ಬ್ರೇಕಿಂಗ್ ನ್ಯೂಸ್
04-05-26 06:27 pm HK News Staffer ಕರ್ನಾಟಕ
ಕಾಸರಗೋಡು, ಮೇ 4: ಭಾರೀ ಪೈಪೋಟಿ ನಿರೀಕ್ಷಿಸಿದ್ದ ಮಂಜೇಶ್ವರ ಕ್ಷೇತ್ರದಲ್ಲಿ ಮುಸ್ಲಿಂ ಲೀಗ್ ಅಭ್ಯರ್ಥಿ ಎಕೆಎಂ ಅಶ್ರಫ್ ಎರಡನೇ ಬಾರಿಗೆ ಭಾರೀ ಅಂತರದ ಜಯ ಸಾಧಿಸಿದ್ದಾರೆ. ಕ್ಷೇತ್ರದಲ್ಲಿ ಮುಸ್ಲಿಂ ಮತಗಳ ಧ್ರುವೀಕರಣದಿಂದಾಗಿ ಅಶ್ರಫ್ ಅವರು 29252 ಮತಗಳ ಅಂತರದಿಂದ ಜಯಭೇರಿ ಸಾಧಿಸಿದ್ದಾರೆ.
ನಿಕಟ ಪ್ರತಿಸ್ಪರ್ಧಿಯಾಗಿದ್ದ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ 67696 ಮತಗಳನ್ನು ಪಡೆದಿದ್ದರೆ, ಸಿಪಿಎಂ ಪಕ್ಷದ ಕೆ.ಆರ್ ಜಯಾನಂದ್ ಕೇವಲ 21212 ಮತಗಳನ್ನು ಪಡೆದು ಹೀನಾಯ ಸೋಲನುಭವಿಸಿದ್ದಾರೆ. ಉಳಿದಂತೆ, ಪಕ್ಷೇತರ ಸ್ಪರ್ಧಿಸಿದ್ದ ಜೀನ್ ಲವಿನಾ ಮೊಂತೇರೊ 523, ಕಣ್ಣೂರು ಅಬ್ದಲ್ಲ ಮಾಸ್ಟರ್ 283, ಬಿಎಸ್ಪಿಯಿಂದ ಸ್ಪರ್ಧಿಸಿದ್ದ ಸಂಜೀವ 213 ಮತ ಪಡೆದಿದ್ದಾರೆ.

ಈ ಹಿಂದೆ ಮಂಜೇಶ್ವರದಲ್ಲಿ ಎರಡು ಬಾರಿ ಬಿಜೆಪಿಯ ಸುರೇಂದ್ರನ್ ಅತಿ ಕಡಿಮೆ ಅಂತರದಿಂದ ಸೋಲು ಕಂಡಿದ್ದರಿಂದ ಈ ಬಾರಿ ಗೆಲುವಿನ ಭರವಸೆ ಹುಟ್ಟಿಸಿದ್ದರು. ಇದಕ್ಕಾಗಿ ಬಿಜೆಪಿಯಿಂದ ಭಾರೀ ಶ್ರಮ ಹಾಕಲಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕರು, ಪಕ್ಷದ ಮುಖಂಡರು ತಿಂಗಳ ಕಾಲ ಪ್ರಚಾರದಲ್ಲಿ ತೊಡಗಿದ್ದರು. 2016ರಲ್ಲಿ 89 ಮತಗಳಿಂದ ಸೋತಿದ್ದರೆ, 2021ರಲ್ಲಿ ಸುರೇಂದ್ರನ್ 645 ಮತಗಳ ಅಂತರದಿಂದ ಸೋಲು ಕಂಡಿದ್ದರು.
ಈ ಬಾರಿ ಮತ ಪರಿಷ್ಕರಣೆ ಬಳಿಕ ನಡೆದ ಚುನಾವಣೆಯಲ್ಲಿ ಕೇರಳದಲ್ಲಿ ಮಂಜೇಶ್ವರ, ಕಾಸರಗೋಡು, ತಿರುವನಂತಪುರಂ, ಪಾಲಕ್ಕಾಡ್ ಸೇರಿ ಎಂಟು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವಿನ ಭರವಸೆ ಹುಟ್ಟಿಸಿತ್ತು. ಆದರೆ ನಿರೀಕ್ಷಿತ ಫಲಿತಾಂಶ ಸಿಗಲಿಲ್ಲ. ಮಂಜೇಶ್ವರ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರೇ ದಿಗಿಲಾಗುವಂತೆ ಮತ ಗಳಿಕೆ ಪ್ರಮಾಣವೇ ಭಾರೀ ಕಡಿಮೆಯಾಗಿದೆ. ಕಮ್ಯುನಿಸ್ಟ್ ಪಕ್ಷಕ್ಕೆ ಬೀಳುತ್ತಿದ್ದ ಮತಗಳೇ ಖೋತಾ ಆಗಿದ್ದು ಈವರೆಗಿನ ಇತಿಹಾಸದಲ್ಲಿ ಅತಿ ಕಡಿಮೆ ಮತಗಳನ್ನು ಗಳಿಸಲಷ್ಟೆ ಎಡರಂಗ ಶಕ್ತವಾಗಿದೆ. ಬಿಜೆಪಿಗೂ ಸಾಂಪ್ರದಾಯಿಕ ಮತಗಳಷ್ಟೇ ಬಿದ್ದಿದ್ದು ಹೆಚ್ಚುವರಿ ಸಾಧನೆಯಾಗದಿರುವುದು ಕಂಡುಬಂದಿದೆ.
04-05-26 07:16 pm
HK News Staffer
ಮಂಜೇಶ್ವರದಲ್ಲಿ ಮತ ಧ್ರುವೀಕರಣ ; 29,252 ಮತಗಳಿಂದ ಮ...
04-05-26 06:27 pm
ತ್ರಿಕೋನ ಸ್ಪರ್ಧೆ ನಿರೀಕ್ಷಿಸಿದ್ದ ಕಾಸರಗೋಡಿನಲ್ಲಿ ಮ...
04-05-26 04:14 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಟ್ಯಾಂಪರಿಂಗ್ ಆರೋಪ ; ಅ...
03-05-26 01:30 pm
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
04-05-26 07:04 pm
HK News Staffer
ದೀದಿ ಕೋಟೆಗೆ ಕಮಲ ಲಗ್ಗೆ ; ಮೂರು ಬಾರಿ ಸಿಎಂ ಮಮತಾ ಸ...
04-05-26 01:16 pm
ತಮಿಳರ ಊರಲ್ಲಿ ನಟ ವಿಜಯ್ ಕಮಾಲ್ ; ದ್ರಾವಿಡ ಪಕ್ಷ ಬದ...
04-05-26 11:11 am
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm