ಬ್ರೇಕಿಂಗ್ ನ್ಯೂಸ್
26-05-26 08:51 pm HK News Staffer ಕರ್ನಾಟಕ
ಮೈಸೂರು, ಮೇ 25: ‘ಕಾಂತಾರ’ ಚಿತ್ರದ ಚಾವುಂಡಿ ದೈವದ ಪಾತ್ರದ ಬಗ್ಗೆ ನೀಡಿದ್ದ ಹೇಳಿಕೆಯಿಂದ ವಿವಾದಕ್ಕೆ ಸಿಲುಕಿದ್ದ ಬಾಲಿವುಡ್ ನಟ ರಣವೀರ್ ಸಿಂಗ್ ಇದೀಗ ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ಸನ್ನಿಧಿಯಲ್ಲಿ ಕ್ಷಮೆಯಾಚಿಸಿರುವ ಘಟನೆ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಯಾರಿಗೂ ತಿಳಿಯದಂತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಆಗಮಿಸಿದ ರಣವೀರ್ ಸಿಂಗ್ ವಿಶೇಷ ಪೂಜೆ ಸಲ್ಲಿಸಿ, ತಾಯಿ ಚಾಮುಂಡೇಶ್ವರಿ ಎದುರು ತಲೆಬಾಗಿ ಪ್ರಾರ್ಥನೆ ಸಲ್ಲಿಸಿರುವ ದೃಶ್ಯಗಳು ಇದೀಗ ವೈರಲ್ ಆಗುತ್ತಿವೆ. ದೇವಾಲಯದಲ್ಲಿ ಅವರು ಮೌನವಾಗಿ ಕುಳಿತು ಕ್ಷಮೆ ಕೇಳಿದ ಕ್ಷಣಗಳು ಸಾರ್ವಜನಿಕರ ಗಮನ ಸೆಳೆದಿವೆ.
ಈ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದ ವೇಳೆ, ರಣವೀರ್ ಸಿಂಗ್ ತಮ್ಮ ಸಾಮಾಜಿಕ ಜಾಲತಾಣ ‘ಎಕ್ಸ್’ ಮೂಲಕ ಈಗಾಗಲೇ ಕ್ಷಮೆ ಯಾಚಿಸಿದ್ದರು. ಜೊತೆಗೆ, ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಕ್ಷಮೆ ಕೇಳುವುದಾಗಿ ತಿಳಿಸಿದ್ದರು. ಇದೀಗ ಅವರು ಹೇಳಿದಂತೆ ನಡೆದುಕೋಂಡಿದ್ದಾರೆ.
ಘಟನೆ ಹಿನ್ನೆಲೆ:
ಗೋವಾದಲ್ಲಿ ನಡೆದ ಫಿಲ್ಮೋತ್ಸವದಲ್ಲಿ ನಟ ರಿಷಬ್ ಶೆಟ್ಟಿ ಎದುರೇ ಮಾತನಾಡಿದ್ದ ರಣವೀರ್ ಸಿಂಗ್, ‘ಕಾಂತಾರ’ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುವ ವೇಳೆ ದೈವದ ಪಾತ್ರವನ್ನು ಅನುಕರಿಸಿ ಮಾತನಾಡಿದ್ದರು. “ಹೆಣ್ಣು ದೆವ್ವ ನಿಮ್ಮ ಮೈಸೇರುವ ದೃಶ್ಯ ಅದ್ಭುತವಾಗಿತ್ತು” ಎಂದು ಹೇಳಿ, ಆ ಪಾತ್ರದ ಭಾವಭಂಗಿಯನ್ನು ಮಿಮಿಕ್ರಿ ಮಾಡಿದ್ದರು.
ರಣವೀರ್ ಸಿಂಗ್ ಅವರ ಈ ನಡೆಗೆ ಕರಾವಳಿ ಭಾಗದ ದೈವಾರಾಧಕರು ಹಾಗೂ ಹಲವಾರು ಹಿಂದೂ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದವು. ದೈವ ಸಂಸ್ಕೃತಿಗೆ ಅವಮಾನ ಮಾಡಲಾಗಿದೆ ಎಂಬ ಆರೋಪದಡಿ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.
ಈ ಬೆಳವಣಿಗೆಯ ಬಳಿಕ ಚಾಮುಂಡಿ ತಾಯಿಯ ಸನ್ನಿಧಿಯಲ್ಲಿ ನಟ ಕ್ಷಮೆಯಾಚಿಸಿರುವುದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm