ಬ್ರೇಕಿಂಗ್ ನ್ಯೂಸ್
03-06-26 12:44 pm HK News Staffer ಕರ್ನಾಟಕ
ಬೆಂಗಳೂರು, ಜೂನ್ 3: ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಸಚಿವರಾಗುವುದು ಬಹುತೇಕ ಖಚಿತವಾಗಿರುವ ಹಿನ್ನೆಲೆಯಲ್ಲಿ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಲೋಕಭವನದಲ್ಲಿ ಡೆಪ್ಯುಟಿ ಸ್ಪೀಕರ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ ಖಾದರ್, ನೂತನ ಸಚಿವ ಸಂಪುಟ ಸೇರ್ಪಡೆಗೆ ಅಧಿಕೃತ ಸಿದ್ಧತೆ ಆರಂಭಿಸಿದ್ದಾರೆ.
ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲು ಬರುವಂತೆ ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಂದ ಕರೆ ಬಂದ ಬೆನ್ನಲ್ಲೇ ಖಾದರ್ ಈ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.
ರಾಜ್ಯಪಾಲರಿಗೆ ಕೃತಜ್ಞತೆ ;
ಸ್ಪೀಕರ್ ಆಗಿ ಮೂರು ವರ್ಷಗಳ ಅವಧಿಯಲ್ಲಿ ಸಹಕಾರ ನೀಡಿದ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರಿಗೆ ಯು.ಟಿ. ಖಾದರ್ ಕೃತಜ್ಞತೆ ಸಲ್ಲಿಸಿದರು. ಲೋಕಭವನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿದ ಅವರು, ತಮ್ಮ ರಾಜೀನಾಮೆ ಕುರಿತು ಮಾಹಿತಿ ನೀಡಿದ್ದು, ಸ್ಪೀಕರ್ ಆಗಿ ಕಾರ್ಯನಿರ್ವಹಿಸಲು ಅವಕಾಶ ನೀಡಿದ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ.
ಯಾವ ಜವಾಬ್ದಾರಿ ಕೊಟ್ಟರೂ ನಿಭಾಯಿಸುತ್ತೇನೆ
ಸಚಿವ ಸ್ಥಾನ ಕುರಿತು ಪ್ರತಿಕ್ರಿಯಿಸಿದ ಯು.ಟಿ. ಖಾದರ್, ಯಾವುದೇ ನಿರ್ದಿಷ್ಟ ಖಾತೆಗೆ ಬೇಡಿಕೆ ಇಟ್ಟಿಲ್ಲ ಎಂದು ಸ್ಪಷ್ಟಪಡಿಸಿದ್ದು, “ನಾನು ಯಾವುದೇ ಖಾತೆಗಾಗಿ ಒತ್ತಡ ಹಾಕಿಲ್ಲ. ಆರೋಗ್ಯ ಖಾತೆ ಅಥವಾ ವಸತಿ ಖಾತೆ ಸಿಕ್ಕರೆ ಸಂತೋಷ. ಆದರೆ ಪಕ್ಷದ ನಾಯಕರು ಯಾವ ಜವಾಬ್ದಾರಿ ಕೊಟ್ಟರೂ ಅದನ್ನು ಸಮರ್ಥವಾಗಿ ನಿಭಾಯಿಸುತ್ತೇನೆ. ಉಪಮುಖ್ಯಮಂತ್ರಿ ಸ್ಥಾನ ಕೊಟ್ಟರೂ ನಿರ್ವಹಿಸಲು ಸಿದ್ಧನಿದ್ದೇನೆ. ಕ್ರಿಕೆಟ್ನಲ್ಲಿ ಯಾವ ಬಾಲ್ ಬಂದರೂ ಬ್ಯಾಟಿಂಗ್ ಮಾಡುವಂತೆ, ಪಕ್ಷ ನೀಡುವ ಯಾವುದೇ ಜವಾಬ್ದಾರಿಯನ್ನು ಸ್ವೀಕರಿಸುತ್ತೇನೆ” ಎಂದು ಹೇಳಿದರು.



ಆರೋಗ್ಯ ಖಾತೆ ಸಿಗುವ ಸಾಧ್ಯತೆ ?
ಈ ಹಿಂದೆ ಆರೋಗ್ಯ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಅನುಭವ ಹೊಂದಿರುವ ಯು.ಟಿ. ಖಾದರ್ ಅವರಿಗೆ ಡಿಕೆ ಶಿವಕುಮಾರ್ ಸರ್ಕಾರದಲ್ಲೂ ಆರೋಗ್ಯ ಖಾತೆಯೇ ಸಿಗುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ಆದರೆ ಅಂತಿಮ ನಿರ್ಧಾರ ಹೈಕಮಾಂಡ್ ಹಾಗೂ ಮುಖ್ಯಮಂತ್ರಿ ಕೈಯಲ್ಲಿದ್ದು, ಅಧಿಕೃತ ಘೋಷಣೆಗಾಗಿ ಕಾದು ನೋಡಬೇಕಿದೆ.
ಬೆಂಬಲಿಗರ ಸಂಭ್ರಮಾಚರಣೆ ;
ಖಾದರ್ ಸಚಿವರಾಗುವುದು ಖಚಿತ ಎಂಬ ಸುದ್ದಿ ಹೊರಬೀಳುತ್ತಿದ್ದಂತೆಯೇ ಅವರ ಬೆಂಬಲಿಗರು ಸಂಭ್ರಮಾಚರಣೆಯಲ್ಲಿ ತೊಡಗಿದರು. ಬೆಂಗಳೂರಿನ ಗಾಲ್ಫ್ ಗ್ರೌಂಡ್ ಸಮೀಪದ ಖಾದರ್ ನಿವಾಸಕ್ಕೆ ಆಗಮಿಸಿದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹೂಗುಚ್ಛ ನೀಡಿ ಶುಭಾಶಯ ಕೋರಿದರು. ಹಲವೆಡೆ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂತಸ ವ್ಯಕ್ತಪಡಿಸಿದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm