ಬ್ರೇಕಿಂಗ್ ನ್ಯೂಸ್
26-06-26 05:10 pm HK News Staffer ಕರ್ನಾಟಕ
ಬೆಂಗಳೂರು, ಜೂ 26: ಬಿಡದಿಯಲ್ಲಿ ಟೌನ್ಶಿಪ್ ನಿರ್ಮಾಣಕ್ಕೆ ರೈತರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡುವುದಿಲ್ಲ. ಒತ್ತಾಯಪೂರ್ವಕವಾಗಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವುದರಲ್ಲಿ ಯಾವುದೇ ಅರ್ಥವಿಲ್ಲ. ಹೀಗಾಗಿ, ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡೇ, ಅವರು ಒಪ್ಪಿಗೆ ಸೂಚಿಸಿದ ಬಳಿಕವೇ ಜಮೀನು ಪಡೆದು ಟೌನ್ಶಿಪ್ ಮಾಡಲು ಈಗಾಗಲೇ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದರು.
ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿಂದು ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು. ಟೌನ್ಶಿಪ್ ವಿಚಾರದಲ್ಲಿ ರೈತರ ಸಹಮತಿ ಪಡೆದುಕೊಂಡು ಮುಂದೆ ಸಾಗುತ್ತೇವೆಯೇ ಹೊರತು, ಅವರನ್ನು ಒಕ್ಕಲೆಬ್ಬಿಸಿ ಟೌನ್ಶಿಪ್ ಮಾಡುವುದಿಲ್ಲ. ಒಂದು ವೇಳೆ ರೈತರಿಗೆ ಕೊಡುವ ಪರಿಹಾರ ಸಾಕಾಗುತ್ತಿಲ್ಲ ಎಂದು ಅನಿಸಿದರೆ ಹೆಚ್ಚಿಸುವ ಸಾಧ್ಯತೆಯಿದೆ. ಒಟ್ಟಾರೆ ಯಾವುದೇ ಗೊಂದಲ ಇಲ್ಲದೆ ಟೌನ್ಶಿಪ್ ಮಾಡಬೇಕು ಎನ್ನುವುದು ನಮ್ಮ ಉದ್ದೇಶ ಎಂದರು.
ಎಐ ಹಬ್ಗಳಿಗೆ ಹೆಚ್ಚಿನ ನೀರಿನ ಅಗತ್ಯವಿರುವ ಹಿನ್ನೆಲೆಯಲ್ಲಿ ಬಿಡದಿ ಪ್ರದೇಶದ ನೀರಿನ ಲಭ್ಯತೆಯನ್ನು ಮುಂದಿನ 40 ವರ್ಷಗಳ ದೃಷ್ಟಿಯಿಂದ ಸರ್ಕಾರ ಬಳಸಿಕೊಳ್ಳುತ್ತಿದೆಯೇ ಎಂಬ ಪ್ರಶ್ನೆಗೆ, ಎಐ ಸೆಂಟರ್ ಮಾಡುವುದಕ್ಕೆ ಯಾವುದೆಲ್ಲ ಮಾನದಂಡಗಳಿವೆ ಎಂಬುದರ ಸ್ಪಷ್ಟ ಮಾಹಿತಿ ಯಾರಿಗೂ ಗೊತ್ತಿಲ್ಲ. ಈಗ ಅದನ್ನು ನಾವು ಬೇರೆ ಬೇರೆ ಕಡೆ ಪತ್ತೆ ಮಾಡುತ್ತಿದ್ದೇವೆ. ಇದು ಎಐ ಹಬ್ಗಾಗಿ ಮಾಡುತ್ತಿರುವಂಥದ್ದಲ್ಲ. ಬೆಂಗಳೂರಿನ ಮೇಲೆ ಸಂಚಾರದಟ್ಟಣೆ ಸೇರಿದಂತೆ ಅನೇಕ ಒತ್ತಡವಿದೆ. ನೈಸ್ ಪ್ರಾಜೆಕ್ಟ್ ಮಾಡಿದ ಸಂದರ್ಭದಲ್ಲಿ 7 ಟೌನ್ಶಿಪ್ ಮಾಡಬೇಕು ಎಂಬ ಪ್ರಸ್ತಾವನೆ ಬಂದಿತ್ತು. ಇದರ ಉದ್ದೇಶ ಬೆಂಗಳೂರಿನ ಮೇಲಿರುವ ಒತ್ತಡ ಕಡಿಮೆಮಾಡಬೇಕು ಎನ್ನುವುದಾಗಿತ್ತು. ಪಕ್ಕದಲ್ಲಿರುವ ಕೋಲಾರ, ತುಮಕೂರು, ರಾಮನಗರ ಪಟ್ಟಣವನ್ನು ಅಭಿವೃದ್ಧಿ ಮಾಡಿದರೆ ಬೆಂಗಳೂರಿನ ಮೇಲಿರುವ ಒತ್ತಡ ಕಡಿಮೆಯಾಗಲಿದೆ ಎನ್ನುವುದು ನಮ್ಮ ಉದ್ದೇಶ. ಈ ಕಾರಣಗಳಿಂದ ಬಿಡದಿ ಟೌನ್ಶಿಪ್ ಆದರೆ ಸ್ವಲ್ಪ ಸುಧಾರಿಸಬಹುದು ಎಂದು ಅವರು ವಿವರಿಸಿದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm