ಬ್ರೇಕಿಂಗ್ ನ್ಯೂಸ್
09-01-21 01:03 pm Bangalore Correspondent ಕರ್ನಾಟಕ
ಬೆಂಗಳೂರು, ಜ.9: ಸಂಚಾರ ನಿಯಮ ಉಲ್ಲಂಘನೆ ಮಾಡುವ ಮಂದಿಯನ್ನ ರಸ್ತೆಯಲ್ಲಿ ತಡೆದು ದಂಡ ವಿಧಿಸುವ ಕ್ರಮಕ್ಕೆ ಬೆಂಗಳೂರು ಪೋಲಿಸರು ತಿಲಾಂಜಲಿ ಇಟ್ಟಿದ್ದಾರೆ.
ಇದರಿಂದ ನಡು ರಸ್ತೆಯಲ್ಲಿ ಬೈಕ್ ಸವಾರರಿಗೆ ಆಗುತ್ತಿದ್ದ ದೊಡ್ಡ ಕಿರಿಕಿರಿ ತಪ್ಪಿದೆ. ಹಾಗಂತ ಸಂಚಾರಿ ನಿಯಮ ಉಲ್ಲಂಘನೆ ಮಾಡಿ ತಪ್ಪಿಸಿಕೊಳ್ಳುವುದಕ್ಕೆ ಸಾಧ್ಯವಿಲ್ಲ. ಏಕೆಂದರೆ ನಿಮ್ಮ ವಿರುದ್ಧ ಡಿಜಿಟಲ್ ಕೇಸ್ ದಾಖಲಾಗಲಿದ್ದು ನೀವು ಸಂಚಾರಿ ನಿಯಮ ಉಲ್ಲಂಘಿಸಿದರೆ ನಿಮ್ಮ ವಿಳಾಸಕ್ಕೆ ನೋಟಿಸ್ ಬರಲಿದೆ. ಇದಕ್ಕೆ ನೀವು ದಂಡವನ್ನೂ ಪಾವತಿಸಬೇಕಾಗುತ್ತದೆ.

ಬೆಂಗಳೂರು ಮಹಾನಗರದ ರಸ್ತೆಗಳ ಮಧ್ಯೆ ವಾಹನ ತಡೆಯುವುದರಿಂದ ಟ್ರಾಫಿಕ್ ಸಮಸ್ಯೆ ಆಗುವ ಕಾರಣ ಮಾರ್ಗ ಮಧ್ಯೆ ತಡೆದು ನಿಲ್ಲಿಸುವ ಕೆಲಸ ಮಾಡಬೇಡಿ ಎಂದು ಪೊಲೀಸ್ ಇಲಾಖೆಯಿಂದ ಸೂಚನೆ ಬಂದಿದೆ. ಬದಲಿಗೆ ಯಾರು ನಿಯಮ ಉಲ್ಲಂಘನೆ ಮಾಡುತ್ತಾರೋ ಅಂಥವರ ವಿರುದ್ಧ ಪ್ರಕರಣ ದಾಖಲಿಸಲು ಪೋಲಿಸ್ ಇಲಾಖೆ ಸೂಚನೆ ನೀಡಿದೆ.
ಎಲ್ಲೆಂದರಲ್ಲಿ ದ್ವಿಚಕ್ರ ವಾಹನಗಳನ್ನು ನಿಲ್ಲಿಸಿ, ದಂಡ ವಿಧಿಸುವುದರ ಬಗ್ಗೆ ಸೊಶೀಯಲ್ ಮೀಡಿಯಾದಲ್ಲಿ ಭಾರಿ ಚರ್ಚೆ ಆಗಿತ್ತು. ಭಾರೀ ಟೀಕೆಯೂ ಸಾರ್ವಜನಿಕರ ಕಡೆಯಿಂದ ಕೇಳಿಬಂದಿತ್ತು. ಇದರ ಪರಿಣಾಮ ಎಂಬಂತೆ ಪೋಲಿಸ್ ಇಲಾಖೆ ಈ ಕ್ರಮಕ್ಕೆ ಮುಂದಾಗಿದೆ.

ಇದರಂತೆ, ನಿಯಮ ಉಲ್ಲಂಘನೆ ಮಾಡುವ ವಾಹನಗಳನ್ನ ಯಾವುದೇ ಕಾನ್ಸ್ಟೇಬಲ್ ಅಡ್ಡಗಟ್ಟಿ ನಿಲ್ಲಿಸಬಾರದು. ಬದಲಿಗೆ ಮೊಬೈಲ್ ಕ್ಯಾಮೆರಾದಲ್ಲಿ ಚಿತ್ರೀಕರಿಸಿ, ಬೈಕ್ ನಂಬರ್ ಎಂಟ್ರಿ ಮಾಡಿಕೊಂಡು ಕೇಸ್ ದಾಖಲಿಸಬೇಕು ಎಂದು ಸೂಚಿಸಲಾಗಿದೆ. ಆದರೆ ದಿನಕ್ಕೆ ಕನಿಷ್ಟ 25 ಈ ರೀತಿಯ ಕೇಸ್ ದಾಖಲಿಸಬೇಕೆಂಬ ಟಾರ್ಗೆಟ್ ಅನ್ನು ಪೊಲೀಸರಿಗೆ ನೀಡಲಾಗಿದೆ.
ರಸ್ತೆಯಲ್ಲಿ ದಂಡ ವಿಧಿಸುವ ಬದಲು ಆರ್ಟಿಒ ಹಾಗೂ ವಾಯು ಮಾಲಿನ್ಯ ಪ್ರಮಾಣ ತಪಾಸಣೆಗೆ ಬರುವ ವಾಹನಗಳಿಗೆ ಹಳೇ ಕೇಸ್ ಇದ್ದರೆ ದಂಡ ವಿಧಿಸಲಾಗುತ್ತದೆ ಎನ್ನಲಾಗಿದೆ. ಹೀಗೆ ಡಿಜಿಟಲ್ ಪದ್ದತಿ ಜಾರಿಗೆ ಬಂದರೆ ಬಿಲ್ ಕೊಡದೆ ಹಣ ಪಡೆಯುವ ಕ್ರಮ ಕೂಡ ತಪ್ಪಲಿದೆ. ಪೊಲೀಸರಿಂದ ರಸ್ತೆ ಮಧ್ಯೆ ಹಣ ಪೀಕಿಸಿಕೊಳ್ಳುವ ಕಿರಿ ಕಿರಿಯನ್ನು ಬೈಕ್ ಸವಾರರು ತಪ್ಪಿಸಿಕೊಳ್ಳಲಿದ್ದಾರೆ.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm