ಬ್ರೇಕಿಂಗ್ ನ್ಯೂಸ್
08-07-26 01:13 pm Hk Staffer ಕರ್ನಾಟಕ
ಮೈಸೂರು, ಜುಲೈ 8: ಗುಂಡ್ಲುಪೇಟೆ ತಾಲೂಕು ವ್ಯಾಪ್ತಿಯ ಮಲ್ಲಯ್ಯನಪುರ ಬಳಿಯ ಅನ್ಗಲ್ ಗುಡ್ಡದ ತಪ್ಪಲಿನ ಪ್ರದೇಶದಲ್ಲಿ ಅಪರೂಪದ ಥೋರಿಯಂ ಖನಿಜದ ನಿಕ್ಷೇಪವನ್ನು ವಿಜ್ಞಾನಿಗಳು ಪತ್ತೆಹಚ್ಚಿದ್ದಾರೆ.
ಕಳೆದ ಒಂದು ವರ್ಷದಲ್ಲಿ ದೇಶಾದ್ಯಂತ ಭಾರತೀಯ ಭೂ ವೈಜ್ಞಾನಿಕ ಇಲಾಖೆಯಿಂದ ಏರಿಯಲ್ ಸರ್ವೆ ನಡೆಸಲಾಗಿತ್ತು. ಈ ವೇಳೆ, ಕಚ್ಚಾ ತೈಲ, ಚಿನ್ನ ಮತ್ತು ಅಪರೂಪದ ಖನಿಜ ಸಂಪತ್ತಿನ ನಿಕ್ಷೇಪಗಳಿರುವ ಪ್ರದೇಶಗಳನ್ನು ಗುರುತಿಸಲಾಗಿತ್ತು. ಇದೇ ಸರ್ವೆಯಲ್ಲಿ ಗುಂಡ್ಲುಪೇಟೆ ಪಟ್ಟಣ ಮತ್ತು ಮಲ್ಲಯ್ಯನಪುರ ನಡುವಿನ ಅನ್ಗಲ್ ಗುಡ್ಡದ ತಪ್ಪಲಿನ ಮಣಗಹಳ್ಳಿ, ವಿಜಯಪುರ ಮತ್ತು ಕೂತನೂರು ಗ್ರಾಮಗಳ ವ್ಯಾಪ್ತಿಯಲ್ಲಿ ಸುಮಾರು 700 ಎಕರೆ ವ್ಯಾಪ್ತಿಯಲ್ಲಿ ಅಪರೂಪದ ಖನಿಜ (ರೇರ್ ಅರ್ಥ್ ಮಿನರಲ್) ನಿಕ್ಷೇಪ ಪತ್ತೆಯಾಗಿದೆ.
ಈ ರೀತಿ ನಿಕ್ಷೇಪ ಇರುವ ಪ್ರದೇಶದಲ್ಲಿ 70 ಎಕರೆಯನ್ನು ಥೋರಿಯಂ ಹಾಗೂ ಕೋರ್ ಮಿನರಲ್ಸ್ ಜೋನ್ ಎಂದು ಗುರುತಿಸಿರುವ ಕೇಂದ್ರ ಸರ್ಕಾರ ಗಣಿಗಾರಿಕೆ ನಡೆಸಲು ಮುಂದಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಅಣ್ಣೂರುಕೇರಿ ಗ್ರಾಮದ ಪೂರ್ವ ಪಾರ್ಶ್ವದ ಚಿಕ್ಕಮ್ಮ ತಾಯಿ ಬೆಟ್ಟದ ಪಶ್ಚಿಮ ಪಾರ್ಶ್ವದಲ್ಲೂ ಈ ಹಿಂದೆ ಖನಿಜ ನಿಕ್ಷೇಪ ಇರುವ ಬಗ್ಗೆ ಸುದ್ದಿಗಳು ಹರಡಿದ್ದವು. ಈಗಲೂ ಈ ಪ್ರದೇಶದ ಒಂದು ಪ್ರದೇಶಕ್ಕೆ ಬೀಗ ಮುದ್ರೆ ಹಾಕಲಾಗಿದೆ. ಈಗ ಥೋರಿಯಂ ನಿಕ್ಷೇಪ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಖನಿಜ ಸಾಧ್ಯತೆಯ ಚರ್ಚೆಗೆ ಮತ್ತಷ್ಟು ಬಲ ಬಂದಿದೆ.
ಥೋರಿಯಂ ನಿಕ್ಷೇಪ ಎಂದರೆ ಭೂಮಿಯಲ್ಲಿನ ಕಲ್ಲು, ಮಣ್ಣು ಮತ್ತು ನೀರಿನಲ್ಲಿ ನೈಸರ್ಗಿಕವಾಗಿ ದೊರೆಯುವ ವಿಕಿರಣಶೀಲ ಲೋಹದ ಶೇಖರಣೆಯಾಗಿದೆ. ಥೋರಿಯಂ ಅಪರೂಪದ ಲೋಹವಾಗಿದ್ದು ಸ್ವತಃ ಇಂಧನವಾಗಿ ಕೆಲಸ ಮಾಡದಿದ್ದರೂ ನ್ಯೂಟ್ರಾನ್ ಹೀರಿಕೊಳ್ಳುವಿಕೆಯ ಮೂಲಕ ಇದನ್ನು ಪರಮಾಣು ಸ್ಥಾವರದ ರಿಯಾಕ್ಟರ್ಗಳಲ್ಲಿ ಬಳಸಬಹುದು. ಥೋರಿಯಂ ಪ್ರಮುಖವಾಗಿ ‘ಮೋನಜೈಟ್’ಎಂಬ ಖನಿಜ ಮರಳಿನಲ್ಲಿ ದೊರೆಯುತ್ತದೆ. ಭಾರತವು ಜಗತ್ತಿನಲ್ಲೇ ಅತಿ ಹೆಚ್ಚು ಅಂದರೆ ಸುಮಾರು 8.50 ಲಕ್ಷ ಟನ್ಗಳಷ್ಟು ಥೋರಿಯಂ ನಿಕ್ಷೇಪಗಳನ್ನು ಹೊಂದಿದೆ ಎನ್ನಲಾಗುತ್ತದೆ. ವಿಶೇಷವಾಗಿ ಕೇರಳ, ಕರ್ನಾಟಕ, ಆಂಧ್ರಪ್ರದೇಶ ಮತ್ತು ತಮಿಳುನಾಡಿನ ಕಡಲ ತೀರದ ಮರಳಿನಲ್ಲಿ ಹೇರಳವಾಗಿ ಲಭ್ಯವಿದೆ ಎನ್ನುವ ಅಂದಾಜಿದೆ. ಭವಿಷ್ಯದಲ್ಲಿ ಭಾರತದ ಮಹತ್ವಾಕಾಂಕ್ಷೆಯ ಪರಮಾಣು ವಿದ್ಯುತ್ ಯೋಜನೆಗಳಲ್ಲಿ ಇದು ಅತ್ಯಂತ ಪ್ರಮುಖ ಇಂಧನವಾಗಲಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm