ಬ್ರೇಕಿಂಗ್ ನ್ಯೂಸ್
03-05-26 12:34 pm HK News Staffer ಕರ್ನಾಟಕ
ಚಿಕ್ಕಮಗಳೂರು, ಮೇ 3: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಗೆ ಸಂಬಂಧಿಸಿದಂತೆ ರಾತ್ರಿಯಿಡೀ ಹೈಡ್ರಾಮಾ ನಡೆದಿದ್ದು, ಭಾರೀ ತಿರುವು ಪಡೆದುಕೊಂಡಿದೆ. ಹೈಕೋರ್ಟ್ ಆದೇಶದಂತೆ ನಡೆದ ಅಂಚೆ ಮತಗಳ ಮರು ಎಣಿಕೆಯಲ್ಲಿ ನಿನ್ನೆ ಸಂಜೆ ಗೆಲುವು ಎಂದು ಘೋಷಿಸಲ್ಪಟ್ಟಿದ್ದ ಹಾಲಿ ಶಾಸಕ ಕಾಂಗ್ರೆಸಿನ ಟಿ.ಡಿ. ರಾಜೇಗೌಡ ಅವರಿಗೆ ಹಿನ್ನಡೆಯಾಗಿದೆ.
ಅಂಚೆ ಮತಗಳ ಮರು ಎಣಿಕೆಯಲ್ಲಿ ನಿನ್ನೆ ಸಾಯಂಕಾಲ ಟಿ.ಡಿ ರಾಜೇಗೌಡ ವಿಜಯ ಸಾಧಿಸಿದರು ಎಂದು ಹೇಳಲಾಗಿತ್ತು. ಆದರೆ ಮತ ಎಣಿಕೆಯಲ್ಲಿ ಭಾರೀ ಗೊಂದಲ ಉಂಟಾಗಿದ್ದರಿಂದ ನಿನ್ನೆ ಬೆಳಗ್ಗೆ ಆರಂಭವಾದ ಮತ ಎಣಿಕೆ ಮಧ್ಯರಾತ್ರಿಯ ವರೆಗೂ ನಡೆಯಿತು. ಇಂದು ಬೆಳಗ್ಗೆ ಎಲ್ಲ ಗೊಂದಲಗಳಿಗೆ ಮಹತ್ವದ ತಿರುವು ಸಿಕ್ಕಿದೆ. 2023ರ ಮೇ 13 ರಂದು ನಡೆದಿದ್ದ ಮತ ಎಣಿಕೆ ವೇಳೆ ಸಿಂಧು ಎಂದು ಪರಿಗಣಿಸಲಾಗಿದ್ದ ಮತಗಳು, ಈಗ ಮರು ಎಣಿಕೆ ವೇಳೆ ತಿರಸ್ಕೃತಗೊಂಡಿವೆ.
ಮತ ಎಣಿಕೆ ಪತ್ರದಲ್ಲಿ ರಾಜೇಗೌಡ ಮತ್ತು ಮತ್ತೊಬ್ಬ ಅಭ್ಯರ್ಥಿ ಇಬ್ಬರಿಗೂ ‘ಡಬ್ಬಲ್ ಟಿಕ್’ ಮಾಡಿರುವುದು ಕಂಡುಬಂದ ಹಿನ್ನೆಲೆಯಲ್ಲಿ 258 ಮತಗಳು ತಿರಸ್ಕೃತಗೊಂಡವು. ಈ ಹಿಂದೆ 569 ಅಂಚೆ ಮತಗಳನ್ನು ಪಡೆದಿದ್ದ ರಾಜೇಗೌಡರ ಪಟ್ಟಿಯಿಂದ 255 ಮತಗಳು ಮರು ಎಣಿಕೆ ವೇಳೆ ಕಡಿತಗೊಂಡವು. ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರಿಗೆ ಬಂದಿದ್ದ 692 ಅಂಚೆ ಮತಗಳಲ್ಲಿ ಕೇವಲ 2 ಮತಗಳು ಮಾತ್ರ ತಿರಸ್ಕೃತಗೊಂಡಿವೆ.
ಹೀಗಾಗಿ ಮರು ಎಣಿಕೆಯಲ್ಲಿ ರಾಜೇಗೌಡರ 255 ಅಂಚೆ ಮತಗಳು ಕಡಿತಗೊಂಡಿದ್ದರಿಂದ ತನಗೆ ಬಹುಮತ ಬಂದಿದೆ ಎಂದು ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ವಿಶ್ವಾಸ ವ್ಯಕ್ತಪಡಿಸಿದ್ದು ಚುನಾವಣಾ ಆಯೋಗ ಅಧಿಕೃತವಾಗಿ ಘೋಷಣೆ ಮಾಡುವುದು ಬಾಕಿ ಇದೆ. ಮರು ಎಣಿಕೆಯಲ್ಲಿ ಇಷ್ಟೊಂದು ದೊಡ್ಡ ಮಟ್ಟದ ವ್ಯತ್ಯಾಸ ಕಂಡುಬಂದ ಬೆನ್ನಲ್ಲೇ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಶಾಸಕ ರಾಜೇಗೌಡ ಅವರು ನಸುಕಿನ ಜಾವ 4 ಗಂಟೆಯ ವರೆಗೂ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಬೀಡುಬಿಟ್ಟಿದ್ದರು.
ಇದೇ ವೇಳೆ, ಕಾಂಗ್ರೆಸ್ ಮುಖಂಡ ಸುಧೀರ್ ಕುಮಾರ್ ಮುರೋಳಿ ಅವರು ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಮತ್ತು ಅಂದಿನ ಚುನಾವಣಾಧಿಕಾರಿ ವೇದಮೂರ್ತಿ ವಿರುದ್ಧ ಮತಗಳ ತಿದ್ದುಪಡಿ ಮಾಡಲಾಗಿದೆ ಎಂದು ದೂರು ನೀಡಿದ್ದಾರೆ. ರಾಜೇಗೌಡರ ಮತಪತ್ರಗಳಲ್ಲಿ ‘ಡಬ್ಬಲ್ ಟಿಕ್’ ಮಾಡಿ ಉದ್ದೇಶಪೂರ್ವಕ ತಿರಸ್ಕೃತ ಆಗುವಂತೆ ಮಾಡಲಾಗಿದೆ ಎಂದು ಕಾಂಗ್ರೆಸ್ ಆರೋಪ ಮಾಡುತ್ತಿದೆ. ಹೈಕೋರ್ಟ್ ಆದೇಶದಂತೆ ಮರು ಎಣಿಕೆ ಮಾಡಿದ್ದೇವೆ. ಹ್ಯಾಂಡ್ ಬುಕ್ ನಿಯಮಗಳ ಪ್ರಕಾರ ಸಿಂಧು ಮತ್ತು ಅಸಿಂಧು ಮತಗಳನ್ನು ನಿರ್ಧರಿಸಲಾಗಿದೆ. ವರದಿಯನ್ನು ಈಗ ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗಿದೆ ಎಂದು ಚುನಾವಣಾ ಅಧಿಕಾರಿ ತಿಳಿಸಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm