ಬ್ರೇಕಿಂಗ್ ನ್ಯೂಸ್
27-05-26 04:58 pm HK News Staffer ಕರ್ನಾಟಕ
ಉಡುಪಿ, ಮೇ 27: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಕುರಿತಾಗಿ ಹೊಸ ವಿವಾದವೊಂದು ಉದ್ಭವಿಸಿದೆ. ಮಾಜಿ ರೌಡಿ-ಶೀಟರ್ ಸೋನು ಸುಧೀರ್ಗೆ ಆಶೀರ್ವಾದ ನೀಡುತ್ತಿರುವಂತೆ ಕಾಣಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ
.
ವೈರಲ್ ಆಗಿರುವ ವಿಡಿಯೋದಲ್ಲಿ, ಕಾರಿನೊಳಗೆ ಕುಳಿತಿರುವ ಸಂದರ್ಭದಲ್ಲಿ ನಾಗಲಕ್ಷ್ಮಿ ಚೌಧರಿ ಮಾಜಿ ರೌಡಿ ಸುಧೀರ್ ಗೆ ತಲೆಗೆ ಕೈ ಇಟ್ಟು ಆಶೀರ್ವಾದ ನೀಡುತ್ತಿರುವ ದೃಶ್ಯ ಕಾಣಿಸಿದ್ದು, ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆ ಹಾಗೂ ಟೀಕೆಗೆ ಕಾರಣವಾಗಿದೆ.
ಈ ಘಟನೆ ಉಡುಪಿ ಜಿಲ್ಲೆಯ ಭೇಟಿಯ ಸಂದರ್ಭದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಸಾರ್ವಜನಿಕ ಹುದ್ದೆಯಲ್ಲಿರುವವರು ಅಪರಾಧ ಹಿನ್ನೆಲೆಯಿರುವ ವ್ಯಕ್ತಿಗಳೊಂದಿಗೆ ಸಂಪರ್ಕದಲ್ಲಿರುವ ಕುರಿತು ನೆಟ್ಟಿಗರು ಪ್ರಶ್ನೆಗಳನ್ನು ಎತ್ತಿದ್ದಾರೆ.
ಸೋನು ಸುಧೀರ್ 2021 ರಿಂದ 2023ರ ಅವಧಿಯಲ್ಲಿ ಕಾಪು ಪೊಲೀಸ್ ಠಾಣೆಯ ರೌಡಿ-ಶೀಟರ್ ಪಟ್ಟಿಯಲ್ಲಿ ಇದ್ದು ಆತನ ವಿರುದ್ದ ಹಲವು ಅಪರಾಧ ಪ್ರಕರಣಗಳು ದಾಖಲಾಗಿದೆ.
.
ನಾಗಲಕ್ಷ್ಮೀ ಚೌಧರಿ ಅವರು ಇಂತಹ ವಿವಾದಾತ್ಮಕ ವ್ಯಕ್ತಿಗಳೊಂದಿಗೆ ಕಾಣಿಸಿಕೊಳ್ಳುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ವಿವಾದಿತ ಬಲಪಂಥೀಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿಗೆ ಮಹಿಳಾ ಆಯೋಗದ ಅಧ್ಯಕ್ಷರು ಶುಭ ಹಾರೈಸಿದ್ದ ವಿಡಿಯೋ ಕೂಡ ವೈರಲ್ ಆಗಿ ದೊಡ್ಡ ಮಟ್ಟದ ವಿವಾದ ಸೃಷ್ಟಿಸಿತ್ತು. ಇದೀಗ ಅದರ ಬೆನ್ನಲ್ಲೇ ರೌಡಿಶೀಟರ್ ಹಿನ್ನೆಲೆಯುಳ್ಳ ವ್ಯಕ್ತಿಯೊಂದಿಗೆ ಕಾಣಿಸಿಕೊಂಡಿರುವುದು ಸಾರ್ವಜನಿಕರಲ್ಲಿ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm