ಬ್ರೇಕಿಂಗ್ ನ್ಯೂಸ್
23-06-26 05:58 pm HK News Staffer ಕರ್ನಾಟಕ
ಬೆಂಗಳೂರು , ಜೂ.23: ರಾಜ್ಯ ಬಿಜೆಪಿಯಲ್ಲಿ ಅಡ್ಡಮತದಾನ ವಿವಾದದ ಕಾವು ಮುಂದುವರಿದಿರುವ ನಡುವೆಯೇ, ಈ ವಿಚಾರಕ್ಕೆ ಪವಿತ್ರ ಕ್ಷೇತ್ರ ಧರ್ಮಸ್ಥಳವನ್ನು ಎಳೆದು ತರಲು ನಡೆದ ಪ್ರಯತ್ನಕ್ಕೆ ಪಕ್ಷದ ಕೇಂದ್ರ ನಾಯಕತ್ವ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ ಎನ್ನಲಾಗಿದೆ. ಅಡ್ಡಮತದಾನದ ಹಿನ್ನೆಲೆಯಲ್ಲಿ ಧರ್ಮಸ್ಥಳದಲ್ಲಿ ಆಣೆ-ಪ್ರಮಾಣ ಹಾಗೂ ಶಾಸಕಾಂಗ ಪಕ್ಷದ ಸಭೆ ನಡೆಸುವ ಚರ್ಚೆ ನಡೆದಿದ್ದರೂ, ಬಿಜೆಪಿ ಹೈಕಮಾಂಡ್ ಇದಕ್ಕೆ ಸ್ಪಷ್ಟ ವಿರೋಧ ವ್ಯಕ್ತಪಡಿಸಿ ‘ರೆಡ್ ಸಿಗ್ನಲ್’ ನೀಡಿದೆ.
ಮೂಲಗಳ ಪ್ರಕಾರ, ಅಡ್ಡಮತದಾನ ನಡೆದಿರುವುದಕ್ಕೆ ರಾಜ್ಯ ನಾಯಕತ್ವದ ನಿರ್ಲಕ್ಷ್ಯ ಮತ್ತು ಸಂಘಟನಾ ವೈಫಲ್ಯವೇ ಪ್ರಮುಖ ಕಾರಣ ಎಂದು ವರಿಷ್ಠರು ನೇರವಾಗಿ ಪ್ರಶ್ನಿಸಿದ್ದಾರೆ. ಪಕ್ಷದ ಶಾಸಕರ ಮೇಲೆ ಸೂಕ್ತ ಹಿಡಿತ ಸಾಧಿಸುವಲ್ಲಿ ಹಾಗೂ ಅವರ ಚಟುವಟಿಕೆಗಳ ಮೇಲೆ ನಿಗಾ ಇಡುವಲ್ಲಿ ರಾಜ್ಯ ನಾಯಕತ್ವ ವಿಫಲವಾಗಿದೆ ಎಂಬ ಅಭಿಪ್ರಾಯವನ್ನು ಹೈಕಮಾಂಡ್ ವ್ಯಕ್ತಪಡಿಸಿದೆ ಎನ್ನಲಾಗಿದೆ.
“ನಿಮ್ಮ ತಪ್ಪು ಮತ್ತು ಸಂಘಟನಾ ವೈಫಲ್ಯದಿಂದಲೇ ಅಡ್ಡಮತದಾನಕ್ಕೆ ಅವಕಾಶ ಸಿಕ್ಕಿದೆ. ಶಾಸಕರ ಅಸಮಾಧಾನವನ್ನು ಸರಿಯಾದ ಸಮಯದಲ್ಲಿ ಗುರುತಿಸಲು ಸಾಧ್ಯವಾಗಲಿಲ್ಲ. ನಿಮ್ಮದೇ ಶಾಸಕರನ್ನು ಕಾಂಗ್ರೆಸ್ ನಾಯಕರು ಸಂಪರ್ಕಿಸಲು ಅವಕಾಶ ಸಿಕ್ಕಿದ್ದರೆ ಅದರ ಹೊಣೆಗಾರಿಕೆಯಿಂದ ನೀವು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ” ಎಂಬ ಸಂದೇಶವನ್ನು ವರಿಷ್ಠರು ರವಾನಿಸಿದ್ದಾರೆ ಎಂದು ತಿಳಿದುಬಂದಿದೆ.
ಇದರ ಜೊತೆಗೆ ಧರ್ಮಸ್ಥಳದಂತಹ ಪವಿತ್ರ ಧಾರ್ಮಿಕ ಕ್ಷೇತ್ರವನ್ನು ರಾಜಕೀಯ ವಿವಾದಗಳಿಗೆ ಎಳೆದು ತರುವುದರಿಂದ ಪಕ್ಷಕ್ಕೆ ಮತ್ತಷ್ಟು ಮುಜುಗರ ಉಂಟಾಗಬಹುದು ಎಂದು ಹೈಕಮಾಂಡ್ ಎಚ್ಚರಿಸಿದೆ. ಈಗಾಗಲೇ ಉಂಟಾಗಿರುವ ಹಾನಿಯನ್ನು ಸರಿಪಡಿಸುವತ್ತ ಗಮನಹರಿಸಬೇಕು ಹೊರತು, ಆಣೆ-ಪ್ರಮಾಣ ಅಥವಾ ಪ್ರತಿಜ್ಞಾ ರಾಜಕೀಯದ ಮೂಲಕ ಹೊಸ ವಿವಾದಗಳಿಗೆ ಕಾರಣವಾಗಬಾರದು ಎಂದು ರಾಜ್ಯ ನಾಯಕರಿಗೆ ಸೂಚನೆ ನೀಡಲಾಗಿದೆ ಎನ್ನಲಾಗಿದೆ.
ಧರ್ಮಸ್ಥಳದಲ್ಲಿ ಆಣೆ-ಪ್ರಮಾಣ ಮಾಡಿಸುವ ಮೂಲಕ ಅಡ್ಡಮತದಾನದ ಸತ್ಯಾಸತ್ಯತೆ ಬಹಿರಂಗಪಡಿಸುವ ಚರ್ಚೆಗಳು ರಾಜ್ಯ ರಾಜಕೀಯದಲ್ಲಿ ಸದ್ದು ಮಾಡುತ್ತಿದ್ದವು. ಆದರೆ ಈ ಬೆಳವಣಿಗೆ ಪಕ್ಷದ ಅಧಿಕೃತ ನಿಲುವಿಗೆ ವಿರುದ್ಧವಾಗಿದ್ದು, ಧಾರ್ಮಿಕ ಕ್ಷೇತ್ರಗಳ ಹೆಸರನ್ನು ರಾಜಕೀಯ ಸಂಘರ್ಷಗಳಲ್ಲಿ ಬಳಸಬಾರದು ಎಂಬ ಸಂದೇಶವನ್ನು ಹೈಕಮಾಂಡ್ ಸ್ಪಷ್ಟವಾಗಿ ನೀಡಿದೆ ಎಂದು ಪಕ್ಷದ ವಲಯಗಳು ಹೇಳುತ್ತಿವೆ.
ವರಿಷ್ಠರ ಈ ಕಠಿಣ ನಿಲುವಿನ ಬಳಿಕ ರಾಜ್ಯ ಬಿಜೆಪಿ ನಾಯಕರು ಧರ್ಮಸ್ಥಳದಲ್ಲಿ ನಡೆಸಲು ಉದ್ದೇಶಿಸಿದ್ದ ಆಣೆ-ಪ್ರಮಾಣ ಕಾರ್ಯಕ್ರಮ ಹಾಗೂ ಶಾಸಕಾಂಗ ಪಕ್ಷದ ಸಭೆಯ ವಿಚಾರದಿಂದ ಹಿಂದೆ ಸರಿದಿದ್ದಾರೆ ಎನ್ನಲಾಗಿದೆ. ಹೀಗಾಗಿ ಅಡ್ಡಮತದಾನ ವಿವಾದಕ್ಕೆ ಧರ್ಮಸ್ಥಳವನ್ನು ಕೇಂದ್ರಬಿಂದುವಾಗಿಸುವ ಯತ್ನಕ್ಕೆ ಸದ್ಯಕ್ಕೆ ತೆರೆ ಬಿದ್ದಂತಾಗಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm