ಬ್ರೇಕಿಂಗ್ ನ್ಯೂಸ್
13-07-26 10:32 am HK News Staffer ಕರ್ನಾಟಕ
ಬೆಂಗಳೂರು, ಜುಲೈ 13: ರಾಜ್ಯದಲ್ಲಿ ಬಹುತೇಕ ಗ್ರಾಮ ಪಂಚಾಯತಿಗಳ ಆಡಳಿತಾವಧಿ ಮುಕ್ತಾಯವಾಗಿದ್ದು, ಮುಂದಿನ 3-4 ತಿಂಗಳಲ್ಲಿ ಚುನಾವಣೆ ನಡೆಯಲಿದೆ ಎಂದು ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ್ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.
ಕೆಲವು ಗ್ರಾಮ ಪಂಚಾಯತಿಗಳ ಮೇಲ್ದರ್ಜೆ ಮತ್ತು ವಿಲೀನದ ಕಾರಣಗಳಿಂದಾಗಿ ಕ್ಷೇತ್ರ ಪುನರ್ ವಿಂಗಡಣೆ ಪ್ರಕ್ರಿಯೆಯೂ ನಡೆಯುತ್ತಿದೆ. ಇನ್ನೆರಡು ತಿಂಗಳಲ್ಲಿ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ, ಮೀಸಲಾತಿ ಪಟ್ಟಿಯೊಂದಿಗೆ ರಾಜ್ಯ ಚುನಾವಣಾ ಆಯೋಗಕ್ಕೆ ವರದಿ ಸಲ್ಲಿಸಲಾಗುವುದು. ವರದಿ ಸಲ್ಲಿಕೆಯಾದ 45 ದಿನಗಳೊಳಗೆ ಚುನಾವಣೆ ನಡೆಸಲು ಆಯೋಗ ಸಿದ್ಧತೆ ನಡೆಸಲಿದೆ ಎಂದು ಸಚಿವ ಖಂಡ್ರೆ ತಿಳಿಸಿದ್ದಾರೆ.
ಪ್ರಸ್ತುತ ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ನಡೆಯುತ್ತಿದ್ದು, ಸರ್ಕಾರಿ ಸಿಬ್ಬಂದಿ ಬಹುತೇಕ ಅದರ ಕೆಲಸದಲ್ಲಿ ನಿರತರಾಗಿದ್ದಾರೆ. ಹೀಗಾಗಿ ಚುನಾವಣೆ ತಯಾರಿಗೆ ಹೆಚ್ಚಿನ ಕಾಲಾವಕಾಶದ ಅಗತ್ಯವಿದೆ. ಆದರೂ ಅಕ್ಟೋಬರ್- ನವೆಂಬರ್ ತಿಂಗಳಲ್ಲಿ ಚುನಾವಣೆ ನಡೆಯಲಿದೆ ಎಂದವರು ವಿವರಿಸಿದರು.
ಗ್ರಾಮೀಣ ಭಾಗದಲ್ಲಿ 'ಇ-ಸ್ವತ್ತು' ಕುರಿತಾಗಿ ಸಾರ್ವಜನಿಕರಿಂದ ದೂರುಗಳು ಬರುತ್ತಿದ್ದು, ಎಸ್ಐಆರ್ ಪ್ರಕ್ರಿಯೆ ಮುಗಿದ ತಕ್ಷಣ ಮನೆ ಬಾಗಿಲಿಗೆ ಹೋಗಿ ಇ-ಸ್ವತ್ತು ನೀಡುವ ಕಾರ್ಯಕ್ರಮ ಜಾರಿಗೆ ತರಲಾಗುವುದು. ಆದರೆ, ಬಿ ಖರಾಬು ಜಮೀನುಗಳಲ್ಲಿ ನಿರ್ಮಿಸಿರುವ ಲೇಔಟ್ಗಳಿಗೆ ಇ-ಸ್ವತ್ತು ನೀಡಲು ಸಾಧ್ಯವಿಲ್ಲ. ಈ ಬಗ್ಗೆ ಕಂದಾಯ ಇಲಾಖೆಯ ಸಚಿವರೊಂದಿಗೆ ಚರ್ಚಿಸಲಾಗುವುದು ಎಂದರು.
ಕೇಂದ್ರ ಸರ್ಕಾರದ 15ನೇ ಹಣಕಾಸು ಆಯೋಗದ ಶಿಫಾರಸಿನಂತೆ ರಾಜ್ಯಕ್ಕೆ ಬರಬೇಕಿದ್ದ 2,186.20 ಕೋಟಿ ರೂಪಾಯಿ ಅನುದಾನವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿಲ್ಲ. ತಾಂತ್ರಿಕ ಸಮಸ್ಯೆ ನೆಪವೊಡ್ಡಿ ಹಣ ತಡೆಹಿಡಿಯುವುದು ಸರಿಯಲ್ಲ ಎಂದು ಸಚಿವರು ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯದ ಸಂಸದರೆಲ್ಲರೂ ಒಗ್ಗೂಡಿ ಈ ಬಗ್ಗೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕೆಂದು ಅವರು ಮನವಿ ಮಾಡಿದರು.
ಸರ್ಕಾರವು ಪಂಚಾಯತಿ ಚುನಾವಣೆಗೆ ಸಿದ್ಧತೆಗಳನ್ನು ನಡೆಸುತ್ತಿದ್ದು, ಕ್ಷೇತ್ರಗಳ ವಿಂಗಡಣೆ ಪೂರ್ಣಗೊಂಡ ನಂತರ ಅಕ್ಟೋಬರ್ ಅಥವಾ ನವೆಂಬರ್ ವೇಳೆಗೆ ಚುನಾವಣೆ ನಡೆಯುವ ಸಾಧ್ಯತೆಗಳಿವೆ. ಇದರೊಂದಿಗೆ, ಕೇಂದ್ರದಿಂದ ಬಾಕಿ ಇರುವ ಅನುದಾನ ಬಿಡುಗಡೆಗೂ ರಾಜ್ಯ ಸರ್ಕಾರ ಪ್ರಯತ್ನಿಸಲಾಗುವುದು ಎಂದು ಖಂಡ್ರೆ ತಿಳಿಸಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm