ಬ್ರೇಕಿಂಗ್ ನ್ಯೂಸ್
18-06-26 07:15 pm HK News Staffer ಕರ್ನಾಟಕ
ಬೆಂಗಳೂರು, ಜೂನ್ 18: ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭೂತಪೂರ್ವ ಗೆಲುವು ಸಾಧಿಸಿದ್ದು ಐವರು ಅಭ್ಯರ್ಥಿಗಳು ನಿರೀಕ್ಷೆ ಮೀರಿದ ಗೆಲುವು ದಾಖಲಿಸಿದ್ದಾರೆ.
ಚುನಾವಣೆಯಲ್ಲಿ ಮೈತ್ರಿ ಪಕ್ಷದ ಬಿಜೆಪಿ ಮತ್ತು ಜೆಡಿಎಸ್ ಶಾಸಕರೇ ಕಾಂಗ್ರೆಸ್ ಪರವಾಗಿ ಮತ ಚಲಾಯಿಸಿದ್ದಾರೆ. ಬಿಜೆಪಿಯಿಂದ 3-4 ಶಾಸಕರು ಮತ್ತು ಜೆಡಿಎಸ್ ನಿಂದ 6-7 ಶಾಸಕರು ಕಾಂಗ್ರೆಸ್ ಪರವಾಗಿ ಮತ ಚಲಾಯಿಸಿದ್ದಾರೆಂಬ ಮಾಹಿತಿ ಲಭ್ಯವಾಗಿದೆ. ಆಮೂಲಕ ಮೈತ್ರಿ ಪಕ್ಷದ ನಾಯಕರು ತೀವ್ರ ಮುಖಭಂಗ ಅನುಭವಿಸಿದ್ದಾರೆ.
ಕಾಂಗ್ರೆಸ್ 135, ಬಿಜೆಪಿ 62 ಮತ್ತು ಜೆಡಿಎಸ್ 18 ಶಾಸಕರನ್ನು ಹೊಂದಿತ್ತು. ಈ ಪೈಕಿ ಬಿಜೆಪಿ ಅಭ್ಯರ್ಥಿಗಳಾದ ರಘು ಕೌಟಿಲ್ಯ(29) ಮತ್ತು ಲಿಂಗರಾಜ ಪಾಟೀಲ್ ಪ್ರಯಾಸದ ಗೆಲುವು ಪಡೆದಿದ್ದಾರೆ. ಬಿಜೆಪಿ ಸ್ಪಷ್ಟ ಮತಗಳನ್ನು ಹೊಂದಿದ್ದರೂ, ಲಿಂಗರಾಜ್ 27 (ಗೆಲುವಿನ ಗೆರೆ 28) ಮತಗಳನ್ನಷ್ಟೆ ಗಳಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ ಗೋವಿಂದರಾಜ್ ಕೇವಲ 14 ಮತಗಳನ್ನು ಪಡೆದಿದ್ದಾರೆ. ಇದೇ ವೇಳೆ, ಕಾಂಗ್ರೆಸಿನ ವಿನಯ್ ಕಾರ್ತಿಕ್ 32 ಮತಗಳನ್ನು ಪಡೆದಿದ್ದಾರೆ. ಪಿವಿ ಮೋಹನ್ 29, ಇತರ ಕಾಂಗ್ರೆಸ್ ಅಭ್ಯರ್ಥಿಗಳು ತಲಾ 30 ಮತಗಳನ್ನು ಗಳಿಸಿದ್ದಾರೆಂದು ತಿಳಿದುಬಂದಿದೆ.
ಒಟ್ಟು 222 ಶಾಸಕರಲ್ಲಿ 221 ಮತಗಳು ಸಿಂಧುವಾಗಿತ್ತು. ಕಾಂಗ್ರೆಸ್ ಐದನೇ ಅಭ್ಯರ್ಥಿ ವಿನಯ್ ಕಾರ್ತಿಕ್ ಅತಿ ಹೆಚ್ಚು ಮತಗಳನ್ನು ಪಡೆದಿರುವುದು ವಿಶೇಷ. ಬಿಜೆಪಿಯಲ್ಲಿ ಉಚ್ಚಾಟಿತ ಶಾಸಕರಲ್ಲದೆ, ನಾಲ್ಕು ಮಂದಿ ಅಡ್ಡ ಮತದಾನ ಮಾಡಿರುವುದು ರಾಜ್ಯ ಬಿಜೆಪಿ ಪಾಲಿಗೆ ಎಚ್ಚರಿಕೆ ಕರೆಗಂಟೆಯಾಗಿದೆ. ಈ ಫಲಿತಾಂಶ ಬಿಜೆಪಿ- ಜೆಡಿಎಸ್ ಮೈತ್ರಿಗೆ ದೊಡ್ಡ ಹಿನ್ನಡೆಯಾಗಿದ್ದು ಇದರ ಪರಿಣಾಮ ಮುಂದಿನ ದಿನಗಳಲ್ಲಿ ವ್ಯಕ್ತವಾಗಲಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm