ಬ್ರೇಕಿಂಗ್ ನ್ಯೂಸ್
11-06-26 01:53 pm HK News Staffer ಕರ್ನಾಟಕ
ಪುತ್ತೂರು, ಜೂನ್ 11 : ಬಿಜೆಪಿ ಮುಖಂಡರಾಗಿದ್ದ ಜಗನ್ನಿವಾಸ ರಾವ್ ಅವರ ಪುತ್ರ ಕೃಷ್ಣ ಜೆ. ರಾವ್ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣವನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳುವ ಪ್ರಸ್ತಾಪವನ್ನು ಆರೋಪಿ ಪರ ವಕೀಲರು ಹೈಕೋರ್ಟ್ ಮುಂದೆ ಮಂಡಿಸಿದ್ದಾರೆ.
ಅತ್ಯಾಚಾರ ಪ್ರಕರಣದ ತನಿಖೆಗೆ ತಡೆ ಕೋರಿ ಆರೋಪಿ ಕೃಷ್ಣ ಜೆ. ರಾವ್ ಸಲ್ಲಿಸಿರುವ ರಿಟ್ ಅರ್ಜಿ ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಿತ್ತು. ಈ ವೇಳೆ ಕೃಷ್ಣ ರಾವ್ ಪರ ಹಾಜರಾಗಿದ್ದ ಹಿರಿಯ ವಕೀಲ ಪಿ.ಪಿ. ಹೆಗ್ಡೆ, “ಪ್ರಕರಣವನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಕಕ್ಷಿದಾರರು ಸಿದ್ಧರಿದ್ದು, ಈ ಪ್ರಸ್ತಾಪವನ್ನು ಪರಿಗಣಿಸಬೇಕು” ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದರು.
ಆರೋಪಿ ಪರ ವಕೀಲರ ಪ್ರಸ್ತಾಪವನ್ನು ಪೀಠವು ಪರಿಗಣಿಸಿದ್ದು ಇದೇ ಜೂನ್ 19ರಂದು ಸಂತ್ರಸ್ತೆ, ಆರೋಪಿ ಹಾಗೂ ಪ್ರಕರಣಕ್ಕೆ ಸಂಬಂಧಪಟ್ಟ ಪ್ರಮುಖರು ಹೈಕೋರ್ಟ್ ಮಧ್ಯಸ್ಥಿಕೆ ಕೇಂದ್ರಕ್ಕೆ ಹಾಜರಾಗಬೇಕು ಎಂದು ನ್ಯಾಯಪೀಠವು ಸೂಚನೆ ನೀಡಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಜೂನ್ 30ಕ್ಕೆ ಮುಂದೂಡಿದೆ.
ಇದೇ ಸಂದರ್ಭದಲ್ಲಿ ಸಂತ್ರಸ್ತೆಯ ಜೀವನಾಂಶಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ನಿರ್ದೇಶನ ನೀಡಿದೆ. ಈಗಾಗಲೇ ಹೈಕೋರ್ಟ್ನಲ್ಲಿ ಠೇವಣಿ ಇಡಲಾಗಿರುವ, ಸಂತ್ರಸ್ತೆಗೆ ನೀಡಬೇಕಾದ ಮೊದಲ ತಿಂಗಳ ಜೀವನಾಂಶ ಪರಿಹಾರ ಮೊತ್ತ ₹75,000 ವನ್ನು ತಕ್ಷಣವೇ ಸಂತ್ರಸ್ತೆಗೆ ಪಾವತಿಸಲು ರಿಜಿಸ್ಟ್ರಿಗೆ ಸೂಚಿಸಿದೆ. ಇದರೊಂದಿಗೆ, ಎರಡನೇ ತಿಂಗಳ ಪರಿಹಾರ ಮೊತ್ತವಾದ ₹75,000 ಅನ್ನು ಮುಂದಿನ ನಾಲ್ಕು ದಿನಗಳ ಒಳಗಾಗಿ ನ್ಯಾಯಾಲಯದಲ್ಲಿ ಕಡ್ಡಾಯವಾಗಿ ಪಾವತಿಸಬೇಕು ಎಂದು ಆರೋಪಿ ಕೃಷ್ಣ ಜೆ. ರಾವ್ಗೆ ಹೈಕೋರ್ಟ್ ಆದೇಶ ಹೊರಡಿಸಿದೆ.
ಒಂದೆಡೆ ಪ್ರತಿ ತಿಂಗಳು ದೊಡ್ಡ ಮೊತ್ತದ ಜೀವನಾಂಶ ನೀಡುವುದು, ಮತ್ತೊಂದು ಕಡೆ ಪ್ರಕರಣದ ಕಿರಿ ಕಿರಿಯಿಂದ ಬೇಸತ್ತ ಆರೋಪಿ ಕೃಷ್ಣ ರಾವ್ ಪರ ಕುಟುಂಬಸ್ಥರು ಇದೀಗ ರಾಜಿ ಸಂಧಾನ ಮೂಲಕ ಇತ್ಯರ್ಥಗೊಳಿಸಲು ಮುಂದಾಗಿದ್ದಾರೆ. ಈ ಹಿಂದೆ ಮದುವೆ, ರಾಜಿ ಸಂಧಾನಕ್ಕೆ ವಿಶ್ವಕರ್ಮ ಸಮಾಜದ ಮುಖಂಡರು ಪ್ರಯತ್ನಿಸಿದರೂ ಸಾಧ್ಯವಾಗಿರಲಿಲ್ಲ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm