ಬ್ರೇಕಿಂಗ್ ನ್ಯೂಸ್
04-05-26 07:16 pm HK News Staffer ಕರ್ನಾಟಕ
ಚಿಕ್ಕಮಗಳೂರು, ಮೇ 4: ಹೈಕೋರ್ಟ್ ಆದೇಶದಂತೆ ನಡೆದ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ, ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡರ 255 ಮತಗಳು ಅಸಿಂಧುವಾಗಿದ್ದು ಈ ಹಿಂದೆ ಸೋತಿದ್ದ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರಿಗೆ ಗೆಲುವಾಗಿದೆ ಎಂದು ಚುನಾವಣಾಧಿಕಾರಿ ಘೋಷಣೆ ಮಾಡಿದ್ದಾರೆ. 52 ಮತಗಳ ಮುನ್ನಡೆಯೊಂದಿಗೆ, ಡಿಎನ್ ಜೀವರಾಜ್ ಶಾಸಕರಾಗಿ ಪ್ರಮಾಣ ಪತ್ರ ಸ್ವೀಕರಿಸಿದ್ದಾರೆ.
2023ರ ಚುನಾವಣೆಯಲ್ಲಿ ಕಾಂಗ್ರೆಸ್ನ ಟಿ.ಡಿ.ರಾಜೇಗೌಡ ಅವರು ಬಿಜೆಪಿಯ ಡಿ.ಎನ್.ಜೀವರಾಜ್ ವಿರುದ್ಧ ಕೇವಲ 201 ಮತಗಳ ಅಲ್ಪ ಅಂತರದಿಂದ ಜಯ ಗಳಿಸಿದ್ದರು. ಆದರೆ, ಈ ಫಲಿತಾಂಶವನ್ನು ಪ್ರಶ್ನಿಸಿ ಜೀವರಾಜ್ ಅವರು ಕರ್ನಾಟಕ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ಏಪ್ರಿಲ್ 6ರಂದು ಪೋಸ್ಟಲ್ ಬ್ಯಾಲೆಟ್ಗಳ ಮರು ಪರಿಶೀಲನೆ ಮತ್ತು ಮರು ಎಣಿಕೆಗೆ ಆದೇಶ ನೀಡಿದ ಹಿನ್ನೆಲೆಯಲ್ಲಿ ಶನಿವಾರ ಈ ಪ್ರಕ್ರಿಯೆ ಆರಂಭವಾಗಿ ಮಧ್ಯರಾತ್ರಿ ವರೆಗೂ ಮುಂದುವರಿಯಿತು. ಮರು ಪರಿಶೀಲನೆ ವೇಳೆ ಫಲಿತಾಂಶದಲ್ಲಿ ದೊಡ್ಡ ಬದಲಾವಣೆ ಕಂಡುಬಂದಿದೆ.
ಜೀವರಾಜ್ ಅವರಿಗೆ ಮೊದಲು 692 ಮತಗಳು ಇದ್ದರೆ, ಮರು ಎಣಿಕೆಯಲ್ಲಿ 690 ಮಾನ್ಯ ಮತಗಳು ಲಭ್ಯವಾಗಿವೆ. ಆದರೆ, ರಾಜೇಗೌಡರ ಮತಗಳು 569ರಿಂದ ನೇರವಾಗಿ 314ಕ್ಕೆ ಇಳಿದಿದ್ದು, 255 ಮತಗಳ ಕಡಿತ ಕಂಡುಬಂದಿದೆ. ಈ ದೊಡ್ಡ ವ್ಯತ್ಯಾಸವೇ ಅಂತಿಮ ಫಲಿತಾಂಶವನ್ನು ಸಂಪೂರ್ಣವಾಗಿ ತಲೆಕೆಳಗಾಗಿಸಿದೆ.
ಫಲಿತಾಂಶ ಬೆನ್ನಲ್ಲೇ ಚುನಾವಣಾಧಿಕಾರಿಗಳು ಜನಪ್ರತಿನಿಧಿತ್ವ ಕಾಯ್ದೆ 1951 ಮತ್ತು ಚುನಾವಣಾ ನಿಯಮಾವಳಿಗಳ ಪ್ರಕಾರ ಜೀವರಾಜ್ ಅವರನ್ನು ಅಧಿಕೃತವಾಗಿ ಶಾಸಕರಾಗಿ ಘೋಷಿಸಿದ್ದಾರೆ. ಈ ಘೋಷಣೆಯೊಂದಿಗೆ ರಾಜೇಗೌಡರು ತಮ್ಮ ಶಾಸಕ ಸ್ಥಾನವನ್ನು ಕಳೆದುಕೊಂಡಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ರಾಜೇಗೌಡರು ಮರು ಎಣಿಕೆ ಪ್ರಕ್ರಿಯೆ ಮೇಲೆ ಗಂಭೀರ ಅನುಮಾನ ವ್ಯಕ್ತಪಡಿಸಿದ್ದಾರೆ. ತಮ್ಮ ಪರವಾಗಿ ಬಂದಿದ್ದ ಕೆಲವು ಬ್ಯಾಲೆಟ್ಗಳಲ್ಲಿ ಮತಗಳನ್ನು ತಿರುಚಲಾಗಿದೆ ಎಂದು ಅವರು ಆರೋಪಿಸಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm