ಬ್ರೇಕಿಂಗ್ ನ್ಯೂಸ್
20-06-26 01:33 pm HK News Staffer ಕರ್ನಾಟಕ
ಬೆಂಗಳೂರು, ಜೂನ್ 20: ರಾಜ್ಯ ಸರಕಾರ ಟೌನ್ ಶಿಪ್ ನೆಪದಲ್ಲಿ ಬಿಡದಿ ಮತ್ತು ಹಾರೋಹಳ್ಳಿ ಹೋಬಳಿಯ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿ, ಜೆಡಿಎಸ್ ನಿಯೋಗವು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮತ್ತು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿತು. ಭೂಸ್ವಾಧೀನ ಪ್ರಕ್ರಿಯೆಯನ್ನು ಕೂಡಲೇ ಕೈ ಬಿಡಬೇಕೆಂದು ಒತ್ತಾಯಿಸಿತು.
ಜೆಡಿಎಸ್ ಪಕ್ಷದ ಗ್ರೇಟರ್ ಬೆಂಗಳೂರು ಅಧ್ಯಕ್ಷರಾದ ಹೆಚ್.ಎಂ. ರಮೇಶ್ ಗೌಡ ಅವರ ನೇತೃತ್ವದಲ್ಲಿ ಮುಖ್ಯ ಕಾರ್ಯದರ್ಶಿ ಅವರನ್ನು ಭೇಟಿಯಾದ ಪಕ್ಷದ ನಿಯೋಗವು, ಸರಕಾರ ಮೊದಲ ಹಂತದಲ್ಲಿ ಸುಮಾರು 498 ಎಕರೆಗೂ ಹೆಚ್ಚು ಫಲವತ್ತಾದ ಭೂಮಿಯನ್ನು ಕಿತ್ತುಕೊಳ್ಳುತ್ತಿದ್ದು, ಈ ಪೈಕಿ 614 ಅಂದರೆ ಶೇ. 81 ರಷ್ಟು ರೈತರು ಸಣ್ಣ ಮತ್ತು ಅತೀ ಸಣ್ಣ ಹಿಡುವಳಿದಾರರಾಗಿದ್ದು, ಸುಮಾರು 750 ಕುಟುಂಬಗಳು ಬೀದಿಪಾಲಾಗುತ್ತಿವೆ ಎಂದು ಮಾಹಿತಿ ನೀಡಿದರು.
ಬಿಡದಿ ಭಾಗದಲ್ಲಿ ನೀರಾವರಿ ಮತ್ತು ಕೃಷಿಯೋಗ್ಯ ಫಲವತ್ತಾದ ಭೂಮಿ, ರಿಯಲ್ ಎಸ್ಟೇಟ್ ಉದ್ದೇಶದ ಟೌನ್ ಶಿಪ್ ಯೋಜನೆಗೆ ಕಸಿದುಕೊಳ್ಳುವುದು ಅಕ್ಷ್ಯಮ್ಯ. ರೈತ ವಿರೋಧಿ ಟೌನ್ ಶಿಪ್ ಯೋಜನೆಯನ್ನು ಸರಕಾರ ಸ್ಥಗಿತಗೊಳಿಸಬೇಕು ಎಂದು ಮುಖ್ಯ ಕಾರ್ಯದರ್ಶಿಗಳಿಗೆ ದೂರನ್ನು ಸಲ್ಲಿಸಿತು.
ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಹೆಚ್.ಎಂ. ರಮೇಶ್ ಗೌಡ, ಈಗಾಗಲೇ ಮೊದಲ ಹಂತದ ಭೂಸ್ವಾಧೀನದ ನೋಟಿಫಿಕೇಶನ್ ಹೊರಡಿಸಿರುವ ರಾಜ್ಯ ಸರ್ಕಾರವು ಸಂಪೂರ್ಣ ರೈತ ವಿರೋಧಿ ನಿಲುವು ತಳೆದಿದೆ. ಮುಂದಿನ ತಿಂಗಳು ಬೃಹತ್ ಪ್ರಮಾಣದಲ್ಲಿ ಭೂಸ್ವಾಧೀನ ವಿಸ್ತರಿಸಲು ಹೊರಟಿರುವ ಸರ್ಕಾರದ ನಿಲುವು ಹಾಗೂ ಭೂಸ್ವಾಧೀನ ಯೋಜನೆಯನ್ನು ಕೂಡಲೇ ಕೈ ಬಿಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಮನವಿ ಪತ್ರವನ್ನು ಮುಖ್ಯ ಕಾರ್ಯದರ್ಶಿಗಳಿಗೆ ಸಲ್ಲಿಸಿದ್ದೇವೆ ಎಂದು ತಿಳಿಸಿದರು.
ಸರ್ಕಾರ ಭೂಮಿಯನ್ನು ಕಸಿದುಕೊಳ್ಳುತ್ತಿರುವ ಭಾಗವು ಹೈನುಗಾರಿಕೆಯ ಸಮೃದ್ಧ ಜಾಗವಾಗಿದ್ದು, ಮಾಸಿಕ ಸುಮಾರು 6 ಲಕ್ಷಕ್ಕೂ ಹೆಚ್ಚು ಲೀಟರ್ ಹಾಲನ್ನು ಬೆಂಗಳೂರು ಡೇರಿಗೆ ಪೂರೈಕೆ ಮಾಡುತ್ತಿದೆ. ಭೂಮಿ ರಿಯಲ್ ಎಸ್ಟೇಟ್ ಕುಳಗಳ ಪಾಲಾದರೆ ಅಷ್ಟೂ ಹಾಲಿನ ಉತ್ಪಾದನೆ ನಿಂತು ಹೋಗಲಿದೆ ಎಂದು ಕಳವಳ ವ್ಯಕ್ತಪಡಿಸಿದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm