ಬ್ರೇಕಿಂಗ್ ನ್ಯೂಸ್
15-05-26 09:56 pm HK News Desk ಕರ್ನಾಟಕ
ಬೆಂಗಳೂರು, ಮೇ 15: ರಾಜ್ಯದ ಮದ್ಯಪ್ರಿಯರಿಗೆ ಅಬಕಾರಿ ಇಲಾಖೆ ಮಹತ್ವದ ಸಿಹಿಸುದ್ದಿ ನೀಡಿದೆ. ಕರ್ನಾಟಕ ಸರ್ಕಾರವು ಮೇ 11ರಿಂದಲ್ಲೇ ನೂತನ ‘ಆಲ್ಕೋಹಾಲ್ ಇನ್ ಬೆವರೇಜ್’ (AiB) ನೀತಿಯನ್ನು ಜಾರಿಗೆ ತಂದಿದ್ದು, ಇದರ ಪರಿಣಾಮವಾಗಿ ಪ್ರೀಮಿಯಂ ಬಿಯರ್ ಹಾಗೂ ವಿದೇಶಿ ಸ್ಕಾಚ್ ವಿಸ್ಕಿಗಳ ಬೆಲೆಯಲ್ಲಿ ಗಣನೀಯ ಇಳಿಕೆಯಾಗಿದೆ. ಆದರೆ, ಸಾಮಾನ್ಯ ಜನರು ಹೆಚ್ಚಾಗಿ ಬಳಸುವ ಕಡಿಮೆ ದರದ ಮದ್ಯಗಳ ಬೆಲೆ ಏರಿಕೆಯಾಗಿರುವುದು ಗಮನ ಸೆಳೆದಿದೆ.
ಹೊಸ ನೀತಿಯ ಪ್ರಕಾರ, ಶೇ.5ರಷ್ಟು ಆಲ್ಕೋಹಾಲ್ ಹೊಂದಿರುವ ಮೈಲ್ಡ್ ಮತ್ತು ಲಾಗರ್ ಬಿಯರ್ಗಳ ದರದಲ್ಲಿ ಶೇ.20ರಿಂದ 25ರವರೆಗೆ ಇಳಿಕೆ ಕಂಡುಬಂದಿದೆ. ಕಿಂಗ್ಫಿಶರ್ ಪ್ರೀಮಿಯಂ ಮತ್ತು ಅಲ್ಟ್ರಾ 650 ಎಂಎಲ್ ಬಾಟಲಿಗಳ ಮೇಲೆ ಸುಮಾರು 75 ರೂ.ವರೆಗೆ ಕಡಿತವಾಗಿದ್ದರೆ, ಹೈನೆಕೆನ್ ಮೇಲೆ 70 ರೂ., ಯುಬಿ ಎಕ್ಸ್ಪೋರ್ಟ್ ಮೇಲೆ 25 ರೂ. ಹಾಗೂ ಬಡ್ವೈಸರ್ ಪ್ರೀಮಿಯಂ ಮೇಲೆ 20 ರೂ.ವರೆಗೆ ದರ ಇಳಿಕೆಯಾಗಿದೆ.
ಇದರ ಜೊತೆಗೆ ವಿದೇಶಿ ಪ್ರೀಮಿಯಂ ಸ್ಕಾಚ್ ಮತ್ತು ವಿಸ್ಕಿ ಬ್ರಾಂಡ್ಗಳ ಬೆಲೆಯೂ ಇಳಿಕೆಯಾಗಿದೆ. ಬ್ಲ್ಯಾಕ್ ಲೇಬಲ್ ಮತ್ತು ಶಿವಾಸ್ ರೀಗಲ್ 750 ಎಂಎಲ್ ಬಾಟಲಿಯ ಬೆಲೆ 5,190 ರೂ.ಗಳಿಂದ ಸುಮಾರು 4,100 ರೂ.ಗೆ ಇಳಿದಿದ್ದು, ಹೈಎಂಡ್ ಮದ್ಯ ಬಳಕೆದಾರರಿಗೆ ಇದು ದೊಡ್ಡ ಸಮಾಧಾನ ತಂದಿದೆ.
ರಾಜ್ಯ ಸರ್ಕಾರ ಜಾರಿಗೆ ತಂದಿರುವ ಈ AiB ನೀತಿ ದೇಶದಲ್ಲೇ ಮೊದಲ ಪ್ರಯೋಗ ಎನ್ನಲಾಗುತ್ತಿದೆ. ಈ ಹಿಂದೆ ಅಸ್ತಿತ್ವದಲ್ಲಿದ್ದ 16 ತೆರಿಗೆ ಸ್ಲ್ಯಾಬ್ಗಳನ್ನು ಇದೀಗ 8ಕ್ಕೆ ಇಳಿಸಲಾಗಿದ್ದು, ಮದ್ಯದಲ್ಲಿರುವ ಆಲ್ಕೋಹಾಲ್ ಪ್ರಮಾಣದ ಆಧಾರದ ಮೇಲೆ ತೆರಿಗೆ ವಿಧಿಸುವ ಹೊಸ ಪದ್ಧತಿಯನ್ನು ಅಳವಡಿಸಲಾಗಿದೆ. ಅರವತ್ತು ವರ್ಷಗಳ ಹಳೆಯ ತೆರಿಗೆ ವ್ಯವಸ್ಥೆಗೆ ವಿದಾಯ ಹೇಳಿರುವ ಸರ್ಕಾರ, ಮದ್ಯ ಮಾರುಕಟ್ಟೆಯನ್ನು ಹೊಸ ಮಾದರಿಯಲ್ಲಿ ನಿಯಂತ್ರಿಸಲು ಮುಂದಾಗಿದೆ.
ಆದರೆ, ಕಡಿಮೆ ದರದ ಮದ್ಯಗಳ ಮೇಲೆ ತೆರಿಗೆ ಪ್ರಮಾಣ ಏರಿಕೆಯಾಗಿರುವುದರಿಂದ ಸಾಮಾನ್ಯ ಗ್ರಾಹಕರಿಗೆ ಹೆಚ್ಚುವರಿ ಹೊರೆ ಬೀಳುವ ಸಾಧ್ಯತೆಯಿದೆ. ಹೀಗಾಗಿ ಹೊಸ ನೀತಿ ಶ್ರೀಮಂತ ವರ್ಗದ ಪ್ರೀಮಿಯಂ ಮದ್ಯ ಬಳಕೆದಾರರಿಗೆ ಹೆಚ್ಚು ಲಾಭ ತಂದಿದೆಯೇ ಎಂಬ ಚರ್ಚೆಯೂ ಆರಂಭವಾಗಿದೆ.
ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ. ಕ್ಷಣಿಕ ಖುಷಿಗಾಗಿ ಆರೋಗ್ಯ ಮತ್ತು ಕುಟುಂಬದ ಭವಿಷ್ಯವನ್ನು ಹಾಳು ಮಾಡಿಕೊಳ್ಳಬೇಡಿ. ಜವಾಬ್ದಾರಿಯುತ ಜೀವನಶೈಲಿಯೇ ಉತ್ತಮ ಬದುಕಿನ ಆಧಾರ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm