ಬ್ರೇಕಿಂಗ್ ನ್ಯೂಸ್
06-07-26 04:40 pm HK News Staffer ಕರ್ನಾಟಕ
ಮೈಸೂರು, ಜುಲೈ 6: ಮೈಸೂರು ದಸರಾ ಮಹೋತ್ಸವದಲ್ಲಿ ಈ ಬಾರಿ ಕಂಬಳವನ್ನು ಆಯೋಜಿಸಲು ಸರ್ಕಾರ ಮುಂದಾಗಿರುವ ಹಿನ್ನೆಲೆಯಲ್ಲಿ ತೀವ್ರ ಚರ್ಚೆ ಆರಂಭವಾಗಿದೆ. ಈ ಕುರಿತು ಮೈಸೂರು–ಕೊಡಗು ಸಂಸದ ಯದುವೀರ್ ಒಡೆಯರ್ ಕಂಬಳವನ್ನು ದಸರಾ ವೇದಿಕೆಗೆ ತರಲು ವಿರೋಧ ವ್ಯಕ್ತಪಡಿಸಿದ್ದು, ಇದು ಸಂಪ್ರದಾಯವನ್ನು ವಾಣಿಜ್ಯೀಕರಣ ಮಾಡುವ ಪ್ರಯತ್ನ ಎಂದು ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಂಬಳವು ಕರಾವಳಿ ಭಾಗದ ಧಾರ್ಮಿಕ ನಂಬಿಕೆ ಮತ್ತು ಸಾಂಸ್ಕೃತಿಕ ಆಚರಣೆಯೊಂದಿಗೆ ಜೋಡಿಕೊಂಡಿರುವ ಪರಂಪರೆ. ಅದನ್ನು ಮೈಸೂರು ದಸರಾದಂತಹ ರಾಜ್ಯಮಟ್ಟದ ಉತ್ಸವಕ್ಕೆ ತಂದು ಪ್ರದರ್ಶನ ಹಾಗೂ ವ್ಯಾಪಾರಿಕ ಉದ್ದೇಶಕ್ಕೆ ಬಳಸುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು. ದಸರಾ ಈಗಾಗಲೇ ಹಲವು ವ್ಯವಸ್ಥಾಪನಾ ಸವಾಲುಗಳನ್ನು ಎದುರಿಸುತ್ತಿದ್ದು, ಮೊದಲು ಮೂಲಸೌಕರ್ಯ ಹಾಗೂ ಆಡಳಿತಾತ್ಮಕ ಸಮಸ್ಯೆಗಳನ್ನು ಸರಿಪಡಿಸಬೇಕೆಂದು ಅವರು ಸಲಹೆ ನೀಡಿದರು.
ಅವರು ಇನ್ನೂ ಹೇಳುವಂತೆ, ದಸರಾ ಟಿಕೆಟ್ ವ್ಯವಸ್ಥೆ ಸೇರಿದಂತೆ ಹಲವು ವಿಷಯಗಳಲ್ಲಿ ಗೊಂದಲಗಳಿದ್ದು, ಅದನ್ನು ಮೊದಲು ಸರಿಪಡಿಸುವ ಅಗತ್ಯವಿದೆ. ಇಂತಹ ಪರಿಸ್ಥಿತಿಯಲ್ಲಿ ಕಂಬಳಕ್ಕೆ ಸುಮಾರು 8 ಕೋಟಿ ರೂಪಾಯಿ ವೆಚ್ಚ ಮಾಡುವ ನಿರ್ಧಾರವೂ ಸೂಕ್ತವಲ್ಲ ಎಂದು ಪ್ರಶ್ನಿಸಿದರು. ಬರ ಪರಿಸ್ಥಿತಿ ಹಿನ್ನೆಲೆ ಸರಳ ಮತ್ತು ಸಂಪ್ರದಾಯಬದ್ಧ ದಸರಾ ಆಚರಣೆಗೆ ಒತ್ತು ನೀಡಬೇಕೆಂದು ಅವರು ಒತ್ತಾಯಿಸಿದರು.
ಸರ್ಕಾರದ ಪ್ರಸ್ತಾವನೆ ಪ್ರಕಾರ, ಕರಾವಳಿ ಕರ್ನಾಟಕದ ಪ್ರಸಿದ್ಧ ಕಂಬಳ ಕ್ರೀಡೆಯನ್ನು ಮೈಸೂರಿನಲ್ಲಿ ಪರಿಚಯಿಸುವ ಮೂಲಕ ಅದನ್ನು ಇನ್ನಷ್ಟು ಜನಪ್ರಿಯಗೊಳಿಸುವ ಉದ್ದೇಶ ಹೊಂದಲಾಗಿದೆ. ಆದರೆ ಈ ನಿರ್ಧಾರಕ್ಕೆ ಸ್ಥಳೀಯ ಮಟ್ಟದಲ್ಲಿಯೇ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಪರ–ವಿರೋಧ ಚರ್ಚೆಗಳು ತೀವ್ರಗೊಂಡಿವೆ.
ಈ ನಡುವೆ ಯದುವೀರ್ ಒಡೆಯರ್ ಹೇಳಿಕೆ ರಾಜಕೀಯ ಮತ್ತು ಸಾಂಸ್ಕೃತಿಕ ವಲಯದಲ್ಲೂ ಗಮನ ಸೆಳೆದಿದ್ದು, ದಸರಾ ಉತ್ಸವದ ರೂಪುರೇಷೆಗಳ ಬಗ್ಗೆ ಮತ್ತಷ್ಟು ಚರ್ಚೆಗೆ ಕಾರಣವಾಗಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm