ಬ್ರೇಕಿಂಗ್ ನ್ಯೂಸ್
04-05-26 06:27 pm HK News Staffer ಕರ್ನಾಟಕ
ಕಾಸರಗೋಡು, ಮೇ 4: ಭಾರೀ ಪೈಪೋಟಿ ನಿರೀಕ್ಷಿಸಿದ್ದ ಮಂಜೇಶ್ವರ ಕ್ಷೇತ್ರದಲ್ಲಿ ಮುಸ್ಲಿಂ ಲೀಗ್ ಅಭ್ಯರ್ಥಿ ಎಕೆಎಂ ಅಶ್ರಫ್ ಎರಡನೇ ಬಾರಿಗೆ ಭಾರೀ ಅಂತರದ ಜಯ ಸಾಧಿಸಿದ್ದಾರೆ. ಕ್ಷೇತ್ರದಲ್ಲಿ ಮುಸ್ಲಿಂ ಮತಗಳ ಧ್ರುವೀಕರಣದಿಂದಾಗಿ ಅಶ್ರಫ್ ಅವರು 29252 ಮತಗಳ ಅಂತರದಿಂದ ಜಯಭೇರಿ ಸಾಧಿಸಿದ್ದಾರೆ.
ನಿಕಟ ಪ್ರತಿಸ್ಪರ್ಧಿಯಾಗಿದ್ದ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ 67696 ಮತಗಳನ್ನು ಪಡೆದಿದ್ದರೆ, ಸಿಪಿಎಂ ಪಕ್ಷದ ಕೆ.ಆರ್ ಜಯಾನಂದ್ ಕೇವಲ 21212 ಮತಗಳನ್ನು ಪಡೆದು ಹೀನಾಯ ಸೋಲನುಭವಿಸಿದ್ದಾರೆ. ಉಳಿದಂತೆ, ಪಕ್ಷೇತರ ಸ್ಪರ್ಧಿಸಿದ್ದ ಜೀನ್ ಲವಿನಾ ಮೊಂತೇರೊ 523, ಕಣ್ಣೂರು ಅಬ್ದಲ್ಲ ಮಾಸ್ಟರ್ 283, ಬಿಎಸ್ಪಿಯಿಂದ ಸ್ಪರ್ಧಿಸಿದ್ದ ಸಂಜೀವ 213 ಮತ ಪಡೆದಿದ್ದಾರೆ.

ಈ ಹಿಂದೆ ಮಂಜೇಶ್ವರದಲ್ಲಿ ಎರಡು ಬಾರಿ ಬಿಜೆಪಿಯ ಸುರೇಂದ್ರನ್ ಅತಿ ಕಡಿಮೆ ಅಂತರದಿಂದ ಸೋಲು ಕಂಡಿದ್ದರಿಂದ ಈ ಬಾರಿ ಗೆಲುವಿನ ಭರವಸೆ ಹುಟ್ಟಿಸಿದ್ದರು. ಇದಕ್ಕಾಗಿ ಬಿಜೆಪಿಯಿಂದ ಭಾರೀ ಶ್ರಮ ಹಾಕಲಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕರು, ಪಕ್ಷದ ಮುಖಂಡರು ತಿಂಗಳ ಕಾಲ ಪ್ರಚಾರದಲ್ಲಿ ತೊಡಗಿದ್ದರು. 2016ರಲ್ಲಿ 89 ಮತಗಳಿಂದ ಸೋತಿದ್ದರೆ, 2021ರಲ್ಲಿ ಸುರೇಂದ್ರನ್ 645 ಮತಗಳ ಅಂತರದಿಂದ ಸೋಲು ಕಂಡಿದ್ದರು.
ಈ ಬಾರಿ ಮತ ಪರಿಷ್ಕರಣೆ ಬಳಿಕ ನಡೆದ ಚುನಾವಣೆಯಲ್ಲಿ ಕೇರಳದಲ್ಲಿ ಮಂಜೇಶ್ವರ, ಕಾಸರಗೋಡು, ತಿರುವನಂತಪುರಂ, ಪಾಲಕ್ಕಾಡ್ ಸೇರಿ ಎಂಟು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವಿನ ಭರವಸೆ ಹುಟ್ಟಿಸಿತ್ತು. ಆದರೆ ನಿರೀಕ್ಷಿತ ಫಲಿತಾಂಶ ಸಿಗಲಿಲ್ಲ. ಮಂಜೇಶ್ವರ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರೇ ದಿಗಿಲಾಗುವಂತೆ ಮತ ಗಳಿಕೆ ಪ್ರಮಾಣವೇ ಭಾರೀ ಕಡಿಮೆಯಾಗಿದೆ. ಕಮ್ಯುನಿಸ್ಟ್ ಪಕ್ಷಕ್ಕೆ ಬೀಳುತ್ತಿದ್ದ ಮತಗಳೇ ಖೋತಾ ಆಗಿದ್ದು ಈವರೆಗಿನ ಇತಿಹಾಸದಲ್ಲಿ ಅತಿ ಕಡಿಮೆ ಮತಗಳನ್ನು ಗಳಿಸಲಷ್ಟೆ ಎಡರಂಗ ಶಕ್ತವಾಗಿದೆ. ಬಿಜೆಪಿಗೂ ಸಾಂಪ್ರದಾಯಿಕ ಮತಗಳಷ್ಟೇ ಬಿದ್ದಿದ್ದು ಹೆಚ್ಚುವರಿ ಸಾಧನೆಯಾಗದಿರುವುದು ಕಂಡುಬಂದಿದೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm