ಬ್ರೇಕಿಂಗ್ ನ್ಯೂಸ್
25-05-26 09:38 pm HK News Staffer ಕರ್ನಾಟಕ
ಬೆಂಗಳೂರು, ಮೇ 25: ರಾಜ್ಯ ಬಿಜೆಪಿ ಮುಂದಿನ ಚುನಾವಣೆಗೆ ತಯಾರಿ ನಡೆಸುತ್ತಿದ್ದರೆ, ಇತ್ತ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮುಂದಿನ ಬಾರಿಯೂ ಕಾಂಗ್ರೆಸಿನದ್ದೇ ಸರ್ಕಾರ ಎನ್ನುವ ಮೂಲಕ ಪ್ರತಿಪಕ್ಷಗಳಿಗೆ ಸಂದೇಶ ನೀಡಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತಾಡಿದ ಡಿಸಿಎಂ ಡಿಕೆ ಶಿವಕುಮಾರ್ ಅವರು, ಇಂದೇ ಪೇಪರ್ನಲ್ಲಿ ಬರೆದಿಟ್ಕೊಳಿ ಮುಂದಿನ ಬಾರಿಯೂ ನಮ್ದೇ ಸರ್ಕಾರ. 'ಇದೇ ಡಿಕೆ ಶಿವಕುಮಾರ್, ಇದೇ ಕಾಂಗ್ರೆಸ್ ಸರ್ಕಾರ' ಇರುತ್ತದೆ ಎಂದು ಖಡಕ್ಕಾಗಿ ಹೇಳಿದ್ದಾರೆ.
''ಪೇಪರ್ನಲ್ಲಿ ಬರೆದಿಟ್ಕೊಳಿ, ಈ ಹಿಂದೆ ನಾನು 136 ಸ್ಥಾನ ಬರುತ್ತದೆ ಅಂತ ಹೇಳಿದ್ದೆ, ಈಗಲೂ ಬರೆದಿಟ್ಕೊಳ್ಳಿ, 2028ಕ್ಕೆ ಇದೇ ಡಿಕೆ ಶಿವಕುಮಾರ್, ಇದೇ ಕಾಂಗ್ರೆಸ್ ಸರ್ಕಾರ ಇರುತ್ತದೆ. 2028ರ ಮುಂಬರುವ ಚುನಾವಣೆಯಲ್ಲೂ ಕಾಂಗ್ರೆಸ್ ಸರ್ಕಾರವೇ ಆಧಿಕಾರಕ್ಕೆ ಬರಲಿದೆ'' ಎಂದು ಡಿಕೆ ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.
2023ರಲ್ಲಿ ಬಿಜೆಪಿ ನಾಯಕ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯದಲ್ಲಿ ಬಿಜೆಪಿಗೆ 122 ಸೀಟು ಬರುತ್ತೆ ಎಂದಿದ್ದರು. ಇದೇ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಅವರು, ಬರೆದಿಟ್ಟುಕೊಳ್ಳಿ 136 ಸೀಟುಗಳ ಮೂಲಕ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ ಎಂದಿದ್ದರು. ಈ ಭವಿಷ್ಯ ನಿಜವಾಗಿತ್ತು. ಇದೀಗ ಮತ್ತೊಂದು ಭವಿಷ್ಯ ನುಡಿದಿರುವ ಡಿಕೆಶಿ, 2028ರ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದಿದ್ದಾರೆ.
ಆದಾಗ್ಯೂ, ಸಿಎಂ ಆಗುವ ಕುರಿತ ಪ್ರಶ್ನೆಗೆ ಉತ್ತರಿಸದೆ ಮೌನವಾದ ಡಿಸಿಎಂ, ದೇಶದಲ್ಲಿನ ದರ ಏರಿಕೆ ಕುರಿತು ಉಲ್ಲೇಖಿಸಿ ಕೇಂದ್ರದ ವಿರುದ್ದ ವಾಗ್ದಾಳಿ ನಡೆಸಿದರು. ಇದರ ಬಗ್ಗೆ ಮೇ 30ಕ್ಕೆ ಪ್ರತಿಭಟನೆ ನಡೆಸ್ತೀವಿ ಎಂದರು. ಇದೇ ಸಂದರ್ಭದಲ್ಲಿ ದೆಹಲಿಗೆ ಹೋಗುತ್ತಿದ್ದೀರಾ? ಎಂಬ ಪ್ರಶ್ನೆಗೆ, ಹೈಕಮಾಂಡ್ ನಾಯಕರು ಕರೆದರೆ ಮಾತ್ರ ಹೋಗುತ್ತೇನೆ ಎಂದು ಡಿಸಿಎಂ ಉತ್ತರಿಸಿದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm