ಬ್ರೇಕಿಂಗ್ ನ್ಯೂಸ್
07-01-21 12:18 pm Headline Karnataka News Network ಕರ್ನಾಟಕ
ಚಿತ್ರದುರ್ಗ, ಜ.7 : ನಿಂತಿದ್ದ ಲಾರಿಗೆ ಓಮ್ನಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವಿಗೀಡಾಗಿರುವ ದುರ್ಘಟನೆ ಚಿತ್ರದುರ್ಗ ತಾಲೂಕಿನ ಕ್ಯಾದಿಗ್ಗೆರೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.
ದಾವಣಗೆರೆಯಿಂದ ಬೆಂಗಳೂರಿಗೆ ಹೊರಟಿದ್ದ ಓಮ್ನಿ ಚಿತ್ರದುರ್ಗ ತಾಲೂಕಿನ ಕ್ಯಾದಿಗ್ಗೆರೆ ಬಳಿ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ರೇಣುಕಮ್ಮಾ (55) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ಶಂಕರ್ ಪುಟ್ಟಿಲಿಂಗಯ್ಯ(39) ಹಾಗೂ ಶಿವರಾಜ್(55) ಸಾವನ್ನಪ್ಪಿದ್ದಾರೆ. ಒಟ್ಟು ಮೂವರು ಮೃತಪಟ್ಟಿದ್ದಾರೆ.
ಈ ವೇಳೆ ಅಂಬುಲೆನ್ಸ್ ಗೆ ಕರೆ ಮಾಡಿ, ಸುಮಾರು ಅರ್ಧ ಗಂಟೆಗಳ ಕಾಲ ಪರದಾಡಿದರೂ ಯಾರು ಸ್ಪಂದಿಸಲಿಲ್ಲ. ಕೊನೆಗೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ, ಗಾಯಗೊಂಡಿದ್ದ ಐವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದರು. ಇಂದು ಮಧ್ಯಾಹ್ನ ಓಮ್ನಿಯಲ್ಲಿ ಬೆಂಗಳೂರಿಗೆ ಹೊರಟಿದ್ದರು ಎಂದು ತಿಳಿದು ಬಂದಿದ್ದು, ಇನ್ನುಳಿದ ತಾಯಿ ಜಯಶ್ರೀ (25), ಮಗಳು ಮೋನಿಕಾ(05) ಹಾಗೂ ಮಗ ಶೋಬಿತ್(07) ಗಾಯಾಳುಗಳು ಅಧೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗಾಯಾಳುಗಳಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಚಿತ್ರದುರ್ಗ ಗ್ರಾಮೀಣ ಠಾಣೆಯ ಸಿಪಿಐ ಬಾಲಚಂದ್ರ ನಾಯಕ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪರಿಶೀಲನೆ ನಡೆಸಿದ್ದಾರೆ.
Three from a Family killed as Omni Van rams into Parked Truck in Chitradurga.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm