ಬ್ರೇಕಿಂಗ್ ನ್ಯೂಸ್
30-05-26 06:45 pm HK News Staffer ಕರ್ನಾಟಕ
ಬೆಂಗಳೂರು, ಮೇ 30: ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಡಿಕೆ ಶಿವಕುಮಾರ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ವಿಧಾನಸೌಧದ ಮೂರನೇ ಮಹಡಿಯ ಸಮ್ಮೇಳನ ಸಭಾಂಗಣದಲ್ಲಿ ಪಕ್ಷದ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಉಪಸ್ಥಿತಿಯಲ್ಲಿ ನಡೆದ ಪಕ್ಷದ ಶಾಸಕರ ಸಭೆಯಲ್ಲಿ ಹಂಗಾಮಿ ಸಿಎಂ ಸಿದ್ದರಾಮಯ್ಯ ಅವರು, ಡಿಕೆಶಿ ಅವರ ಹೆಸರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಸೂಚಿಸಿದ್ದು ಸಭೆಯಲ್ಲಿ ಸರ್ವಾನುಮತದ ಅಂಗೀಕಾರ ನೀಡಲಾಯಿತು.
ಇದೇ ವೇಳೆ, ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಜೂನ್ 3ರಂದು ಬುಧವಾರ ಮಧ್ಯಾಹ್ನ 3.30ಕ್ಕೆ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆಂದು ತಿಳಿದುಬಂದಿದೆ. ಕಂಠೀರವ, ವಿಧಾನಸೌಧ ಎದುರಲ್ಲಿ ಪ್ರಮಾಣವಚನ ಸಮಾರಂಭ ನಡೆಸುವ ಬಗ್ಗೆಯೂ ಚರ್ಚೆಯಾಗಿದೆ.
ಇದೇ ವೇಳೆ, ಮುಖ್ಯಮಂತ್ರಿ ಜೊತೆಗೆ 14 ಮಂದಿ ಸಚಿವರಾಗಿ ಪ್ರಮಾಣ ಸ್ವೀಕರಿಸಲಿದ್ದಾರೆ. ಮುಂದಿನ ಚುನಾವಣೆ ದೃಷ್ಟಿಯಿಂದ ಹಿರಿಯರು ಮತ್ತು ಹೊಸಬರ ಸಮ್ಮಿಳಿತ ಸಂಪುಟ ರಚನೆಗೆ ಆದ್ಯತೆ ನೀಡಲಾಗಿದೆ. ಮೊದಲ ಹಂತದಲ್ಲಿ ಪ್ರಮಾಣ ಸ್ವೀಕರಿಸುವ ಸಂಭಾವ್ಯ ಸಚಿವರ ಪಟ್ಟಿಯಲ್ಲಿ ಕೆಜೆ ಜಾರ್ಜ್, ಡಾ. ಜಿ. ಪರಮೇಶ್ವರ್, ಪ್ರಿಯಾಂಕ್ ಖರ್ಗೆ, ಲಕ್ಷ್ಮಿ ಹೆಬ್ಬಾಳ್ಕರ್, ಎಂ.ಬಿ. ಪಾಟೀಲ್, ರೂಪಾ ಶಶಿಧರ್(ಮುನಿಯಪ್ಪ ಪುತ್ರಿ), ಸತೀಶ್ ಜಾರಕಿಹೋಳಿ, ಯತೀಂದ್ರ ಸಿದ್ದರಾಮಯ್ಯ, ಜಮೀರ್ ಅಹಮದ್ ಖಾನ್, ಆರ್. ಚಲುವರಾಯಸ್ವಾಮಿ, ಬೈರತಿ ಸುರೇಶ್, ಯು.ಟಿ. ಖಾದರ್, ಕೃಷ್ಣ ಬೈರೇಗೌಡ ಮತ್ತು ಎನ್.ಎ. ಹ್ಯಾರಿಸ್ ಸ್ಥಾನ ಪಡೆಯಲಿದ್ದಾರೆ ಎನ್ನುವ ಮಾಹಿತಿ ಇದೆ.
ಕೆಲವು ಹಿರಿಯರನ್ನು ಸಚಿವ ಸ್ಥಾನದಿಂದ ಕೈಬಿಡುವ ಬಗ್ಗೆ ಪಕ್ಷದ ಹೈಕಮಾಂಡ್ ನಲ್ಲಿ ಚರ್ಚೆಯಾಗಿದೆ. ಇದರಂತೆ, ಎಚ್.ಕೆ ಪಾಟೀಲ್, ಶಿವಾನಂದ ಪಾಟೀಲ್, ಕೆ.ಎಚ್ ಮುನಿಯಪ್ಪ, ಆರ್.ಬಿ ತಿಮ್ಮಾಪುರ್ ಸೇರಿದಂತೆ ಕೆಲವು ಹಿರಿಯರನ್ನು ಕೈಬಿಡುವ ಸಾಧ್ಯತೆ ಇದೆ. ಕಾನೂನು ಸಚಿವರಾಗಿದ್ದ ಎಚ್.ಕೆ ಪಾಟೀಲ್ ಸ್ಪೀಕರ್ ಆಗುವ ಸಾಧ್ಯತೆ ಇದೆ. ಕಳೆದ ಸರ್ಕಾರದಲ್ಲಿ ಸ್ಪೀಕರ್ ಆಗಿದ್ದ ಯುಟಿ ಖಾದರ್ ಸಚಿವರಾಗಲಿದ್ದಾರೆ. ಎರಡನೇ ಹಂತದಲ್ಲಿ ಹೆಚ್ಚಿನ ಹೊಸಬರಿಗೆ ಅವಕಾಶ ಸಿಗುವ ಸಾಧ್ಯತೆಯಿದೆ.
ಶಾಸಕಾಂಗ ಪಕ್ಷದ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ಯಾವುದೇ ಚರ್ಚೆಯಾಗಿಲ್ಲ ಎನ್ನುವ ಮಾಹಿತಿ ಮೂಲಗಳಿಂದ ತಿಳಿದುಬಂದಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm