ಬ್ರೇಕಿಂಗ್ ನ್ಯೂಸ್
09-07-26 02:56 pm HK News Staffer ಕರ್ನಾಟಕ
ಬೆಂಗಳೂರು, ಜುಲೈ 9: ಮುಂದಿನ ಸುತ್ತಿನ ಸಚಿವ ಸಂಪುಟ ವಿಸ್ತರಣೆಯಾದರೆ ಕಾಂಗ್ರೆಸ್ ಸರ್ಕಾರ ಸ್ವಲ್ಪಮಟ್ಟಿಗೆ ಅಲುಗಾಡಬಹುದು. ಅದರ ಕಾವು 2-3 ದಿನಗಳ ವರೆಗೆ ಇರಬಹುದು. ಬೇರೇನೂ ಆಗುವುದಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಸಂಪುಟ ವಿಸ್ತರಣೆಯಾದರೆ ಸರ್ಕಾರದ ಬುಡ ಅಲ್ಲಾಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೀಡಿದ್ದ ಹೇಳಿಕೆ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಆಗಸ್ಟ್ ವೇಳೆಗೆ ವಿಸ್ತರಣೆಯಾಗುವ ಸಾಧ್ಯತೆಯಿದೆ. ಆಗ ಸ್ವಲ್ಪ ಮಟ್ಟಿಗೆ ಅಲುಗಾಡುತ್ತೆ, ಆದ್ರೆ ಹೆಚ್ಚೇನೂ ಆಗಲ್ಲ ಎಂದಿದ್ದಾರೆ. ಹೆಚ್ಚೆಂದ್ರೆ ಎರಡು ಮೂರು ದಿನ ಅಲ್ಲಾಡಬಹುದು, ಆಮೇಲೆ ಎಲ್ಲವೂ ಸರಿ ಹೋಗುತ್ತದೆ ಎಂದಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲೂ ಮೂವರು ಸಿಎಂಗಳಾಗುತ್ತಾರೆ ಎಂಬುದು ಸರಿಯಲ್ಲ. ಡಿ.ಕೆ.ಶಿವಕುಮಾರ್ ಅವರೇ ಮುಂದುವರೆಯುತ್ತಾರೆ. ನಮ್ಮ ಸರಕಾರ ಗಟ್ಟಿಯಾಗಿದೆ ಎಂದು ಹೇಳಿದರು. ಸಂಪುಟ ವಿಸ್ತರಣೆ ವಿಳಂಬ ವಿಚಾರದಲ್ಲಿ ನಾವು ಏನೂ ಮಾಡಲು ಆಗುವುದಿಲ್ಲ. ವಿಸ್ತರಣೆ ಮಾಡುವ ವರೆಗೆ ಕಾಯಲೇಬೇಕು. ಈಗಾಗಲೇ ಒಂದು ತಿಂಗಳು ತಡವಾಗಿದೆ ಎಂದರು.
ಉಳಿದ 20 ಸ್ಥಾನಗಳನ್ನು ಭರ್ತಿ ಮಾಡುವಾಗ ಜಾತಿ ಮತ್ತು ಪ್ರಾದೇಶಿಕ ಸಮೀಕರಣಗಳನ್ನು ಪರಿಗಣಿಸಲು ಪಕ್ಷ ಮುಂದಾಗಿದೆ. ಆದರೆ ಹೆಚ್ಚಿನ ಶಾಸಕರು ಸಚಿವ ಸ್ಥಾನಕ್ಕಾಗಿ ಲಾಬಿ ಮಾಡುತ್ತಿರುವುದು ವಿಸ್ತರಣೆ ವಿಳಂಬಕ್ಕೆ ಕಾರಣವಾಗಿದೆ. ಸಿದ್ದರಾಮಯ್ಯ ಸಂಪುಟದಲ್ಲಿದ್ದ ಬಹುತೇಕರನ್ನು ಬಿಟ್ಟು ಹೊಸಬರಿಗೆ ಅವಕಾಶ ನೀಡಲು ಡಿಕೆಶಿ ಉತ್ಸುಕರಾಗಿದ್ದಾರೆ. ಆದರೆ ಈ ನಡೆಯಿಂದ ಸಿದ್ದರಾಮಯ್ಯ ಬೆಂಬಲಿಗರು ಯಾವ ನಡೆ ತೋರುತ್ತಾರೆಂಬ ಕುತೂಹಲ ಇದೆ. 224 ಸದಸ್ಯ ಬಲ ಇರುವ ರಾಜ್ಯ ವಿಧಾನಸಭೆಯಲ್ಲಿ ಗರಿಷ್ಠ 34 ಸಚಿವರನ್ನು ಮಾಡಲು ಅವಕಾಶ ಇದೆ. ಸದ್ಯಕ್ಕೆ 13 ಸಚಿವರನ್ನು ಮಾತ್ರ ನೇಮಕ ಮಾಡಿದ್ದು ಹೆಚ್ಚಿನ ಇಲಾಖೆಗಳು ಸಚಿವರಿಲ್ಲದೆ ಬಿಕೋ ಎನ್ನುವಂತಾಗಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm