ಬ್ರೇಕಿಂಗ್ ನ್ಯೂಸ್
06-06-26 12:49 pm HK News Staffer ಕರ್ನಾಟಕ
ಬೆಂಗಳೂರು, ಜೂನ್ 06: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಕಾಂಗ್ರೆಸ್ ಸರ್ಕಾರ ರಚನೆಯಾದ ಎರಡೇ ದಿನದಲ್ಲಿ ಭುಗಿಲೆದ್ದಿದ್ದ ಸಚಿವ ರಾಮಲಿಂಗಾರೆಡ್ಡಿ ರಾಜೀನಾಮೆ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಬೆಂಗಳೂರು ಅಭಿವೃದ್ಧಿ ಖಾತೆ ಕೈತಪ್ಪಿದ ಹಿನ್ನೆಲೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ರಾಮಲಿಂಗಾರೆಡ್ಡಿ ಅವರನ್ನು ಮನವೊಲಿಸಲು ಸಿಎಂ ಡಿಕೆಶಿ ಸೇರಿದಂತೆ ಕಾಂಗ್ರೆಸ್ ವರಿಷ್ಠರು ನಡೆಸಿದ ಪ್ರಯತ್ನಗಳು ಫಲ ನೀಡಿರುವ ಲಕ್ಷಣಗಳು ಕಾಣಿಸುತ್ತಿವೆ.
ಮೂಲಗಳ ಪ್ರಕಾರ, ರಾಮಲಿಂಗಾರೆಡ್ಡಿ ತಮ್ಮ ರಾಜೀನಾಮೆಯನ್ನು ಬಹುತೇಕ ವಾಪಸ್ ಪಡೆಯಲು ಒಪ್ಪಿದ್ದಾರೆ ಎನ್ನಲಾಗುತ್ತಿದೆಯಾದರೂ, ಈ ಬಗ್ಗೆ ಇನ್ನೂ ಯಾವುದೇ ಅಧಿಕೃತ ಘೋಷಣೆ ಹೊರಬಿದ್ದಿಲ್ಲ. ಅಲ್ಲದೇ ಅವರು ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುತ್ತಾರೆಯೇ ಅಥವಾ ಖಾತೆ ಬದಲಾವಣೆ ಆಗುತ್ತದೆಯೇ ಎಂಬುದು ಇನ್ನೂ ಸಸ್ಪೆನ್ಸ್ ಆಗಿದೆ.
ತಡರಾತ್ರಿ 2.5 ಗಂಟೆ ಸಂಧಾನ ಸಭೆ
ಶುಕ್ರವಾರ ತಡರಾತ್ರಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ರಾಮಲಿಂಗಾರೆಡ್ಡಿ ನಡುವೆ ಸುಮಾರು ಎರಡೂವರೆ ಗಂಟೆಗಳ ಕಾಲ ಒನ್-ಟು-ಒನ್ ಮಾತುಕತೆ ನಡೆದಿದೆ. ಈ ವೇಳೆ ಉಂಟಾಗಿದ್ದ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಲು ಸಿಎಂ ಸುದೀರ್ಘ ಚರ್ಚೆ ನಡೆಸಿದ್ದಾರೆ. ಮಾತುಕತೆ ಬಳಿಕ ಪ್ರತಿಕ್ರಿಯಿಸಿದ ರಾಮಲಿಂಗಾರೆಡ್ಡಿ, “ಸಿಎಂ ಏನು ಹೇಳಿದ್ದಾರೋ ಅದನ್ನೇ ನಾನು ಹೇಳುತ್ತೇನೆ. ಎಲ್ಲವೂ ನಿವಾರಣೆಯಾಗಿದೆ” ಎಂದಷ್ಟೇ ಹೇಳಿ, ರಾಜೀನಾಮೆ ವಾಪಸ್ ಪಡೆಯುವ ಬಗ್ಗೆ ಅಥವಾ ಜಲಸಂಪನ್ಮೂಲ ಖಾತೆಯಲ್ಲಿ ಮುಂದುವರಿಯುವ ಬಗ್ಗೆ ಯಾವುದೇ ಸ್ಪಷ್ಟನೆ ನೀಡಲಿಲ್ಲ.
‘ಇದು ಫ್ಯಾಮಿಲಿ ಪ್ರಾಬ್ಲಂ’ ಎಂದ ಡಿಕೆಶಿ
ಇನ್ನೊಂದೆಡೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡ ಭಿನ್ನಮತವನ್ನು ತಣ್ಣಗಾಗಿಸುವ ಪ್ರಯತ್ನ ಮಾಡಿದ್ದಾರೆ. “ನಾನು, ರಾಮಲಿಂಗಾರೆಡ್ಡಿ ಮತ್ತು ರೇವಣ್ಣ 1980ರ ದಶಕದಿಂದ ಸ್ನೇಹಿತರು. ನಾವು ಪಕ್ಷದಲ್ಲಿ ಬೆಳೆದವರು. ಬೆಂಗಳೂರಿನ ಅಭಿವೃದ್ಧಿಗಾಗಿ ಕೆಲಸ ಮಾಡುವವರು. ಇದು ಫ್ಯಾಮಿಲಿ ಪ್ರಾಬ್ಲಂ. ಎಲ್ಲರೂ ಕೂತು ಮಾತನಾಡಿದ್ದೇವೆ. ಸಮಸ್ಯೆ ಪರಿಹಾರವಾಗಿದೆ,” ಎಂದು ಡಿಕೆಶಿ ಹೇಳಿದ್ದಾರೆ.
ಖಾತೆ ಬದಲಾವಣೆ ವಿಚಾರದಲ್ಲಿ ರಾಮಲಿಂಗಾರೆಡ್ಡಿ ಒಪ್ಪಿಕೊಂಡಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಮಿಸ್ ಕಮ್ಯೂನಿಕೇಶನ್ ಆಗಿದೆ” ಎಂದಷ್ಟೇ ಹೇಳಿ ಹೆಚ್ಚಿನ ಮಾಹಿತಿ ಬಹಿರಂಗಪಡಿಸಲಿಲ್ಲ.
ಬೆಂಗಳೂರು ಅಭಿವೃದ್ಧಿ ಖಾತೆಗಾಗಿ ರೆಡ್ಡಿ ಪಟ್ಟು
ಸಂಪೂರ್ಣ ವಿವಾದದ ಕೇಂದ್ರಬಿಂದು ಬೆಂಗಳೂರು ಅಭಿವೃದ್ಧಿ ಖಾತೆಯಾಗಿದೆ. ಬಿಬಿಎಂಪಿ, ಬಿಡಿಎ, ಬಿಎಂಆರ್ಸಿಎಲ್, ಜಲಮಂಡಳಿ ಸೇರಿದಂತೆ ಬೆಂಗಳೂರಿನ ಪ್ರಮುಖ ಅಭಿವೃದ್ಧಿ ಸಂಸ್ಥೆಗಳು ಈ ಇಲಾಖೆಯ ವ್ಯಾಪ್ತಿಗೆ ಬರುವುದರಿಂದ ಇದನ್ನು ಸರ್ಕಾರದ ಅತ್ಯಂತ ಪ್ರಭಾವಿ ಖಾತೆಗಳಲ್ಲಿ ಒಂದೆಂದು ಪರಿಗಣಿಸಲಾಗುತ್ತದೆ. ಅಂತಿಮ ನಿರ್ಧಾರವನ್ನು ಪಕ್ಷದ ರಾಷ್ಟ್ರೀಯ ನಾಯಕತ್ವವೇ ತೆಗೆದುಕೊಳ್ಳಲಿದೆ ಎನ್ನುವ ಸಂದೇಶವನ್ನು ಡಿಕೆಶಿ ರವಾನಿಸಿದ್ದಾರೆ. ಹೀಗಾಗಿ ಕಾಂಗ್ರೆಸ್ ವಲಯದಲ್ಲಿ ಎಲ್ಲರ ಚಿತ್ತ ಹೈಕಮಾಂಡ್ ನಿರ್ಧಾರದತ್ತ ನೆಟ್ಟಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm