸ್ಯರ ಅವಧಿ ಜೂನ್ 25ರಂದು ಕೊನೆಗೊಳ್ಳಲಿದ್ದು, ದ್ವೈವಾರ್ಷಿಕ ಚುನಾವಣೆಗೆ ಜೂನ್ ಮೊದಲ ವಾರದಲ್ಲಿ ಅಧಿಸೂಚನೆ ಪ್ರಕಟಿಸುವ ಸಾಧ್ಯತೆಯಿದೆ. ಕಾಂಗ್ರೆಸ್ ನಾಲ್ಕು ಸ್ಥಾನಗಳಲ್ಲಿ ಮೂರು ಸ್ಥಾನಗಳನ್ನು ಗೆಲ್ಲಬಹುದಾದ್ದರಿಂದ ಈ ಚುನಾವಣೆ ನಿರ್ಣಾಯಕ ಎಂದು ಹಿರಿಯ ಕಾಂಗ್ರೆಸ್ ನಾಯಕರೊಬ್ಬರು ಹೇಳಿದ್ದಾರೆ.
ಪರಿಷತ್ತಿನ ಕಾಂಗ್ರೆಸ್ ಮುಖ್ಯ ಸಚೇತಕ, ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ ಸಲೀಂ ಅಹ್ಮದ್, ಮೇ 20ರ ಮೊದಲು ಸಚಿವ ಸಂಪುಟ ಪುನರ್ರಚನೆ ಮಾಡಲಾಗುವುದು ಎಂದು ಹೇಳಿದರೆ, ಕಲಬುರಗಿಯಲ್ಲಿ ಸಚಿವ ಸ್ಥಾನದ ಆಕಾಂಕ್ಷಿಯೂ ಆಗಿರುವ ಜೇವರ್ಗಿ ಶಾಸಕ ಅಜಯ್ ಸಿಂಗ್ ಜೂನ್ನಲ್ಲಿ ಪುನರ್ರಚನೆ ಆಗಬಹುದು ಎಂದು ಹೇಳಿದ್ದಾರೆ. ಡಿಕೆಶಿ ಸಂಬಂಧಿಯೂ ಆಗಿರುವ ಕುಣಿಗಲ್ ಶಾಸಕ ಎಚ್.ಡಿ ರಂಗನಾಥ್, ಹೈಕಮಾಂಡ್ ಮೇ 15ರಂದು ಡಿಕೆ ಶಿವಕುಮಾರ್ ಜನ್ಮದಿನದಂದು ಶುಭಸುದ್ದಿ ನೀಡಲಿದೆ ಎಂದು ಹೇಳಿದ್ದಾರೆ. ಆದರೆ ಹೈಕಮಾಂಡ್ ಸೇಫ್ ಝೋನ್ ಆಟವನ್ನೇ ನೆಚ್ಚಿಕೊಳ್ಳುವ ಸಾಧ್ಯತೆ ಹೆಚ್ಚಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm