ಬ್ರೇಕಿಂಗ್ ನ್ಯೂಸ್
01-05-26 08:33 pm HK News Staffer ಕರ್ನಾಟಕ
ಬೆಂಗಳೂರು, ಮೇ 01: ಮಲ್ಲಿಕಾರ್ಜುನ ಖರ್ಗೆ ಅವರು ಬದಲಾವಣೆ ಇಲ್ಲ ಎಂದಿರುವಾಗ ಎಲ್ಲ ಫುಲ್ ಸ್ಟಾಪ್ ಅಂತ ಅರ್ಥ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.
ಸದಾಶಿವನಗರದ ನಿವಾಸದ ಬಳಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಬದಲಾವಣೆ ಇಲ್ಲ ಎಂಬ ಖರ್ಗೆ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಖರ್ಗೆಯವರು ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು. ಅಪಾರವಾದ ಅನುಭವ ಇರುವವರು. ರಾಜ್ಯಕ್ಕೆ ಬದಲಾವಣೆ ಆಗೋದಾದ್ರೆ, ಅವರು ಬಂದರೆ ಅವರ ಅನುಭವದ ಮುಂದೆ ಮಾತಾಡೋಕೆ ಆಗಲ್ಲ. ಸದ್ಯಕ್ಕೆ ಸಿಎಂ ಇದ್ದಾರೆ, ಮತ್ತೆ ಬದಲಾವಣೆ ಮಾಡುವ ಪ್ರಶ್ನೆ ಈಗಂತೂ ಸದ್ಯಕ್ಕೆ ಇಲ್ಲ ಎಂದು ಖರ್ಗೆ ಹೇಳಿದ್ದಾರೆ ಎಂದು ತಿಳಿಸಿದರು.
ಇದನ್ನು ನಾನು ಸ್ವಾಗತ ಮಾಡುತ್ತೇನೆ. ಅವರು ಹೇಳಿದ ಮೇಲೆ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ವೇಣುಗೋಪಾಲ್, ಸುರ್ಜೆವಾಲ ಎಲ್ಲರೂ ಕುಳಿತು ಮಾತನಾಡಿ ಅಭಿಪ್ರಾಯ ಬಂದಿರುತ್ತೆ ಎಂಬುದು ನನ್ನ ಭಾವನೆ. ಅವರ ಮಾತಿಗೆ ಬಹಳ ಪ್ರಾಮುಖ್ಯತೆ ಇರುತ್ತದೆ.
ಮಲ್ಲಿಕಾರ್ಜುನ ಖರ್ಗೆ ಹೇಳಿಕೆಯ ನಡುವೆಯೂ ಗೊಂದಲ ವಿಚಾರವಾಗಿ ಮಾತನಾಡಿ, ಬೇರೆ ಬೇರೆಯವರು ಹೇಳುತ್ತಾರೆ, ನಮ್ಮ ಅಭಿಪ್ರಾಯದಲ್ಲಿ ಖರ್ಗೆ ಅವರು ಸುಪ್ರೀಂ ಅಥಾರಿಟಿ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಹೈಕಮಾಂಡ್ ಅವರ ಬಾಯಿಂದ ಮಾತು ಬರುತ್ತದೆ ಎಂದರೆ ಅದನ್ನು ಒಪ್ಪಿಕೊಳ್ಳಬೇಕು. ಅಲ್ಲಿಗೆ ಅಧ್ಯಾಯ ಮುಗಿಯಿತು. ಹೆಚ್ಚು ವ್ಯಾಖ್ಯಾನ ಮಾಡುವುದರಲ್ಲಿ ಅರ್ಥ ಇಲ್ಲ ಎಂದು ಪ್ರತಿಕ್ರಿಯೆ ನೀಡಿದರು.
ಪಂಚರಾಜ್ಯದ ಸಮೀಕ್ಷೆ ವಿಚಾರವಾಗಿ ಮಾತನಾಡಿ, ಸಮೀಕ್ಷೆ ಒಂದೊಂದು ಬಾರಿ ಹೇಗಾಗುತ್ತೆ ಅಂತ ನೋಡಿದ್ದೇವೆ. ಗ್ರೌಂಡ್ ರಿಯಾಲಿಟಿಯನ್ನು ನೋಡಿದ್ದೇವೆ. ಕೇರಳದಲ್ಲಿ ನಮ್ಮ ಸರ್ಕಾರ ಬರುತ್ತದೆ ಅಂತ ಆಶಾವಾದಿಗಳಾಗಿದ್ದೇವೆ. ರಾಜ್ಯದ ಹಲವರು ಅಲ್ಲಿನ ಚುನಾವಣೆಯಲ್ಲಿ ಕೆಲಸ ಮಾಡಿದ್ದರು. ನಾವು ಬರುತ್ತೇವೆ ಎಂದು ವರದಿ ಇದೆ. ಬಂಗಾಳದಲ್ಲಿ ನಡೆದಿರೋ ಘಟನೆ ನೋಡಿದ್ರೆ, ಚುನಾವಣಾ ಆಯೋಗ ಯಾವ ರೀತಿ ಕೆಲಸ ಮಾಡಿದೆ ಎಂದು ನೋಡಿದ್ದೇವೆ. ಅಲ್ಲಿ ಹೋಗಿ ಬಂದ ಅಬ್ಸರ್ವರ್ಗಳನ್ನು ಮಾತಾಡಿಸಿದೆ. ಮೇಡಂ ಅವರಿಗೆ ಬರುವ ಅವಕಾಶ ಇದೆ ಎಂದಿದ್ದಾರೆ. ಕೆಲವು ಮಿಶ್ರ ಪ್ರತಿಕ್ರಿಯೆ ಇದೆ ಎಂದು ಹೇಳಿದ್ದಾರೆ. ತಮಿಳುನಾಡಿನಲ್ಲಿ ಡಿಎಂಕೆ ಬರುತ್ತದೆ ಎಂದಿದ್ದಾರೆ. ಅಸ್ಸಾಂನಲ್ಲಿನ ಸಮೀಕ್ಷೆ ಬಿಜೆಪಿ ಬರುತ್ತದೆ ಎಂದಿದೆ ಎಂದು ತಿಳಿಸಿದರು.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am