ಬ್ರೇಕಿಂಗ್ ನ್ಯೂಸ್
02-07-26 09:19 pm HK News Staffer ಕರ್ನಾಟಕ
ಬೆಂಗಳೂರು, ಜುಲೈ 2: ಕಳೆದ ನಾಲ್ಕೈದು ವರ್ಷಗಳಿಂದ 25 ಲಕ್ಷಕ್ಕೂ ಹೆಚ್ಚು ಬಾಂಗ್ಲಾದೇಶದ ಪ್ರಜೆಗಳು ಕರ್ನಾಟಕದಲ್ಲಿ ವಾಸಿಸುತ್ತಿದ್ದು, ಸೂಕ್ತ ಪರಿಶೀಲನೆ ನಡೆಸದೆ ಅವರನ್ನು ಮತದಾರರ ಪಟ್ಟಿಗೆ ಸೇರಿಸಲಾಗುತ್ತಿದೆ ಎಂಬ ಆರೋಪ ಜೆಡಿಎಸ್ ಕಡೆಯಿಂದ ಕೇಳಿಬಂದಿದೆ. ರಾಮನಗರದಲ್ಲಿ 10 ಸಾವಿರಕ್ಕೂ ಹೆಚ್ಚು ಬಾಂಗ್ಲಾದೇಶದ ಪ್ರಜೆಗಳು ಅಕ್ರಮವಾಗಿ ನೆಲೆಸಿದ್ದು, ಅವರಿಗೆ ಮತದಾನದ ಹಕ್ಕು ನೀಡುತ್ತಿದ್ದಾರೆ. ಈಗ ಎಸ್ಐಆರ್ ನೆಪದಲ್ಲಿ ಸರ್ಕಾರದ ಬಿಎಲ್ಓಗಳು ಸಮುದಾಯ ಭವನದಲ್ಲಿ ಒಂದು ಕೋಮಿನ ಮತದಾರರನ್ನು ಸೇರಿಸಿ ಮೃತಪಟ್ಟಿಗೆ ಸೇರಿಸುತ್ತಿದ್ದಾರೆ. ಸಿಎಂ ಡಿಕೆಶಿ ಅವರ ಮುತುವರ್ಜಿಯಿಂದ ಇಂತಹ ಕೆಲಸ ಆಗುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.
ಬಿಎಲ್ಒಗಳು ಮನೆ ಮನೆಗೆ ಭೇಟಿ ನೀಡಿ ಚುನಾವಣಾ ಆಯೋಗದ ಗಣತಿ ನಮೂನೆಗಳನ್ನು ವಿತರಿಸುವ ಬದಲಿಗೆ, ಸಮುದಾಯ ಭವನದಲ್ಲೇ ಕುಳಿತು ವಿತರಣೆ ಮಾಡುತ್ತಿದ್ದಾರೆ. ಇದು ಮನೆ ಮನೆ ಪರಿಶೀಲನೆಯ ಮೂಲ ಉದ್ದೇಶವನ್ನೇ ಬುಡಮೇಲು ಮಾಡುತ್ತದೆ ಎಂಬ ಆರೋಪಗಳು ಕೇಳಿಬಂದಿವೆ. ಈ ಎಲ್ಲ ಅಕ್ರಮಗಳಿಗೆ ಮುಖ್ಯಮಂತ್ರಿ ಪ್ರಮುಖ ಕಾರಣರಾಗಿದ್ದು, ಈ ಹಿಂದೆ ಕೂಡ ಇಂತಹ ಅಕ್ರಮ ರಾಜಕೀಯ ಚಟುವಟಿಕೆಗಳಲ್ಲಿ ಯಶಸ್ವಿಯಾಗಿರುವ ಇತಿಹಾಸ ಅವರಿಗಿದೆ. ಈ ವಿಷಯವನ್ನು ಗೌರವಾನ್ವಿತ ಮುಖ್ಯ ಚುನಾವಣಾ ಆಯುಕ್ತರು ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಅಲ್ಲದೆ, ಕೆಲವು ಕಾರ್ಮಿಕರ ಫೋಟೋಗಳನ್ನು ಅವರ ಒತ್ತಾಯವಿಲ್ಲದೆ ತೆಗೆದು, ಮತದಾರರ ಪಟ್ಟಿಗೆ ಸೇರಿಸಲಾಗುತ್ತಿದೆ ಹಾಗೂ ಸಹಕರಿಸದಿದ್ದರೆ ಸರ್ಕಾರಿ ಕಲ್ಯಾಣ ಯೋಜನೆಗಳನ್ನು ಸ್ಥಗಿತಗೊಳಿಸುವುದಾಗಿ ಬೆದರಿಕೆ ಹಾಕಲಾಗುತ್ತಿದೆ ಎಂಬ ಆರೋಪಗಳನ್ನೂ ಜೆಡಿಎಸ್ ಮಾಡಿದೆ. ರಾಮನಗರದಲ್ಲಿ SIR ಪ್ರಕ್ರಿಯೆ ಲೋಪ ಕಂಡುಬಂದ ಬಗ್ಗೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಟ್ವೀಟ್ ಕೂಡ ಮಾಡಿದ್ದಾರೆ. ಇದರ ಬೆನ್ನಲ್ಲೇ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದು, ರಾಮನಗರದಲ್ಲಿ ಬಿಎಲ್ಒಗಳು ಸಾವಿರಾರು ಜನರನ್ನ ಸಮುದಾಯ ಭವನದಲ್ಲೇ ಕರೆಸಿ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಕಳ್ಳ ಮತದಾರರನ್ನ ಒಂದೇ ಕಡೆ ಕೂರಿಸಿ ಎಸ್ಐಆರ್ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ನಮ್ಮನ್ನ ರಾಮನಗರದಿಂದ ಹೊರಹಾಕುವ ಬಗ್ಗೆ ಮಾತಾಡಿದ್ದಾರೆ. ರಾಮನಗರದ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿ ನಮ್ಮ ಕುಟುಂಬದ ಮತ ಇದೆ. ನಮ್ಮನ್ನ ಹೊರ ಹಾಕುವುದಕ್ಕೆ ಆಗಲ್ಲ. ಬೇರೆ ರಾಜ್ಯದ ಬಗ್ಗೆ ಮಾತಾಡುತ್ತಾರೆ. ಇದು ಅಧಿಕಾರಿಗಳ ವೈಪಲ್ಯ. ಸಿಎಂ ಪ್ರಭಾವ ಬೀರಿ ಕೆಲಸ ಮಾಡಿಸುತ್ತಿದ್ದಾರೆ. ಇದರ ಬಗ್ಗೆ ಚುನಾವಣಾ ಆಯೋಗ ಕೂಡಲೇ ಗಮನ ಹರಿಸಬೇಕು. ಚುನಾವಣಾ ಆಯೋಗಕ್ಕೆ ಪತ್ರ ಬರೆಯುತ್ತೇನೆ, ಗೃಹ ಸಚಿವರ ಗಮನಕ್ಕೂ ತರುತ್ತೇನೆ ಎಂದಿದ್ದಾರೆ.
ಮುಖ್ಯಮಂತ್ರಿಗಳೇ ಕಳ್ಳ ಮತದಾನ ಸೃಷ್ಟಿ ಮಾಡುತ್ತಿದ್ದಾರೆ. ಇಂತವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಇದು ಸರ್ಕಾರದ ದುರ್ಬಳಕೆ. ಈ ಕೆಲಸ ನಿರ್ವಹಣೆ ಮಾಡುತ್ತಿರುವುದು ರಾಜ್ಯ ಸರ್ಕಾರ. ಪ್ರಾಮಾಣಿಕವಾಗಿ ಎಸ್ಐಆರ್ ಮಾಡಬೇಕು ಎಂದು ಕುಮಾರಸ್ವಾಮಿ ಒತ್ತಾಯಿಸಿದರು.
ಮತದಾರರ ಲಿಸ್ಟ್ನಿಂದ ಹೊರ ಹೋದರೆ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಂದ ವಂಚಿತರಾಗುತ್ತೀರಿ. ಇಂತಹ ದೊಡ್ಡ ಜಾಹೀರಾತಿನ ಮೂಲಕ ಆಕರ್ಷಿಸುತ್ತಿದ್ದಾರೆ. ಕಾಂಗ್ರೆಸ್ ಮುಖಂಡರು ಎಸ್ಐಆರ್ ಬಗ್ಗೆ ಕಟುವಾಗಿ ಮಾತಾಡುತ್ತಿದ್ದಾರೆ. ಇದು ಸಿಎಂ ಪ್ರೇರಣೆ ಇರಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm