ಬ್ರೇಕಿಂಗ್ ನ್ಯೂಸ್
19-06-26 04:18 pm HK News Staffer ಕರ್ನಾಟಕ
ಮೈಸೂರು, ಜೂನ್ 19: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ ಪಕ್ಷದ ನಾಲ್ವರು ಶಾಸಕರು ಅಡ್ಡ ಮತದಾನ ಮಾಡಿದ್ದು ಅವರ ಯಾರೆಂದು ಗೊತ್ತಿದೆ. ಈಗಾಗಲೇ ಅವರು ಪಕ್ಷ ಬಿಡುವ ಚರ್ಚೆಯನ್ನೂ ಮಾಡಿದ್ದಾರೆ. ಇದನ್ನು ಪರೀಕ್ಷೆ ಮಾಡಲೆಂದೇ ಅಭ್ಯರ್ಥಿ ಹಾಕಿದ್ದೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಪರಿಷತ್ ಚುನಾವಣೆ ವಿಚಾರದಲ್ಲಿ ಹಲವು ವಿಚಾರಗಳನ್ನು ಮಾತನಾಡಿದ್ದಾರೆ. ಯಾರೆಲ್ಲ ಅಡ್ಡ ಮತದಾನ ಮಾಡಿದ್ದಾರೆ, ಯಾವ ಕಾರಣಕ್ಕೆ ಮಾಡಿದ್ದಾರೆ ಅನ್ನೋದ್ರ ಬಗ್ಗೆ ನನಗೆ ಸಂಪೂರ್ಣ ಮಾಹಿತಿ ಇದೆ. ಅಡ್ಡ ಮತದಾನ ಮಾಡ್ತಾರೆ ಅನ್ನುವ ನಿರೀಕ್ಷೆ ಮೊದಲೇ ಇತ್ತು. ಆದ್ದರಿಂದ ನನಗಿದು ಯಾವುದೇ ಅಚ್ಚರಿ, ಆಘಾತ ಉಂಟು ಮಾಡಿಲ್ಲ. ಅಂಥವರು ಯಾವ ರೀತಿ ನಡೆದುಕೊಳ್ಳಬಹುದು ಅನ್ನೋದನ್ನ ತಿಳಿಯೋಕೆ ಅಭ್ಯರ್ಥಿಯನ್ನ ಹಾಕಿದ್ದೆವು ಎಂದು ತಿಳಿಸಿದ್ದಾರೆ.
ಅಡ್ಡ ಮತದಾನ ಮಾಡಿದವರು ಪಕ್ಷ ಬಗ್ಗೆ ಚರ್ಚೆ ಮಾಡಿದ್ದಾರೆ. ಅದರೆ ಹೋಗುವವರೆಲ್ಲಾ ಹೋಗಲಿ ಎಂದೇ ಹೇಳುತ್ತೇನೆ. ನನಗೆ ಪಕ್ಷ ಕಟ್ಟುವುದು ಗೊತ್ತಿದೆ. ಜೆನ್ ಜೀ ಯುವಕರು ಬದಲಾವಣೆ ಕೇಳುತ್ತಿರುವುದೂ ಗೊತ್ತಿದೆ. ಮುಂದೆ ಪಕ್ಷದಲ್ಲಿ ಹೊಸ ಮುಖಗಳಿಗೆ ಆದ್ಯತೆ ನೀಡಬೇಕೆಂದು ತೀರ್ಮಾನ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.
ನಮಗೆ ಅಭ್ಯರ್ಥಿ ನಿಲ್ಲಿಸುವ ಯೋಚನೆ ಇರಲಿಲ್ಲ. ನಮಗೆ ನಿಜವಾದ ಅಗ್ನಿಪರೀಕ್ಷೆ ಇರೋದು 2028ರ ಚುನಾವಣೆ. ಆದ್ರೆ ನಮ್ಮಲ್ಲಿನ ಕೆಲವು ಶಾಸಕರು, ಅಭ್ಯರ್ಥಿ ಹಾಕದಿದ್ದರೆ ತಪ್ಪು ಸಂದೇಶ ಹೋಗುತ್ತೆ, ಸೋಲು-ಗೆಲುವು ಇದ್ದಿದ್ದೇ. ಅಭ್ಯರ್ಥಿಯನ್ನ ಹಾಕಲೇಬೇಕೆಂದು ಒತ್ತಾಯ ಮಾಡಿದ್ದರು. ನಮ್ಮ 17 ಮತಗಳು ಯಾವುದೇ ಕಾರಣಕ್ಕೂ ಒಡೆದು ಹೋಗೋದಕ್ಕೆ ಅವಕಾಶ ಕೊಡಬೇಡಿ ಅಂತ ಹೇಳಿದ್ದೆ. ಈ ಹಿಂದೆ ನನಗೆ ಅನುಭವ ಆಗಿದೆ ಅಂತಲೂ ಹೇಳಿದ್ದೆ. ಯಾರ್ಯಾರು ಯಾವ ರೀತಿ ಇದ್ದಾರೆಂದು ಪರೀಕ್ಷೆ ಮಾಡಬೇಕೆಂದು ಅಭಿಪ್ರಾಯ ಬಂದಿತ್ತು. ಹಿತಶತ್ರುಗಳು ಯಾರಿದ್ದಾರೆ ಅನ್ನೋದನ್ನ ತಿಳಿಯೋದಕ್ಕೆ ಅಭ್ಯರ್ಥಿ ನಿಲ್ಲಿಸಬೇಕೆಂದು ಸಭೆಯಲ್ಲಿ ತೀರ್ಮಾನ ಮಾಡಿದ್ದೆವು ಎಂದು ಕುಮಾರಸ್ವಾಮಿ ವಿವರಿಸಿದ್ದಾರೆ.
ನಿನ್ನೆಯ ಫಲಿತಾಂಶ ಇನ್ನೊಂದು ಅನುಭವ ಕೊಟ್ಟಿದೆ. ಯಾರನ್ನೂ ದೂಷಿಸಲ್ಲ, ಆದ್ರೆ ಅತಿಯಾಗಿ ನಂಬಿಕೆ ಇಡುವುದು ಸೂಕ್ತ ಅಲ್ಲ ಅಂತ ಕೆಲವರು ತೋರಿಸಿಕೊಟ್ಟಿದ್ದಾರೆ ಎಂದು ಬಿಜೆಪಿ ಶಾಸಕರನ್ನು ಉಲ್ಲೇಖಿಸದೆ ಕುಟುಕಿದ್ದಾರೆ. ಶಾಸಕ ಜಿ.ಟಿ ದೇವೇಗೌಡರ ವಿಚಾರಕ್ಕೆ ಪ್ರತಿಕ್ರಿಯಿಸಿ, ಅವರ ಹೆಸರನ್ನ ನನ್ನ ಮುಂದೆ ಪ್ರಸ್ತಾಪಿಸಬೇಡಿ. ಅದೆಲ್ಲಾ ಮುಗಿದು ಹೋದ ಕಥೆ. ಅವರು ಒಂದು ಕಾಲಲ್ಲ ಎರಡು ಕಾಲನ್ನೂ ಹೊರಗಡೆ ಇಟ್ಟಿದ್ದಾರೆ. ಅವರ ಬಗ್ಗೆ ನಾನು ಈ ಹಿಂದೆ ಏನು ಹೇಳಿದೆನೋ ಅದೇ ಅಂತಿಮ. ಜಿ.ಟಿ.ಡಿ ವಿಚಾರದಲ್ಲಿ ನನ್ನ ಸ್ಟ್ಯಾಂಡ್ ಬಹಳ ಕ್ಲಿಯರ್ ಇದೆ. ದೊಡ್ಡ ಗೌಡರು ಹೇಳಿದರೂ ಪಕ್ಷ ಮತ್ತು ಕಾರ್ಯಕರ್ತರ ಹಿತದೃಷ್ಟಿಯಿಂದ ನನ್ನ ಸ್ಟ್ಯಾಂಡ್ ಬದಲಾಯಿಸುವುದಿಲ್ಲ. ಟಿಕೆಟ್ ಅಂತಿಮ ನಿರ್ಣಯ ಮಾಡುವುದು ನಾನೇ. ಅವರ ಬಗ್ಗೆ ನನ್ನ ಬಳಿ ಚರ್ಚೆ ಮಾಡಲೇಬೇಡಿ ಎಂದು ಕಟು ಸಂದೇಶ ರವಾನಿಸಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm