ಬ್ರೇಕಿಂಗ್ ನ್ಯೂಸ್
13-07-26 10:32 am HK News Staffer ಕರ್ನಾಟಕ
ಬೆಂಗಳೂರು, ಜುಲೈ 13: ರಾಜ್ಯದಲ್ಲಿ ಬಹುತೇಕ ಗ್ರಾಮ ಪಂಚಾಯತಿಗಳ ಆಡಳಿತಾವಧಿ ಮುಕ್ತಾಯವಾಗಿದ್ದು, ಮುಂದಿನ 3-4 ತಿಂಗಳಲ್ಲಿ ಚುನಾವಣೆ ನಡೆಯಲಿದೆ ಎಂದು ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ್ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.
ಕೆಲವು ಗ್ರಾಮ ಪಂಚಾಯತಿಗಳ ಮೇಲ್ದರ್ಜೆ ಮತ್ತು ವಿಲೀನದ ಕಾರಣಗಳಿಂದಾಗಿ ಕ್ಷೇತ್ರ ಪುನರ್ ವಿಂಗಡಣೆ ಪ್ರಕ್ರಿಯೆಯೂ ನಡೆಯುತ್ತಿದೆ. ಇನ್ನೆರಡು ತಿಂಗಳಲ್ಲಿ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ, ಮೀಸಲಾತಿ ಪಟ್ಟಿಯೊಂದಿಗೆ ರಾಜ್ಯ ಚುನಾವಣಾ ಆಯೋಗಕ್ಕೆ ವರದಿ ಸಲ್ಲಿಸಲಾಗುವುದು. ವರದಿ ಸಲ್ಲಿಕೆಯಾದ 45 ದಿನಗಳೊಳಗೆ ಚುನಾವಣೆ ನಡೆಸಲು ಆಯೋಗ ಸಿದ್ಧತೆ ನಡೆಸಲಿದೆ ಎಂದು ಸಚಿವ ಖಂಡ್ರೆ ತಿಳಿಸಿದ್ದಾರೆ.
ಪ್ರಸ್ತುತ ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ನಡೆಯುತ್ತಿದ್ದು, ಸರ್ಕಾರಿ ಸಿಬ್ಬಂದಿ ಬಹುತೇಕ ಅದರ ಕೆಲಸದಲ್ಲಿ ನಿರತರಾಗಿದ್ದಾರೆ. ಹೀಗಾಗಿ ಚುನಾವಣೆ ತಯಾರಿಗೆ ಹೆಚ್ಚಿನ ಕಾಲಾವಕಾಶದ ಅಗತ್ಯವಿದೆ. ಆದರೂ ಅಕ್ಟೋಬರ್- ನವೆಂಬರ್ ತಿಂಗಳಲ್ಲಿ ಚುನಾವಣೆ ನಡೆಯಲಿದೆ ಎಂದವರು ವಿವರಿಸಿದರು.
ಗ್ರಾಮೀಣ ಭಾಗದಲ್ಲಿ 'ಇ-ಸ್ವತ್ತು' ಕುರಿತಾಗಿ ಸಾರ್ವಜನಿಕರಿಂದ ದೂರುಗಳು ಬರುತ್ತಿದ್ದು, ಎಸ್ಐಆರ್ ಪ್ರಕ್ರಿಯೆ ಮುಗಿದ ತಕ್ಷಣ ಮನೆ ಬಾಗಿಲಿಗೆ ಹೋಗಿ ಇ-ಸ್ವತ್ತು ನೀಡುವ ಕಾರ್ಯಕ್ರಮ ಜಾರಿಗೆ ತರಲಾಗುವುದು. ಆದರೆ, ಬಿ ಖರಾಬು ಜಮೀನುಗಳಲ್ಲಿ ನಿರ್ಮಿಸಿರುವ ಲೇಔಟ್ಗಳಿಗೆ ಇ-ಸ್ವತ್ತು ನೀಡಲು ಸಾಧ್ಯವಿಲ್ಲ. ಈ ಬಗ್ಗೆ ಕಂದಾಯ ಇಲಾಖೆಯ ಸಚಿವರೊಂದಿಗೆ ಚರ್ಚಿಸಲಾಗುವುದು ಎಂದರು.
ಕೇಂದ್ರ ಸರ್ಕಾರದ 15ನೇ ಹಣಕಾಸು ಆಯೋಗದ ಶಿಫಾರಸಿನಂತೆ ರಾಜ್ಯಕ್ಕೆ ಬರಬೇಕಿದ್ದ 2,186.20 ಕೋಟಿ ರೂಪಾಯಿ ಅನುದಾನವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿಲ್ಲ. ತಾಂತ್ರಿಕ ಸಮಸ್ಯೆ ನೆಪವೊಡ್ಡಿ ಹಣ ತಡೆಹಿಡಿಯುವುದು ಸರಿಯಲ್ಲ ಎಂದು ಸಚಿವರು ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯದ ಸಂಸದರೆಲ್ಲರೂ ಒಗ್ಗೂಡಿ ಈ ಬಗ್ಗೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕೆಂದು ಅವರು ಮನವಿ ಮಾಡಿದರು.
ಸರ್ಕಾರವು ಪಂಚಾಯತಿ ಚುನಾವಣೆಗೆ ಸಿದ್ಧತೆಗಳನ್ನು ನಡೆಸುತ್ತಿದ್ದು, ಕ್ಷೇತ್ರಗಳ ವಿಂಗಡಣೆ ಪೂರ್ಣಗೊಂಡ ನಂತರ ಅಕ್ಟೋಬರ್ ಅಥವಾ ನವೆಂಬರ್ ವೇಳೆಗೆ ಚುನಾವಣೆ ನಡೆಯುವ ಸಾಧ್ಯತೆಗಳಿವೆ. ಇದರೊಂದಿಗೆ, ಕೇಂದ್ರದಿಂದ ಬಾಕಿ ಇರುವ ಅನುದಾನ ಬಿಡುಗಡೆಗೂ ರಾಜ್ಯ ಸರ್ಕಾರ ಪ್ರಯತ್ನಿಸಲಾಗುವುದು ಎಂದು ಖಂಡ್ರೆ ತಿಳಿಸಿದ್ದಾರೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm