ಬ್ರೇಕಿಂಗ್ ನ್ಯೂಸ್
01-05-26 08:33 pm HK News Staffer ಕರ್ನಾಟಕ
ಬೆಂಗಳೂರು, ಮೇ 01: ಮಲ್ಲಿಕಾರ್ಜುನ ಖರ್ಗೆ ಅವರು ಬದಲಾವಣೆ ಇಲ್ಲ ಎಂದಿರುವಾಗ ಎಲ್ಲ ಫುಲ್ ಸ್ಟಾಪ್ ಅಂತ ಅರ್ಥ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.
ಸದಾಶಿವನಗರದ ನಿವಾಸದ ಬಳಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಬದಲಾವಣೆ ಇಲ್ಲ ಎಂಬ ಖರ್ಗೆ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಖರ್ಗೆಯವರು ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು. ಅಪಾರವಾದ ಅನುಭವ ಇರುವವರು. ರಾಜ್ಯಕ್ಕೆ ಬದಲಾವಣೆ ಆಗೋದಾದ್ರೆ, ಅವರು ಬಂದರೆ ಅವರ ಅನುಭವದ ಮುಂದೆ ಮಾತಾಡೋಕೆ ಆಗಲ್ಲ. ಸದ್ಯಕ್ಕೆ ಸಿಎಂ ಇದ್ದಾರೆ, ಮತ್ತೆ ಬದಲಾವಣೆ ಮಾಡುವ ಪ್ರಶ್ನೆ ಈಗಂತೂ ಸದ್ಯಕ್ಕೆ ಇಲ್ಲ ಎಂದು ಖರ್ಗೆ ಹೇಳಿದ್ದಾರೆ ಎಂದು ತಿಳಿಸಿದರು.
ಇದನ್ನು ನಾನು ಸ್ವಾಗತ ಮಾಡುತ್ತೇನೆ. ಅವರು ಹೇಳಿದ ಮೇಲೆ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ವೇಣುಗೋಪಾಲ್, ಸುರ್ಜೆವಾಲ ಎಲ್ಲರೂ ಕುಳಿತು ಮಾತನಾಡಿ ಅಭಿಪ್ರಾಯ ಬಂದಿರುತ್ತೆ ಎಂಬುದು ನನ್ನ ಭಾವನೆ. ಅವರ ಮಾತಿಗೆ ಬಹಳ ಪ್ರಾಮುಖ್ಯತೆ ಇರುತ್ತದೆ.
ಮಲ್ಲಿಕಾರ್ಜುನ ಖರ್ಗೆ ಹೇಳಿಕೆಯ ನಡುವೆಯೂ ಗೊಂದಲ ವಿಚಾರವಾಗಿ ಮಾತನಾಡಿ, ಬೇರೆ ಬೇರೆಯವರು ಹೇಳುತ್ತಾರೆ, ನಮ್ಮ ಅಭಿಪ್ರಾಯದಲ್ಲಿ ಖರ್ಗೆ ಅವರು ಸುಪ್ರೀಂ ಅಥಾರಿಟಿ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಹೈಕಮಾಂಡ್ ಅವರ ಬಾಯಿಂದ ಮಾತು ಬರುತ್ತದೆ ಎಂದರೆ ಅದನ್ನು ಒಪ್ಪಿಕೊಳ್ಳಬೇಕು. ಅಲ್ಲಿಗೆ ಅಧ್ಯಾಯ ಮುಗಿಯಿತು. ಹೆಚ್ಚು ವ್ಯಾಖ್ಯಾನ ಮಾಡುವುದರಲ್ಲಿ ಅರ್ಥ ಇಲ್ಲ ಎಂದು ಪ್ರತಿಕ್ರಿಯೆ ನೀಡಿದರು.
ಪಂಚರಾಜ್ಯದ ಸಮೀಕ್ಷೆ ವಿಚಾರವಾಗಿ ಮಾತನಾಡಿ, ಸಮೀಕ್ಷೆ ಒಂದೊಂದು ಬಾರಿ ಹೇಗಾಗುತ್ತೆ ಅಂತ ನೋಡಿದ್ದೇವೆ. ಗ್ರೌಂಡ್ ರಿಯಾಲಿಟಿಯನ್ನು ನೋಡಿದ್ದೇವೆ. ಕೇರಳದಲ್ಲಿ ನಮ್ಮ ಸರ್ಕಾರ ಬರುತ್ತದೆ ಅಂತ ಆಶಾವಾದಿಗಳಾಗಿದ್ದೇವೆ. ರಾಜ್ಯದ ಹಲವರು ಅಲ್ಲಿನ ಚುನಾವಣೆಯಲ್ಲಿ ಕೆಲಸ ಮಾಡಿದ್ದರು. ನಾವು ಬರುತ್ತೇವೆ ಎಂದು ವರದಿ ಇದೆ. ಬಂಗಾಳದಲ್ಲಿ ನಡೆದಿರೋ ಘಟನೆ ನೋಡಿದ್ರೆ, ಚುನಾವಣಾ ಆಯೋಗ ಯಾವ ರೀತಿ ಕೆಲಸ ಮಾಡಿದೆ ಎಂದು ನೋಡಿದ್ದೇವೆ. ಅಲ್ಲಿ ಹೋಗಿ ಬಂದ ಅಬ್ಸರ್ವರ್ಗಳನ್ನು ಮಾತಾಡಿಸಿದೆ. ಮೇಡಂ ಅವರಿಗೆ ಬರುವ ಅವಕಾಶ ಇದೆ ಎಂದಿದ್ದಾರೆ. ಕೆಲವು ಮಿಶ್ರ ಪ್ರತಿಕ್ರಿಯೆ ಇದೆ ಎಂದು ಹೇಳಿದ್ದಾರೆ. ತಮಿಳುನಾಡಿನಲ್ಲಿ ಡಿಎಂಕೆ ಬರುತ್ತದೆ ಎಂದಿದ್ದಾರೆ. ಅಸ್ಸಾಂನಲ್ಲಿನ ಸಮೀಕ್ಷೆ ಬಿಜೆಪಿ ಬರುತ್ತದೆ ಎಂದಿದೆ ಎಂದು ತಿಳಿಸಿದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm