ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪಿಯ ಮಾಜಿ ರೌಡಿಶೀಟರ್‌ಗೆ ಮಹಿಳಾ ಆಯೋಗದ ಅಧ್ಯಕ್ಷೆ ಕೊಟ್ರು ಆಶೀರ್ವಾದ

27-05-26 04:58 pm       HK News Staffer   ಕರ್ನಾಟಕ

ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಕುರಿತಾಗಿ ಹೊಸ ವಿವಾದವೊಂದು ಉದ್ಭವಿಸಿದೆ. ಮಾಜಿ ರೌಡಿ-ಶೀಟರ್ ಸೋನು ಸುಧೀರ್‌ಗೆ ಆಶೀರ್ವಾದ ನೀಡುತ್ತಿರುವಂತೆ ಕಾಣಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ

ಉಡುಪಿ, ಮೇ 27: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಕುರಿತಾಗಿ ಹೊಸ ವಿವಾದವೊಂದು ಉದ್ಭವಿಸಿದೆ. ಮಾಜಿ ರೌಡಿ-ಶೀಟರ್ ಸೋನು ಸುಧೀರ್‌ಗೆ ಆಶೀರ್ವಾದ ನೀಡುತ್ತಿರುವಂತೆ ಕಾಣಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ
.
ವೈರಲ್ ಆಗಿರುವ ವಿಡಿಯೋದಲ್ಲಿ, ಕಾರಿನೊಳಗೆ ಕುಳಿತಿರುವ ಸಂದರ್ಭದಲ್ಲಿ ನಾಗಲಕ್ಷ್ಮಿ ಚೌಧರಿ ಮಾಜಿ ರೌಡಿ ಸುಧೀರ್ ಗೆ ತಲೆಗೆ ಕೈ ಇಟ್ಟು ಆಶೀರ್ವಾದ ನೀಡುತ್ತಿರುವ ದೃಶ್ಯ ಕಾಣಿಸಿದ್ದು, ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆ ಹಾಗೂ ಟೀಕೆಗೆ ಕಾರಣವಾಗಿದೆ.

ಈ ಘಟನೆ ಉಡುಪಿ ಜಿಲ್ಲೆಯ ಭೇಟಿಯ ಸಂದರ್ಭದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಸಾರ್ವಜನಿಕ ಹುದ್ದೆಯಲ್ಲಿರುವವರು ಅಪರಾಧ ಹಿನ್ನೆಲೆಯಿರುವ ವ್ಯಕ್ತಿಗಳೊಂದಿಗೆ ಸಂಪರ್ಕದಲ್ಲಿರುವ ಕುರಿತು ನೆಟ್ಟಿಗರು ಪ್ರಶ್ನೆಗಳನ್ನು ಎತ್ತಿದ್ದಾರೆ.

ಸೋನು ಸುಧೀರ್ 2021 ರಿಂದ 2023ರ ಅವಧಿಯಲ್ಲಿ ಕಾಪು ಪೊಲೀಸ್ ಠಾಣೆಯ ರೌಡಿ-ಶೀಟರ್ ಪಟ್ಟಿಯಲ್ಲಿ ಇದ್ದು ಆತನ ವಿರುದ್ದ ಹಲವು ಅಪರಾಧ ಪ್ರಕರಣಗಳು ದಾಖಲಾಗಿದೆ. 
.
ನಾಗಲಕ್ಷ್ಮೀ ಚೌಧರಿ ಅವರು ಇಂತಹ ವಿವಾದಾತ್ಮಕ ವ್ಯಕ್ತಿಗಳೊಂದಿಗೆ ಕಾಣಿಸಿಕೊಳ್ಳುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ವಿವಾದಿತ ಬಲಪಂಥೀಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿಗೆ ಮಹಿಳಾ ಆಯೋಗದ ಅಧ್ಯಕ್ಷರು ಶುಭ ಹಾರೈಸಿದ್ದ ವಿಡಿಯೋ ಕೂಡ ವೈರಲ್ ಆಗಿ ದೊಡ್ಡ ಮಟ್ಟದ ವಿವಾದ ಸೃಷ್ಟಿಸಿತ್ತು. ಇದೀಗ ಅದರ ಬೆನ್ನಲ್ಲೇ ರೌಡಿಶೀಟರ್ ಹಿನ್ನೆಲೆಯುಳ್ಳ ವ್ಯಕ್ತಿಯೊಂದಿಗೆ ಕಾಣಿಸಿಕೊಂಡಿರುವುದು ಸಾರ್ವಜನಿಕರಲ್ಲಿ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.