ಬ್ರೇಕಿಂಗ್ ನ್ಯೂಸ್
11-07-26 11:42 am HK News Staffer ಕರ್ನಾಟಕ
ಬೆಂಗಳೂರು, ಜುಲೈ 11: ಸಾಂಸ್ಕೃತಿಕ ನಗರಿ ಮೈಸೂರಿನ ದಸರಾ ಮಹೋತ್ಸವದಲ್ಲಿ ಕರಾವಳಿಯ ಜಾನಪದ ಕ್ರೀಡೆ ಕಂಬಳ ನಡೆಸುವುದಕ್ಕೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಉನ್ನತ ಮಟ್ಟದ ಸಭೆಯಲ್ಲಿ ನಿರ್ಧರಿಸಲಾಗಿದೆ. ಶುಕ್ರವಾರ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ, ಮೈಸೂರು ದಸರಾದಲ್ಲಿ ಕಂಬಳ ಆಯೋಜಿಸುವುದಕ್ಕೆ ಅಧಿಕೃತವಾಗಿ ತೀರ್ಮಾನಿಸಲಾಗಿದೆ. ಇದಕ್ಕೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ದಸರಾ ಮಹೋತ್ಸವದಲ್ಲಿ ಕಂಬಳ ಆಯೋಜನೆಗೆ ಈ ಹಿಂದೆ ಸಾಂಸ್ಕೃತಿಕ ಹಿನ್ನೆಲೆ ಮುಂದಿಟ್ಟು ತೀವ್ರ ವಿರೋಧ ವ್ಯಕ್ತಪಡಿಸಿದ್ದ ಮೈಸೂರು ಸಂಸದ ಯದುವೀರ್ ಒಡೆಯರ್ ಕೂಡ ಸಭೆಯಲ್ಲಿ ಭಾಗವಹಿಸಿದ್ದರು. ಸುದೀರ್ಘ ಚರ್ಚೆಯ ಬಳಿಕ ಅವರು ದಸರಾದಲ್ಲಿ ಕಂಬಳ ನಡೆಸುವುದಕ್ಕೆ ತಮ್ಮ ಸಂಪೂರ್ಣ ಬೆಂಬಲ ಸೂಚಿಸಿದ್ದಾರೆ. ಸಭೆಯಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಯತೀಂದ್ರ ಸಿದ್ದರಾಮಯ್ಯ, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಮೂರೂ ಜಿಲ್ಲೆಗಳ ಎಲ್ಲಾ ರಾಜಕೀಯ ಪಕ್ಷಗಳ ಶಾಸಕರು, ಸಂಸದರು ಮತ್ತು ವಿಧಾನ ಪರಿಷತ್ ಸದಸ್ಯರು ಭಾಗವಹಿಸಿ ಒಮ್ಮತದ ನಿರ್ಧಾರ ಕೈಗೊಂಡಿದ್ದಾರೆ.
ಬೆಂಗಳೂರು ಕಂಬಳದ ಯಶಸ್ಸಿನ ಬೆನ್ನಲ್ಲೇ ಮೈಸೂರು ದಸರಾದಲ್ಲೂ ಕರಾವಳಿಯ ಹೆಮ್ಮೆಯ ಕೋಣಗಳ ಓಟಕ್ಕೆ ಮಂಜೂರಾತಿ ನೀಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಕಂಬಳ ಸಮಿತಿ ವತಿಯಿಂದ ಸನ್ಮಾನಿಸಲಾಯಿತು. ಪುತ್ತೂರು ಶಾಸಕ ಅಶೋಕ್ ರೈ ಹಾಗೂ ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ನೇತೃತ್ವದಲ್ಲಿ ಮುಖ್ಯಮಂತ್ರಿಗಳಿಗೆ ಸಾಂಪ್ರದಾಯಿಕ ಮೈಸೂರು ಪೇಟ ತೊಡಿಸಿ, ಕಂಬಳದ ಗೌರವದ ಸಂಕೇತವಾದ ‘ಬೆತ್ತ’ವನ್ನು ನೀಡಿ ಕೃತಜ್ಞತೆ ಸಲ್ಲಿಸಲಾಯಿತು. “ತುಳುನಾಡಿನ ಜಾನಪದ ಕಲೆಯೊಂದು ದಸರಾ ವೇದಿಕೆಯಲ್ಲಿ ಅನಾವರಣಗೊಳ್ಳುತ್ತಿರುವುದು ಕಂಬಳಕ್ಕೆ ವಿಶ್ವಮಟ್ಟದಲ್ಲಿ ಮತ್ತಷ್ಟು ಪ್ರಚಾರ ತಂದುಕೊಡಲಿದೆ” ಎಂದು ಶಾಸಕ ಅಶೋಕ್ ರೈ ಹರ್ಷ ವ್ಯಕ್ತಪಡಿಸಿದ್ದಾರೆ.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm