ಬ್ರೇಕಿಂಗ್ ನ್ಯೂಸ್
17-06-26 06:35 pm HK News Desk ಕರ್ನಾಟಕ
ದಾವಣಗೆರೆ, ಜೂನ್ 17: ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿದ್ದ ಬಾಡಿ ಬಿಲ್ಡರ್ವೊಬ್ಬರು ಜಿಮ್ ಮುಗಿಸಿ ಮನೆಗೆ ಬಂದ ಕೆಲ ಹೊತ್ತಲ್ಲೇ ದಿಢೀರ್ ಕುಸಿದು ಬಿದ್ದು ಕೊನೆಯುಸಿರೆಳೆದ ಆಘಾತಕಾರಿ ಘಟನೆ ದಾವಣಗೆರೆಯ ಕೆ.ಟಿ.ಜಂಬಣ್ಣನಗರದಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ಕೆಟಿಜೆ ನಗರದ ನಿವಾಸಿ ಸುಶೀಲ್ ಕುಮಾರ್ (26) ಮೃತಪಟ್ಟ ಬಾಡಿ ಬಿಲ್ಡರ್. ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಹಲವು ಪ್ರಶಸ್ತಿ ಗಳಿಸಿದ್ದ ಇವರು ಅಂತಾರಾಷ್ಟ್ರೀಯ ಮಟ್ಟದ ಬಾಡಿ ಬಿಲ್ಡಂಗ್ ವೇದಿಕೆಗಳಿಗೆ ರೆಡಿಯಾಗುತ್ತಿದ್ದರು. ಈ ನಡುವೆ ಸುಶೀಲ್ ಕುಮಾರ್ ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿದ್ದು, ಹೃದಯಾಘಾತದ ಶಂಕೆ ವ್ಯಕ್ತವಾಗಿದೆ.
ಮಂಗಳವಾರ ರಾತ್ರಿ 8-30 ಈ ಘಟನೆ ನಡೆದಿದ್ದು, ಜಿಮ್ ಮುಗಿಸಿಕೊಂಡು ಸುಶೀಲ್ ಮನೆಗೆ ಬಂದಿದ್ದರು. ತಲೆ ಸುತ್ತುತ್ತಿರುವುದಾಗಿ ಹೇಳಿದ ಕೆಲವೇ ಕ್ಷಣದಲ್ಲೇ ಕುಸಿದು ಬಿದ್ದಿದ್ದಾರೆ. ಕೂಡಲೇ ಕುಟುಂಬಸ್ಥರು ಆಸ್ಪತ್ರೆಗೆ ಸಾಗಿಸಿದ್ದು, ದಾರಿ ಮಧ್ಯದಲ್ಲೇ ಸಾವನ್ನಪ್ಪಿದ್ದಾರೆ. ರಕ್ತದೊತ್ತಡ ಕಡಿಮೆಯಾಗಿ (ಲೋ ಬಿಪಿ) ಹೃದಯಾಘಾತದಿಂದ ಸಾವನ್ನಪ್ಪಿರಬಹುದು ಎಂದು ವೈದ್ಯರು ಹೇಳಿದ್ದಾರೆ.
ಯಾವಾಗಲೂ ತನ್ನ ಜತೆಗಿರುವ ಯುವಕರು ಏನಾದರೂ ಸಾಧನೆ ಮಾಡಬೇಕು, ನನಗಿಂತ ಎತ್ತರಕ್ಕೆ ಬೆಳೆಯಬೇಕು ಎಂದು ನಿತ್ಯ ಹತ್ತಾರು ಯುವಕರಿಗೆ ತರಬೇತಿ ನೀಡುತ್ತಿದ್ದ ಸುಶೀಲ್ ಅವರನ್ನು ಕಳೆದುಕೊಂಡು ಸ್ನೇಹಿತರು ಕಣ್ಣೀರಿಟ್ಟರು.
ಸುಶೀಲ್ ಕುಮಾರ್ ಅವರ ತಾಯಿ ದೇವಮ್ಮ ಜಿಲ್ಲಾಸ್ಪತ್ರೆಯಲ್ಲಿ ಡಿ ಗ್ರೂಪ್ನಲ್ಲಿ ಕೆಲಸ ಮಾಡುತ್ತಿದ್ದು, ಮುಂದೆ ನನಗೆ ಆಸರೆ ಯಾರು ಎಂದು ಗೋಳಾಡುತ್ತಿರುವುದು ಎಲ್ಲರನ್ನೂ ಭಾವುಕರನ್ನಾಗಿಸಿತು. ಯಾವಾಗಲೂ ಲವಲವಿಕೆಯಿಂದ ಇದ್ದ ಯುವಕ ಹೀಗೆ ಕುಸಿದು ಬಿದ್ದು ಇಹಲೋಕ ತ್ಯಜಿಸಿರುವುದು ಸ್ನೇಹಿತರು ಸೇರಿದಂತೆ ನೆರೆಹೊರೆಯವರಿಗೆ ದಿಗ್ಭ್ರಮೆ ಮೂಡಿಸಿದೆ.
ಇತ್ತೀಚೆಗೆ, ಒಂದನೇ ತರಗತಿಯ ವಿದ್ಯಾರ್ಥಿಯೋರ್ವ ಶಾಲಾ ಅವರಣದಲ್ಲಿಯೇ ದಿಢೀರ್ ಕುಸಿದು ಬಿದ್ದು ಮೃತಪಟ್ಟ ಘಟನೆ ಜಿಲ್ಲೆಯ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹಾಳಸಸಿ ಸರ್ಕಾರಿ ಶಾಲೆಯಲ್ಲಿ ನಡೆದಿತ್ತು.
ತ್ರಿಲೋಕ್ ಜೈನ್ (6) ಎಂಬಾತನೇ ಸಾವನ್ನಪ್ಪಿದ ಬಾಲಕ. ತ್ರಿಲೋಕ್ ಸಂಜೆ ಶಾಲೆ ಮುಗಿದ ನಂತರ ಮನೆಗೆ ಹೋಗಲು ಮೈದಾನದಲ್ಲಿ ನಿಂತಿದ್ದ. ಈ ಸಂದರ್ಭದಲ್ಲಿ ಏಕಾಏಕಿ ಕುಸಿದು ಬಿದ್ದಿದ್ದಾನೆ. ತಕ್ಷಣ ಶಾಲಾ ಶಿಕ್ಷಕರು ಉಪಚರಿಸಿದ್ದರು. ಬಳಿಕ ಸ್ಥಳೀಯ ಖಾಸಗಿ ಕ್ಲಿನಿಕ್ಗೆ ಕರೆದುಕೊಂಡು ಹೋಗಿದ್ದರು. ಅಲ್ಲಿ ವೈದ್ಯರು ಇಲ್ಲದ ಕಾರಣ ಚಿಕಿತ್ಸೆಗಾಗಿ ಕುಂದಾಪುರದ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗಲೇ ದಾರಿ ಮಧ್ಯೆ ಬಾಲಕ ಕೊನೆಯುಸಿರೆಳೆದಿದ್ದಾನೆ. ತ್ರಿಲೋಕ್ ಹಾಳಸಸಿ ಗ್ರಾಮದ ಪಕ್ಕದ ಕೊಡನವಳ್ಳಿ ನಿವಾಸಿಗಳಾದ ಗೌತಮ್ ಜೈನ್ ಹಾಗೂ ಶಿಲ್ಪಾ ದಂಪತಿಯ ಪುತ್ರನಾಗಿದ್ದ. ಈತ ಇದೇ ಜೂನ್ 1ರಂದು ಶಾಲೆಗೆ ದಾಖಲಾಗಿದ್ದ
17-06-26 10:12 pm
HK News Staffer
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
ಪವಿತ್ರ ಧರ್ಮಸ್ಥಳ ವಿರುದ್ಧ ನಾನ್ಯಾಕೆ ಷಡ್ಯಂತ್ರ ಮಾಡ...
17-06-26 05:12 pm
ಆರೆಸ್ಸೆಸ್ ನೋಂದಣಿ ; ನನ್ನ ಪತ್ರ ವೈಯಕ್ತಿಕ ಅಲ್ಲ, ರ...
17-06-26 04:48 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
17-06-26 01:41 pm
HK News Staffer
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am