ಬ್ರೇಕಿಂಗ್ ನ್ಯೂಸ್
05-01-21 06:18 pm Bangalore Correspondent ಕರ್ನಾಟಕ
ಬೆಂಗಳೂರು, ಜ.5: ತುಳು ಭಾಷೆಗೆ ರಾಜ್ಯ ಭಾಷೆಯ ಸ್ಥಾನಮಾನ ಸಿಗುವಂತಾಗಲು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಎಲ್ಲರ ಅಭಿಪ್ರಾಯ ಸಂಗ್ರಹಿಸಿ, ನಿರ್ಧಾರ ಪ್ರಕಟಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಜಿ. ಕತ್ತಲ್ಸಾರ್ ಮಂಗಳವಾರ ಬೆಳಗ್ಗೆ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ, ತುಳು ಭಾಷೆಯನ್ನು ರಾಜ್ಯ ಭಾಷೆಯನ್ನಾಗಿಸುವ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಅಕಾಡೆಮಿಯ ಸದಸ್ಯೆ ಕಾಂತಿ ಶೆಟ್ಟಿ ಉಪಸ್ಥಿತರಿದ್ದರು.
ಅಕಾಡೆಮಿಯ ಅಧ್ಯಕ್ಷ ದಯಾನಂದ ಜಿ. ಕತ್ತಲ್ಸಾರ್ ಮಾತನಾಡಿ, ''ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರನ್ನು ಭೇಟಿ ಮಾಡಿ, ತುಳುನಾಡಿನ ಸಮಸ್ತ ಜನರ ಬೇಡಿಕೆಯನ್ನು ಮನದಟ್ಟು ಮಾಡಲಾಗಿದೆ. ಆಶಾದಾಯಕ ಪ್ರತಿಕ್ರಿಯೆ ಸಿಕ್ಕಿದ್ದು, ನಮ್ಮ ಮನವಿಯನ್ನು ಸರಕಾರ ಪುರಸ್ಕರಿಸಿದೆ ಎಂದರು. ಇದೇ ವೇಳೆ ಶಿಕ್ಷಣ ಸಚಿವರನ್ನು ಭೇಟಿ ಮಾಡಿ ಅತಿಥಿ ಶಿಕ್ಷಕರ ಸಮಸ್ಯೆ ಬಗ್ಗೆ ಕತ್ತಲ್ಸಾರ್ ಮಾಹಿತಿ ನೀಡಿದರು.
ಕೇಂದ್ರದಿಂದ ಜಾರಿಯಾಗಲಿರುವ ಹೊಸ ಶಿಕ್ಷಣ ನೀತಿಯಿಂದ ಪ್ರಾದೇಶಿಕ ಭಾಷೆಗಳಿಗೆ ವಿಶೇಷ ಆದ್ಯತೆ ಸಿಗಲಿದೆ. ಇದರಿಂದ ತುಳು ಭಾಷೆಯನ್ನು ಕಲಿಸುತ್ತಿರುವ ಅತಿಥಿ ಶಿಕ್ಷಕರಿಗೂ ಸಹ ನ್ಯಾಯ ಸಿಗಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಮುಂದಿನ 15 ದಿನಗಳ ಒಳಗೆ ಈ ಶಿಕ್ಷಣ ನೀತಿಯ ಸ್ಪಷ್ಟ ಚಿತ್ರಣ ಸಿಗಲಿದೆ. ಆನಂತರ ಅದಕ್ಕೆ ಪೂರಕವಾಗಿ ಅತಿಥಿ ಶಿಕ್ಷಕರ ಸಮಸ್ಯೆಯನ್ನ ಬಗೆಹರಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತುಳು ಭಾಷೆಗೆ ಅಧಿಕೃತವಾಗಿ ರಾಜ್ಯ ಭಾಷೆ ಸ್ಥಾನ ಸಿಗಬೇಕು ಎಂಬ ಧ್ವನಿಗೆ ಸಚಿವರು ಸಹಮತ ವ್ಯಕ್ತಪಡಿಸಿದ್ದಾರೆ.
CM BS Yediyurappa assures on making Tulu as one of the State official Language said Dayananda G Kathalsar, president of Karnataka Tulu Sahitya Academy in Mangalore.
16-03-25 10:32 pm
HK News Desk
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 10:55 pm
Mangalore Correspondent
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm