ಬ್ರೇಕಿಂಗ್ ನ್ಯೂಸ್
11-05-26 09:36 pm HK News Staffer ಕರ್ನಾಟಕ
ನವದೆಹಲಿ, ಮೇ 11 : ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ಅವರಿಗೆ ಸುಪ್ರೀಂಕೋರ್ಟ್ ಮಹತ್ವದ ರಿಲೀಫ್ ನೀಡಿದೆ. ಕರ್ನಾಟಕ ಹೈಕೋರ್ಟ್ ನೀಡಿದ್ದ ಮರು ಎಣಿಕೆ ಆದೇಶಕ್ಕೆ ಮಧ್ಯಂತರ ತಡೆ ನೀಡಿರುವ ಸುಪ್ರೀಂಕೋರ್ಟ್, ರಾಜೇಗೌಡ ಶಾಸಕ ಸ್ಥಾನದಲ್ಲಿ ಮುಂದುವರಿಯುವಂತೆ ಆದೇಶಿಸಿದೆ.
ಈ ಮೂಲಕ ಮರು ಮತ ಎಣಿಕೆಯಲ್ಲಿ ಗೆಲುವು ಸಾಧಿಸಿ ಇತ್ತೀಚೆಗಷ್ಟೇ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದ್ದ ಬಿಜೆಪಿಯ ಡಿ.ಎನ್. ಜೀವರಾಜ್ ಅವರಿಗೆ ತಾತ್ಕಾಲಿಕ ಹಿನ್ನಡೆಯಾಗಿದೆ. ಅಂಚೆ ಮತಗಳ ಮರು ಎಣಿಕೆಗೆ ಆದೇಶಿಸಿದ್ದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಟಿ.ಡಿ. ರಾಜೇಗೌಡ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಹೈಕೋರ್ಟ್ ಆದೇಶ ಹಾಗೂ ಅದರ ನಂತರ ನಡೆದ ಪ್ರಕ್ರಿಯೆಗಳಿಗೆ ಮಧ್ಯಂತರ ತಡೆ ನೀಡಿದೆ.
ಜೊತೆಗೆ ಮರು ಮತ ಎಣಿಕೆಗೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸುವಂತೆ ಚುನಾವಣಾ ಆಯೋಗಕ್ಕೆ ಸೂಚಿಸಿ, ಪ್ರಕರಣದ ಮುಂದಿನ ವಿಚಾರಣೆಯನ್ನು ಮೇ 21ಕ್ಕೆ ಮುಂದೂಡಿದೆ. ಸದ್ಯಕ್ಕೆ ಸುಪ್ರೀಂಕೋರ್ಟ್ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ನ ಟಿ.ಡಿ. ರಾಜೇಗೌಡ ಅವರು ಮತ್ತೆ ಶೃಂಗೇರಿ ಕ್ಷೇತ್ರದ ಶಾಸಕರಾಗಿ ಮುಂದುವರಿಯಲಿದ್ದಾರೆ.
2023ರ ವಿಧಾನಸಭಾ ಚುನಾವಣೆಯಲ್ಲಿ ಶೃಂಗೇರಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ. ರಾಜೇಗೌಡ ಗೆಲುವು ಸಾಧಿಸಿದ್ದರು. ಬಿಜೆಪಿಯ ಡಿ.ಎನ್. ಜೀವರಾಜ್ ಸೋಲು ಅನುಭವಿಸಿದ್ದರು. ಆದರೆ ಅಂಚೆ ಮತಗಳ ಎಣಿಕೆಯಲ್ಲಿ ಲೋಪವಾಗಿದೆ ಎಂದು ಆರೋಪಿಸಿ ಜೀವರಾಜ್ ನ್ಯಾಯಾಲಯದ ಮೊರೆ ಹೋಗಿದ್ದರು. ಪ್ರಕರಣ ವಿಚಾರಣೆ ನಡೆಸಿದ್ದ ಹೈಕೋರ್ಟ್, ಅಂಚೆ ಮತಗಳ ಮರು ಎಣಿಕೆಗೆ ಆದೇಶಿಸಿತ್ತು. ಇತ್ತೀಚೆಗೆ ಮರು ಎಣಿಕೆಯಲ್ಲಿ ಬಿಜೆಪಿಯ ಜೀವರಾಜ್ ಮುನ್ನಡೆ ಸಾಧಿಸಿದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಅವರನ್ನು ವಿಜೇತರಾಗಿ ಘೋಷಿಸಿ ಪ್ರಮಾಣಪತ್ರ ನೀಡಿತ್ತು. ಬಳಿಕ ಅವರು ಶಾಸಕರಾಗಿ ಪ್ರಮಾಣವಚನವನ್ನೂ ಸ್ವೀಕರಿಸಿದ್ದರು. ಇದೀಗ ಸುಪ್ರೀಂಕೋರ್ಟ್ ಮಧ್ಯಂತರ ತಡೆ ನೀಡಿರುವುದರಿಂದ ರಾಜಕೀಯ ವಲಯದಲ್ಲಿ ಹೊಸ ಚರ್ಚೆ ಹುಟ್ಟಿಕೊಂಡಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm