ಬ್ರೇಕಿಂಗ್ ನ್ಯೂಸ್
08-05-26 08:05 pm HK News Staffer ಕರ್ನಾಟಕ
ಹೈದರಾಬಾದ್, ಮೇ 8: ತೆಲಂಗಾಣದಲ್ಲಿ 12ನೇ ಶತಮಾನದಲ್ಲಿ ಸ್ಥಾಪಿಸಿದ್ದು ಎನ್ನಲಾದ ಕಾಕತೀಯರ ಕಾಲದ ಪುರಾತನ ಶಿವ ದೇವಾಲಯವನ್ನು ಶಾಲಾ ಮೈದಾನಕ್ಕಾಗಿ ಧ್ವಂಸಗೊಳಿಸಲಾಗಿದ್ದು ಸ್ಥಳೀಯರ ಆಕ್ರೋಶಕ್ಕೆ ಗುರಿಯಾಗುತ್ತಿದ್ದಂತೆ ವಿವಾದಕ್ಕೆ ಕಾರಣವಾಗಿದೆ.
ವಾರಂಗಲ್ ಜಿಲ್ಲೆಯ ಖಾನಾಪುರ ಮಂಡಲದ ಅಶೋಕ ನಗರದಲ್ಲಿ ಈ ಘಟನೆ ನಡೆದಿದೆ. 800 ವರ್ಷಗಳ ಇತಿಹಾಸದ ದೇವಾಲಯವನ್ನು ಧ್ವಂಸ ಮಾಡಿರುವುದಕ್ಕೆ ಸಾರ್ವಜನಿಕರು, ಹಿಂದು ಸಂಘಟನೆಯವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರಿ ಶಾಲೆಯ ನೂತನ ಕಟ್ಟಡ ಮತ್ತು ಮೈದಾನಕ್ಕಾಗಿ ಭೂಮಿಯನ್ನು ಸಮತಟ್ಟು ಮಾಡುವ ವೇಳೆ ಜೆಸಿಬಿ ಬಳಸಿ ಹಳೆಯ ಪಾಳು ಬಿದ್ದ ಸ್ಥಿತಿಯಲ್ಲಿದ್ದ ಶಿವ ದೇವಾಲಯವನ್ನು ನೆಲಸಮ ಮಾಡಲಾಗಿದೆ.
ಶಿವ ದೇವಾಲಯ 13ನೇ ಶತಮಾನದ ಕಾಕತೀಯರ ದೊರೆ ಗಣಪತಿ ದೇವನ ಕಾಲದಲ್ಲಿ ನಿರ್ಮಾಣವಾಗಿತ್ತು. ಕ್ರಿ.ಶ. 1231ರಲ್ಲಿ ಬರೆದ ಏಳು ಸಾಲುಗಳ ತೆಲುಗು ಶಾಸನವೂ ಇದೇ ದೇವಾಲಯದಲ್ಲಿ ದೊರಕಿತ್ತು. ಅದರಲ್ಲಿ ರಾಜನನ್ನು 'ಮಹಾರಾಜ' ಮತ್ತು 'ರಾಜಾಧಿರಾಜುಲು' ಎಂದು ಕರೆಯಲಾಗಿತ್ತು. ಇದನ್ನು ಗುರುತಿಸಿ 1965ರಲ್ಲಿ ರಾಜ್ಯದ ಪುರಾತತ್ವ ಮತ್ತು ಮುಜರಾಯಿ ಇಲಾಖೆಗೆ ಸೇರಿಸಲಾಗಿತ್ತು.
ಸಾರ್ವಜನಿಕರ ಪ್ರತಿಭಟನೆ ಮತ್ತು ರಾಷ್ಟ್ರೀಯ ಸ್ಮಾರಕಗಳ ಪ್ರಾಧಿಕಾರಕ್ಕೆ ಕೆಲವರು ದೂರು ನೀಡಿದ ಬೆನ್ನಲ್ಲೇ ಎಚ್ಚೆತ್ತುಕೊಂಡ ಸ್ಥಳೀಯ ಜಿಲ್ಲಾ ಮಟ್ಟದ ಅಧಿಕಾರಿಗಳು ದೇಗುಲ ಮರು ನಿರ್ಮಾಣ ಮಾಡುವುದಾಗಿ ಭರವಸೆ ನೀಡಿದ್ದಾರೆ. ಬೇಕೆಂದೇ ದೇವಾಲಯವನ್ನು ನಾವು ಧ್ವಂಸ ಮಾಡಿಲ್ಲ. 30 ಎಕರೆ ಜಾಗದಲ್ಲಿ ಪೊದೆಗಳನ್ನು ಸ್ವಚ್ಛಗೊಳಿಸುವಾಗ ಶಿಥಿಲಗೊಂಡ ದೇವಾಲಯ ನೆಲಸಮ ಆಗಿದೆ. ಇದೇನೂ ಅಧಿಕೃತವಾಗಿ ರಕ್ಷಿತ ಸ್ಮಾರಕ ಎಂದು ದಾಖಲೆಯಲ್ಲಿ ಇರಲಿಲ್ಲ ಎಂದು ಅಧಿಕಾರಿಗಳು ವಾದಿಸಿದ್ದಾರೆ. ಜನರ ಆಕ್ರೋಶ ಹೆಚ್ಚುತ್ತಿದ್ದಂತೆ ದೇಗುಲ ಮರು ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm