ಬ್ರೇಕಿಂಗ್ ನ್ಯೂಸ್
04-05-26 10:33 pm HK News Desk ಕರ್ನಾಟಕ
ಚಿಕ್ಕಮಗಳೂರು, ಮೇ 04: ಬಾತುಕೋಳಿ ಹಿಡಿಯಲು ಕೆರೆಗೆ ಇಳಿದ ನಾಲ್ವರು ಮಕ್ಕಳು ನೀರು ಪಾಲಾದ ದುರ್ಘಟನೆ ಚಿಕ್ಕಮಗಳೂರು ತಾಲೂಕಿನ ಅರಳಗುಪ್ಪೆ ಗ್ರಾಮದ ಕಾರಂಜಿ ಕೆರೆಯಲ್ಲಿ ಸೋಮವಾರ ನಡೆದಿದೆ. ಮಕ್ಕಳು ಮೃತಪಟ್ಟಿರುವ ಘಟನೆ ತಿಳಿಯುತ್ತಿದ್ದಂತೆ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.
ಮಹಾದಿಯಾ, ಅರುನುಸ್, ನಾಯುಸ್ ಮತ್ತು ಅಬ್ದುಲ್ ರೆಹಮಾನ್ ಎಂಬ ನಾಲ್ವರು ಮಕ್ಕಳು ಮೃತಪಟ್ಟವರಾಗಿದ್ದು, ಇವರು ಎಲ್ಲರೂ 5 ರಿಂದ 12 ವರ್ಷದೊಳಗಿನವರಾಗಿದ್ದಾರೆ.
ಇದೇ ವೇಳೆ ನಾಲ್ಕು ವರ್ಷದ ಅರ್ಮಾನ್ ಎಂಬ ಮಗು ಪ್ರಾಣಾಪಾಯದಿಂದ ಪಾರಾಗಿದ್ದು, ಗಂಭೀರ ಸ್ಥಿತಿಯಲ್ಲಿದ್ದಾನೆ. ಆತನಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
ಪೊಲೀಸರು ತಿಳಿಸಿದ್ದು ಹೀಗೆ: ಸಂಬಂಧಿಕರ ಮನೆಗೆ ಬಂದಿದ್ದ ಮಕ್ಕಳು ಆಟವಾಡುತ್ತಿದ್ದ ವೇಳೆ ಬಾತುಕೋಳಿ ಕೆರೆಗೆ ಹೋಗಿರುವುದನ್ನು ನೋಡಿ ಅದನ್ನು ಹಿಡಿಯಲು ಕೆರೆಗೆ ಇಳಿದಿದ್ದಾರೆ. ಈ ವೇಳೆ ಆಳವಾದ ನೀರಿನಲ್ಲಿ ಮುಳುಗಿ ನಾಲ್ವರು ಮಕ್ಕಳು ಸಾವನ್ನಪ್ಪಿದ್ದಾರೆ. ಈ ಘಟನೆ ತಿಳಿದ ತಕ್ಷಣ ಸ್ಥಳೀಯರು ಹಾಗೂ ಪೋಷಕರು ಕೆರೆಗೆ ಧಾವಿಸಿ ಮಕ್ಕಳನ್ನು ರಕ್ಷಿಸಲು ಯತ್ನಿಸಿದರೂ ಫಲಕಾರಿಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ನಡೆದ ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಹೊರತೆಗೆದು ಮುಂದಿನ ಕ್ರಮ ಕೈಗೊಂಡಿದ್ದು, ಎಲ್ಲಾ ಮೃತದೇಹಗಳನ್ನು ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಕುರಿತು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಿಲ್ಲಾ ಸರ್ಕಾರಿ ಆಸ್ಪತ್ರೆ ಮುಂಭಾಗದಲ್ಲಿ ಮೃತ ಮಕ್ಕಳ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಗ್ರಾಮಸ್ಥರು ಹಾಗೂ ಕುಟುಂಬದ ಸದಸ್ಯರು ಕಣ್ಣೀರಿನಲ್ಲಿ ಕೈ ತೊಳೆಯುವಂತಾಗಿದೆ.
ನಾಲ್ವರು ಮಕ್ಕಳನ್ನು ಕಳೆದುಕೊಂಡ ಕುಟುಂಬ ಸದಸ್ಯರಲ್ಲಿ ದುಃಖ ಮಡುಗಟ್ಟಿದೆ. ಈ ದುರ್ಘಟನೆಯಿಂದ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಮಕ್ಕಳ ಸುರಕ್ಷತೆ ಬಗ್ಗೆ ಎಚ್ಚರಿಕೆ ಅಗತ್ಯವಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm