ಬ್ರೇಕಿಂಗ್ ನ್ಯೂಸ್
05-01-21 06:18 pm Bangalore Correspondent ಕರ್ನಾಟಕ
ಬೆಂಗಳೂರು, ಜ.5: ತುಳು ಭಾಷೆಗೆ ರಾಜ್ಯ ಭಾಷೆಯ ಸ್ಥಾನಮಾನ ಸಿಗುವಂತಾಗಲು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಎಲ್ಲರ ಅಭಿಪ್ರಾಯ ಸಂಗ್ರಹಿಸಿ, ನಿರ್ಧಾರ ಪ್ರಕಟಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಜಿ. ಕತ್ತಲ್ಸಾರ್ ಮಂಗಳವಾರ ಬೆಳಗ್ಗೆ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ, ತುಳು ಭಾಷೆಯನ್ನು ರಾಜ್ಯ ಭಾಷೆಯನ್ನಾಗಿಸುವ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಅಕಾಡೆಮಿಯ ಸದಸ್ಯೆ ಕಾಂತಿ ಶೆಟ್ಟಿ ಉಪಸ್ಥಿತರಿದ್ದರು.
ಅಕಾಡೆಮಿಯ ಅಧ್ಯಕ್ಷ ದಯಾನಂದ ಜಿ. ಕತ್ತಲ್ಸಾರ್ ಮಾತನಾಡಿ, ''ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರನ್ನು ಭೇಟಿ ಮಾಡಿ, ತುಳುನಾಡಿನ ಸಮಸ್ತ ಜನರ ಬೇಡಿಕೆಯನ್ನು ಮನದಟ್ಟು ಮಾಡಲಾಗಿದೆ. ಆಶಾದಾಯಕ ಪ್ರತಿಕ್ರಿಯೆ ಸಿಕ್ಕಿದ್ದು, ನಮ್ಮ ಮನವಿಯನ್ನು ಸರಕಾರ ಪುರಸ್ಕರಿಸಿದೆ ಎಂದರು. ಇದೇ ವೇಳೆ ಶಿಕ್ಷಣ ಸಚಿವರನ್ನು ಭೇಟಿ ಮಾಡಿ ಅತಿಥಿ ಶಿಕ್ಷಕರ ಸಮಸ್ಯೆ ಬಗ್ಗೆ ಕತ್ತಲ್ಸಾರ್ ಮಾಹಿತಿ ನೀಡಿದರು.

ಕೇಂದ್ರದಿಂದ ಜಾರಿಯಾಗಲಿರುವ ಹೊಸ ಶಿಕ್ಷಣ ನೀತಿಯಿಂದ ಪ್ರಾದೇಶಿಕ ಭಾಷೆಗಳಿಗೆ ವಿಶೇಷ ಆದ್ಯತೆ ಸಿಗಲಿದೆ. ಇದರಿಂದ ತುಳು ಭಾಷೆಯನ್ನು ಕಲಿಸುತ್ತಿರುವ ಅತಿಥಿ ಶಿಕ್ಷಕರಿಗೂ ಸಹ ನ್ಯಾಯ ಸಿಗಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಮುಂದಿನ 15 ದಿನಗಳ ಒಳಗೆ ಈ ಶಿಕ್ಷಣ ನೀತಿಯ ಸ್ಪಷ್ಟ ಚಿತ್ರಣ ಸಿಗಲಿದೆ. ಆನಂತರ ಅದಕ್ಕೆ ಪೂರಕವಾಗಿ ಅತಿಥಿ ಶಿಕ್ಷಕರ ಸಮಸ್ಯೆಯನ್ನ ಬಗೆಹರಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತುಳು ಭಾಷೆಗೆ ಅಧಿಕೃತವಾಗಿ ರಾಜ್ಯ ಭಾಷೆ ಸ್ಥಾನ ಸಿಗಬೇಕು ಎಂಬ ಧ್ವನಿಗೆ ಸಚಿವರು ಸಹಮತ ವ್ಯಕ್ತಪಡಿಸಿದ್ದಾರೆ.
CM BS Yediyurappa assures on making Tulu as one of the State official Language said Dayananda G Kathalsar, president of Karnataka Tulu Sahitya Academy in Mangalore.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm