ಬ್ರೇಕಿಂಗ್ ನ್ಯೂಸ್
17-06-26 06:59 pm HK News Desk ಕರ್ನಾಟಕ
ಶಿವಮೊಗ್ಗ, ಜೂ 17: ಕಾನೂನು ಜ್ಞಾನ ಇಲ್ಲದ ಗೃಹಮಂತ್ರಿ ಕರ್ನಾಟಕದಲ್ಲಿದ್ದಾರೆ. ಆರ್ಎಸ್ಎಸ್ ಲೆಕ್ಕ ಕೇಳಲು ಪ್ರಿಯಾಂಕ್ ಖರ್ಗೆ ಯಾರು ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಪ್ರಶ್ನಿಸಿದ್ದಾರೆ.
ಶಿವಮೊಗ್ಗ ಪ್ರೆಸ್ ಟ್ರಸ್ಟ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ ಎಂಬ ಕಸವನ್ನು ಸೈಡ್ಗೆ ಹಾಕಬೇಕು. ಪ್ರಿಯಾಂಕ್ ಖರ್ಗೆ ಪ್ರಚಾರಕ್ಕೋಸ್ಕರ ಆರ್ಎಸ್ಎಸ್ ಇಟ್ಟುಕೊಂಡು ಹೊರಟಿದ್ದಾರೆ. ತಾಕತ್ತು ಇದ್ದರೆ ಕಾನೂನು ಕ್ರಮ ತೆಗೆದುಕೊಳ್ಳಿ, ಅದನ್ನು ಬಿಟ್ಟು ಪ್ರಚಾರಕ್ಕಾಗಿ ಹೀಗೆ ಮಾಡುವುದು ಸರಿ ಅಲ್ಲ. ಮಂತ್ರಿಯಾಗಿ ಏನು ಬೇಕಾದರೂ ಕ್ರಮ ತೆಗೆದುಕೊಳ್ಳಬಹುದು. ಅವರು ಕಾನೂನು ಪ್ರಕಾರ ಕ್ರಮ ಕೈಗೊಳ್ಳಲು ಹೋದರೆ ವಿಫಲರಾಗ್ತಾರೆ ಅಂತ ಗೊತ್ತಿದೆ. ಆರ್ಎಸ್ಎಸ್ ಬಗ್ಗೆ ಮಾತಾಡಿದರೆ ಪ್ರಚಾರ ಸಿಗುತ್ತೆ ಅಂತ ಮಾತಾಡುತ್ತಿದ್ದಾರೆ, ನಿಂಗೆ ತಾಕತ್ತಿದ್ರೆ RSS ಮೇಲೆ ಕ್ರಮ ತೆಗೆದುಕೋ ಎಂದು ಕಿಡಿಕಾರಿದರು
ಆರ್ಎಸ್ಎಸ್ ಅಂದವರು ಎಲ್ಲಾ ನೆಲಕಚ್ಚಿ ಹೋಗಿದ್ದಾರೆ. ಪ್ರಿಯಾಂಕ್ ಖರ್ಗೆ ಸಹ ನೆಲ ಕಚ್ಚಿ ಹೋಗುತ್ತಾರೆ. ನೀವು ಯಾರು ಲೆಕ್ಕ ಕೇಳೋಕೆ? ನೀವು ಎಷ್ಟು ಕೊಟ್ಟಿದ್ದೀರಿ? ಇವರೊಬ್ಬ ಮಂತ್ರಿಯಾಗಿ ಹೇಳೋಕೆ ಅಧಿಕಾರ ಕೊಟ್ಟವರ್ಯಾರು? ಎಂದು ಏಕ ವಚನದಲ್ಲಿಯೇ ಪ್ರಶ್ನಿಸಿದರು.
ಆರ್ಎಸ್ಎಸ್ನ ಹಿರಿಯರಾದ ಮೋಹನ್ ಭಾಗವತ್ ಅವರು ಈ ಚಿಲ್ಲರೆಗೆ ಉತ್ತರ ಕೊಟ್ಟಿದ್ದಾರೆ. ರಾಜ್ಯದಲ್ಲಿ ಸಾವಿರಾರು ಕಡೆ ಆರ್ಎಸ್ಎಸ್ ಪಥಸಂಚಲನ ನಡೆಯಿತು. ಸಣ್ಣ ಗಲಾಟೆ ಸಹ ಆಗಲಿಲ್ಲ. ನಿಮ್ಮ ಎದುರಿಗೇನೇ ನಿಮ್ಮ ರಾಜ್ಯಸಭಾ ಸದಸ್ಯರು ಪಾಕಿಸ್ತಾನ ಜಿಂದಾಬಾದ್ ಎಂದರು. ಏನು ಕ್ರಮ ತೆಗೆದುಕೊಂಡಿದ್ದೀರಿ ಎಂದು ಪ್ರಶ್ನಿಸಿದರು.
ಇಂತಹ ಚಿಲ್ಲರೆಗೆ ಉತ್ತರ ಕೊಡಬೇಡಿ ಅಂತ ಮೋಹನ್ ಭಾಗವತ್ ಅವರಿಗೆ ಕೇಳಿಕೊಳ್ಳುತ್ತೇನೆ. ನಮ್ಮ ದೇಶದಲ್ಲಿ ಭಯೋತ್ಪಾದಕ ಶಕ್ತಿಗಳು ಜಾಸ್ತಿ ಇದೆ. ಹಾಗಾಗಿ ಮೋಹನ್ ಭಾಗವತ್ ಅವರಿಗೆ ಝೆಡ್ ಪ್ಲಸ್ ಭದ್ರತೆ ಕೊಟ್ಟಿದ್ದಾರೆ. ಇವನ್ಯಾರು ಇವನ್ನೆಲ್ಲ ಕೇಳೋಕೆ ಎಂದರು.
ಪ್ರಚಾರಕ್ಕಾಗಿ ಪ್ರಿಯಾಂಕ್ ಖರ್ಗೆ ಹುಚ್ಚು ಹುಚ್ಚು ಹೇಳಿಕೆ ಕೊಡುತ್ತಿದ್ದಾರೆ. ಮೋಹನ್ ಭಾಗವತ್ ಅಮೆರಿಕಾಗೆ ಹೋಗಿರೋದನ್ನ ಕೇಳೋಕೆ ಇವರ ಅಪ್ಪನ ಮನೆಯಿಂದ ಹಣ ಕೊಟ್ಟಿದ್ದಾರಾ? ಎಂದು ಏಕವಚನದಲ್ಲಿ ಪ್ರಶ್ನಿಸಿದರು.
ಆರ್ಎಸ್ಎಸ್ ಬಗ್ಗೆ ಹೀಗೆ ಮಾತನಾಡಿ ದೊಡ್ಡ ಮನುಷ್ಯ ಆಗೋಗೆ ಹೊರಟಿದ್ದಾರೆ. ಕಸದಂತಿರುವ ಇವರಿಗೆ ಉತ್ತರ ಕೊಡಬೇಡಿ. ಕಸದ ಬುಟ್ಟಿಗೆ ತಳ್ಳಿ. ಇಂತಹ ಚಿಲ್ಲರೆ ನಮ್ಮ ಆರ್ಎಸ್ಎಸ್ ಬಗ್ಗೆ ಮಾತಾಡುತ್ತಿದ್ದಾರೆ ಎನ್ನುವ ನೋವು ಇದೆ ಎಂದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm