ಬ್ರೇಕಿಂಗ್ ನ್ಯೂಸ್
31-05-26 09:23 pm HK News Staffer ಕರ್ನಾಟಕ
ಬೆಂಗಳೂರು, ಮೇ 31: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಡಿ.ಕೆ. ಶಿವಕುಮಾರ್ ದೇಶದಲ್ಲೇ ಅತ್ಯಂತ ಸಿರಿವಂತ ಮುಖ್ಯಮಂತ್ರಿ ಎನಿಸಿಕೊಳ್ಳಲಿದ್ದಾರೆ. ದೇಶದ ಸಿರಿವಂತ ಶಾಸಕರ ಕುರಿತು, ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) 2025ರಲ್ಲಿ ಬಿಡುಗಡೆ ಮಾಡಿದ್ದ ವರದಿಯಲ್ಲಿ ಅಧಿಕೃತವಾಗಿ ಹೆಚ್ಚಿನ ಸಂಪತ್ತು ಘೋಷಿಸಿಕೊಂಡವರ ಮಾಹಿತಿಗಳಿದ್ದವು.
ಚುನಾವಣೆ ಸಂದರ್ಭದಲ್ಲಿ ಸಲ್ಲಿಸಿದ ಪ್ರಮಾಣಪತ್ರಗಳನ್ನು ವಿಶ್ಲೇಷಿಸಿ ತಯಾರಿಸಿದ್ದ ವರದಿಯಲ್ಲಿ ದೇಶದ ಶ್ರೀಮಂತ ಶಾಸಕರ ಪಟ್ಟಿಯಲ್ಲಿ ಮಹಾರಾಷ್ಟ್ರದ ಘಾಟ್ಕೋಪರ್ ಪೂರ್ವ ವಿಧಾನಸಭಾ ಕ್ಷೇತ್ರದ ಶಾಸಕ ಪರಾಗ್ ಶಾ ಅಗ್ರಸ್ಥಾನದಲ್ಲಿದ್ದಾರೆ. 2024ರ ಚುನಾವಣೆಯಲ್ಲಿ ಬರೋಬ್ಬರಿ ₹ 3,383 ಕೋಟಿ ಆಸ್ತಿ ಘೋಷಣೆ ಮಾಡಿದ್ದರು. ರಾಮನಗರ ಜಿಲ್ಲೆಯ ಕನಕಪುರ ಕ್ಷೇತ್ರವನ್ನು ಪ್ರತಿನಿಧಿಸುವ ಡಿ.ಕೆ. ಶಿವಕುಮಾರ್ ಎರಡನೇ ಸ್ಥಾನದಲ್ಲಿದ್ದು, ತಮ್ಮ ಬಳಿ ₹ 1,413 ಕೋಟಿ ಮೊತ್ತದ ಆಸ್ತಿ ಇದೆ ಎಂದು 2023ರ ವಿಧಾನಸಭಾ ಚುನಾವಣೆ ವೇಳೆ ಪ್ರಮಾಣಪತ್ರ ಸಲ್ಲಿಸಿದ್ದರು. ಕರ್ನಾಟಕದವರೇ ಆದ ಕೆ.ಎಚ್. ಪುಟ್ಟಸ್ವಾಮಿ ಗೌಡ (ಗೌರಿಬಿದನೂರು ಕ್ಷೇತ್ರ – ₹ 1,267 ಕೋಟಿ), ಪ್ರಿಯಾ ಕೃಷ್ಣ (ಗೋವಿಂದರಾಜನಗರ ಕ್ಷೇತ್ರ – ₹ 1,267 ಕೋಟಿ) ನಂತರದ ಸ್ಥಾನಗಳಲ್ಲಿ ಇದ್ದಾರೆ.
ಮೂವರು ಸಿರಿವಂತರೂ ದಕ್ಷಿಣದವರೇ!
2025ರ ಎಡಿಆರ್ ವರದಿ ಪ್ರಕಾರ, ಡಿ.ಕೆ.ಶಿವಕುಮಾರ್ ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಎನಿಸಿಕೊಳ್ಳಲಿದ್ದಾರೆ. ಅವರ ಬಳಿ ಇರುವ ಒಟ್ಟು ಆಸ್ತಿಯಲ್ಲಿ ₹ 1,140 ಕೋಟಿ ಸ್ಥಿರಾಸ್ತಿಯಾಗಿದ್ದು, ಉಳಿದ ₹ 273 ಕೋಟಿ ಮೌಲ್ಯದ ಚರಾಸ್ತಿ ಸೇರಿದ್ದಾಗಿ ಮೂರು ವರ್ಷಗಳ ಹಿಂದೆ ಘೋಷಿಸಲಾಗಿತ್ತು.
ಆಂಧ್ರಪ್ರದೇಶದ ಎನ್. ಚಂದ್ರಬಾಬು ನಾಯ್ಡು ಅವರು ಶ್ರೀಮಂತ ಮುಖ್ಯಮಂತ್ರಿಗಳ ಸಾಲಿನಲ್ಲಿ ಸದ್ಯ ಅಗ್ರಸ್ಥಾನದಲ್ಲಿದ್ದಾರೆ. 2024ರ ವಿಧಾನಸಭೆ ಚುನಾವಣೆಗೂ ಮುನ್ನ ಅವರು ₹ 931 ಕೋಟಿ ಆಸ್ತಿ ಘೋಷಣೆ ಮಾಡಿಕೊಂಡಿದ್ದರು. ಅವರನ್ನು ಜೂನ್ 3ರಂದು ಪ್ರಮಾಣ ಸ್ವೀಕರಿಸಿದ ಬಳಿಕ ಡಿಕೆಶಿ ಹಿಂದಿಕ್ಕಲಿದ್ದಾರೆ. 648 ಮೊತ್ತದ ಅಧಿಕೃತ ಆಸ್ತಿ ಘೋಷಿಸಿರುವ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಸಿರಿವಂತ ಸಿಎಂಗಳ ಪೈಕಿ ಮೂರನೇ ಸ್ಥಾನದಲ್ಲಿದ್ದಾರೆ. ಇವರು ಮೂವರೂ ದಕ್ಷಿಣ ಭಾರತದವರೇ ಎಂಬುದು ವಿಶೇಷ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm