ಬ್ರೇಕಿಂಗ್ ನ್ಯೂಸ್
19-08-26 09:52 pm HK News Staffer ಕರ್ನಾಟಕ
ಬೆಂಗಳೂರು, ಆ.19: ನಗರದ ರಿಚ್ಮಂಡ್ ಟೌನ್ನಲ್ಲಿರುವ ಖಾಸಗಿ ಶಾಲೆ ಒಂದರಲ್ಲಿ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳಿಗೆ ಏಕಾಏಕಿ ಜ್ವರ ಬಾಧೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಡೀ ಶಾಲೆಯನ್ನೇ ಬಂದ್ ಮಾಡಲಾಗಿದೆ. ಆಸುಪಾಸಿನಲ್ಲಿ ಎಚ್1ಎನ್1 ಸೋಂಕಿನ ಬಗ್ಗೆ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಬೆಂಗಳೂರಿನ ರಿಚ್ಮಂಡ್ ಟೌನ್ ವ್ಯಾಪ್ತಿಯ ಖಾಸಗಿ ಶಾಲೆಯ 2,500 ವಿದ್ಯಾರ್ಥಿಗಳ ಪೈಕಿ 500 ವಿದ್ಯಾರ್ಥಿಗಳಲ್ಲಿ ಜ್ವರ, ಶೀತ, ಕೆಮ್ಮು ಕಾಣಿಸಿಕೊಂಡಿದೆ. ಸಿಬ್ಬಂದಿಗೂ ಜ್ವರದ ಲಕ್ಷಣ ಕಾಣಿಸಿಕೊಂಡಿದ್ದರಿಂದ ತರಗತಿಗಳನ್ನು ಸ್ಥಗಿತಗೊಳಿಸಲಾಗಿದೆ. ಮೊದಲು ಜ್ವರ ಕಾಣಿಸಿಕೊಂಡ 137 ವಿದ್ಯಾರ್ಥಿಗಳಿಗೆ ಚಿಕಿತ್ಸೆ ಕೊಡಿಸಲಾಗಿತ್ತು. ಅಲ್ಲದೆ, ಶಾಲೆಯನ್ನು ಸಂಪೂರ್ಣ ಸ್ಯಾನಿಟೈಸ್ ಹಾಕಿ ಸ್ವಚ್ಛಗೊಳಿಸಲಾಗಿತ್ತು.
ಆನಂತರ, ಜ್ವರದ ಲಕ್ಷಣಗಳಿರುವ ವಿದ್ಯಾರ್ಥಿಗಳು ಶಾಲೆಗೆ ಬಾರದಂತೆ ಸೂಚಿಸಿ ತರಗತಿಗಳನ್ನು ಮತ್ತೆ ಆರಂಭಿಸಲಾಗಿತ್ತು. ಆದರೆ, ಇಬ್ಬರಲ್ಲಿ H1N1 ಸೋಂಕು ದೃಢಪಟ್ಟಿದ್ದಲ್ಲದೆ, ಜ್ವರ, ಕೆಮ್ಮು ಬಂದವರ ಸಂಖ್ಯೆ ಹೆಚ್ಚಿದ ಹಿನ್ನೆಲೆಯಲ್ಲಿ ಮಾಂಟೆಸ್ಸರಿ, ಪ್ರಾಥಮಿಕ ತರಗತಿಗಳನ್ನು ಸ್ಥಗಿತಗೊಳಿಸಲಾಗಿದೆ. ಸದ್ಯ 6 ರಿಂದ 12ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ತರಗತಿಗಳನ್ನು ನಡೆಸಲಾಗುತ್ತಿದೆ.
ಶಾಲೆಯ ಅಕ್ಕಪಕ್ಕದಲ್ಲಿರುವ ಬೀದಿ ಬದಿಯ ಆಹಾರ ಮಾರಾಟ ಅಂಗಡಿಗಳು, ತಂಪು ಪಾನೀಯ ಅಂಗಡಿಗಳು ಶುಚಿತ್ವ ಕಾಪಾಡದೇ ಇರುವುದೇ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಅನಾರೋಗ್ಯಕ್ಕೆ ಕಾರಣ ಎಂದು ಶಾಲಾ ಆಡಳಿತ ಮಂಡಳಿ ಆರೋಪಿಸಿದೆ. ಎಗ್ ರೈಸ್, ಕಬಾಬ್ ಅಂಗಡಿಗಳು ತ್ಯಾಜ್ಯವನ್ನು ಸರಿಯಾಗಿ ನಿರ್ವಹಣೆ ಮಾಡುತ್ತಿಲ್ಲ. ಜತೆಗೆ ಬೀದಿ ಬದಿಯೇ ಮೂತ್ರವಿಸರ್ಜನೆ ಮಾಡುತ್ತಿರುವುದರಿಂದ ಶಾಲೆಯ ಪರಿಸರಕ್ಕೆ ಸಮಸ್ಯೆಯಾಗಿದೆ ಎಂದು ಆರೋಪಿಸಲಾಗಿದೆ.
ಏನಿದು H1N1 ವೈರಸ್?
H1N1 ಎಂಬುದು ಇನ್ಫ್ಲುಯೆನ್ಸ A ವೈರಸ್ನಿಂದ ಉಂಟಾಗುವ ಉಸಿರಾಟದ ಸೋಂಕಾಗಿದ್ದು, ಸಾಮಾನ್ಯವಾಗಿ ಇದು ಮೂಗು, ಗಂಟಲು ಮತ್ತು ಶ್ವಾಸಕೋಶದ ಮೇಲೆ ಪರಿಣಾಮ ಬೀರುತ್ತದೆ. ಅಲ್ಲದೆ, ಸೋಂಕಿತ ವ್ಯಕ್ತಿ ಕೆಮ್ಮಿದಾಗ, ಸೀನಿದಾಗ, ಮಾತನಾಡುವಾಗ ಸೂಕ್ಷ್ಮ ಕಣದ ಮೂಲಕ ವ್ಯಕ್ತಿಯಿಂದ ವ್ಯಕ್ತಿಗೆ ಹರಡುತ್ತದೆ. ಹೀಗಾಗಿ ಈ ಸೋಂಕು ಸಾಂಕ್ರಾಮಿಕ ಎಂದು ಪರಿಗಣಿಸಲ್ಪಟ್ಟಿದ್ದು ಎಚ್ಚರಿಕೆ ವಹಿಸಬೇಕಾಗಿದೆ.
19-08-26 09:55 pm
HK News Staffer
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
ಆಹಾರ ಸುರಕ್ಷತೆಗೆ ಖಾದರ್ ಹೊಸ ಪ್ಲ್ಯಾನ್; ಹೋಟೆಲ್ ಆ...
17-08-26 02:26 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
20-08-26 05:16 pm
HK News Staffer
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
ಜೈಲಿನ ಜಾಮರ್ ಸಮಸ್ಯೆ ಇತ್ಯರ್ಥಕ್ಕೆ ಕಾಲಮಿತಿ ನಿಗದಿಪ...
19-08-26 04:19 pm
ಕರಾವಳಿಯಲ್ಲಿ ನಾಗರ ಪಂಚಮಿ ಸಂಭ್ರಮ ; ನಾಗಬನ, ನಾಗ ಸ...
17-08-26 05:07 pm
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
20-08-26 05:33 pm
HK News Staffer
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm
ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ನಲ್ಲಿ ಭ್ರಷ್ಟಾಚ...
20-08-26 01:58 pm
4.91 ಕೋಟಿ ರೂ. ಮೌಲ್ಯದ ನಕಲಿ ಔಷಧಿ ದಂಧೆ ಬಯಲು; ಆಸ...
19-08-26 07:25 pm
ಆಸ್ತಿ ವಿವಾದ ; ಪ್ರಿಯಕರನ ಜೊತೆ ಸೇರಿ ಅಪ್ಪನನ್ನ ಕಲಿ...
18-08-26 10:06 pm