ಬ್ರೇಕಿಂಗ್ ನ್ಯೂಸ್
08-07-26 02:06 pm HK News Staffer ಕರ್ನಾಟಕ
ಬೆಂಗಳೂರು, ಜುಲೈ 08: ಆರ್ ಎಸ್ ಎಸ್ ಸಂಘಟನೆ ಬೆಳಗಾವಿಯಲ್ಲಿ ನಡೆಸುತ್ತಿರುವ ಕಾರ್ಯಕ್ರಮಕ್ಕೆ ಸರ್ಕಾರದ ಅನುಮತಿ ಬೇಕಿಲ್ಲ. ಅದು ಖಾಸಗಿ ಕಾರ್ಯಕ್ರಮ, ಆದರೆ ಬೀದಿಗಿಳಿದರೆ ಅನುಮತಿ ಪಡೆಯುವುದು ಕಡ್ಡಾಯ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದಾರೆ.
ಬೆಳಗಾವಿಯಲ್ಲಿ ಆರ್ ಎಸ್ ಎಸ್ ಕಾರ್ಯಕ್ರಮ ನಡೆಯುತ್ತಿರುವ ವಿಚಾರವಾಗಿ ಬೆಂಗಳೂರಿನಲ್ಲಿ ಬುಧವಾರ ಮಾತನಾಡಿದ ಅವರು, "ಕಾರ್ಯಕ್ರಮ ನಡೆಯಲಿ. ಅದು ಯಾವುದೇ ಖಾಸಗಿ ಕಾರ್ಯಕ್ರಮಕ್ಕೆ ನಮ್ಮ ಅನುಮತಿ ಬೇಕಾಗಿಲ್ಲಾ. ಆದರೆ ಬೀದಿಗಿಳಿದ್ರೆ ಅನುಮತಿ ಬೇಕಾಗುತ್ತದೆ" ಎಂದರು.
ಯಾವುದೇ ಸಂಘಟನೆಯಿಂದ ದೊಡ್ಡ ಮೆರವಣಿಗೆ ಮಾಡಬೇಕಾದ್ರೆ ಅನುಮತಿ ಬೇಕಲ್ವಾ? ಬೀದಿಗಿಳಿದ್ರೆ ಅನುಮತಿ ಕೇಳೇ ಕೇಳ್ತಾರೆ. ಕಾನೂನು ಸುವ್ಯವಸ್ಥೆ ವಾತಾವರಣ ಸರಿ ಇದ್ರೆ ಅನುಮತಿ ಕೊಡುತ್ತೇವೆ. ಇಲ್ಲಾ ಅಂದ್ರೆ ಮುಂದೂಡಿ ಅಂತಾ ಹೇಳುತ್ತೇವೆ ಎಂದರು.
ದೇಶಾದ್ಯಂತ ಇರುವ ಹಿರಿಯ ಆರ್.ಎಸ್.ಎಸ್. ಪ್ರಚಾರಕರು ಬೆಳಗಾವಿ ನಗರದಲ್ಲಿ ನಡೆಯುತ್ತಿರುವ ವಾರ್ಷಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಭೆಯಲ್ಲಿ ದೇಶಾದ್ಯಂತ ನಡೆಯುವ ಜನಗಣತಿ ಪ್ರಕ್ರಿಯೆ, ರಾಮನ ದೇಣಿಗೆ ವಿವಾದ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ. ಜುಲೈ 10ರಂದು ಸಭೆ ಆರಂಭಗೊಳ್ಳಲಿದ್ದು 12ರಂದು ಮುಕ್ತಾಯವಾಗಲಿದೆ. ಮೂರು ದಿನಗಳ ಸಭೆಯಲ್ಲಿ ವಿವಿಧ ವಿಚಾರಗಳ ಬಗ್ಗೆ ಪರಾಮರ್ಶೆ ನಡೆಯಲಿದೆ. ಅಷ್ಟೇ ಅಲ್ಲದೆ, ಸಂಘಟನೆಯ ವ್ಯಾಪ್ತಿಯನ್ನು ವಿಸ್ತರಿಸಲು ಶಾಖೆಗಳ ಸಂಖ್ಯೆಯನ್ನು ಹೆಚ್ಚಿಸುವ ಯೋಜನೆಗಳ ಬಗ್ಗೆ ಚರ್ಚೆ ನಡೆಯಲಿದೆ. ಆರ್ ಎಸ್ ಎಸ್ ನೋಂದಣಿ ವಿಚಾರವಾಗಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಧ್ವನಿ ಎತ್ತಿದ ವಿಚಾರದ ಬಗ್ಗೆಯೂ ವಿಮರ್ಶೆ ನಡೆಯುವ ಸಾಧ್ಯತೆ ಇದೆ.
ನಾನು ಇರೋವರೆಗೂ ಅನುಮತಿ ಕಡ್ಡಾಯ !
ಮಂಗಳವಾರ ಕಲಬುರ್ಗಿಯಲ್ಲಿ ಮಾತನಾಡಿದ್ದ ಖರ್ಗೆ, ನಾನು ಗೃಹಸಚಿವನಾಗಿ ಇರುವ ವರೆಗೂ ರಾಜ್ಯದಲ್ಲಿ ಆರ್ಎಸ್ಎಸ್ ಪಥಸಂಚಲನಕ್ಕೆ ಅನುಮತಿ ಕಡ್ಡಾಯ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಈಗಾಗಲೇ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಪತ್ರ ಬರೆದಿದ್ದೇನೆ. 100 ವರ್ಷದ ಹಳೆಯ ಸಂಘಟನೆ ಅಂತಾರಲ್ಲ, ನಿಮ್ಮ ಸಂಘಟನೆಯ ದಾಖಲೆಗಳು ಎಲ್ಲಿವೆ? ಪಥಸಂಚಲನ ನಡೆಸಲು ನೀವು ಕಡ್ಡಾಯವಾಗಿ ಅನುಮತಿ ಪಡೆಯಲೇಬೇಕು. ದಾಖಲೆಗಳು ಎಲ್ಲೋ ಇರಬಹುದು, ಹುಡುಕಿಕೊಂಡು ಬರಲಿ. ಅಲ್ಲಿಯವರೆಗೆ ಸುಮ್ಮನೆ ಬಿಡಲ್ಲ ಎಂದು ಹೇಳಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm