ಬ್ರೇಕಿಂಗ್ ನ್ಯೂಸ್
09-01-21 01:03 pm Bangalore Correspondent ಕರ್ನಾಟಕ
ಬೆಂಗಳೂರು, ಜ.9: ಸಂಚಾರ ನಿಯಮ ಉಲ್ಲಂಘನೆ ಮಾಡುವ ಮಂದಿಯನ್ನ ರಸ್ತೆಯಲ್ಲಿ ತಡೆದು ದಂಡ ವಿಧಿಸುವ ಕ್ರಮಕ್ಕೆ ಬೆಂಗಳೂರು ಪೋಲಿಸರು ತಿಲಾಂಜಲಿ ಇಟ್ಟಿದ್ದಾರೆ.
ಇದರಿಂದ ನಡು ರಸ್ತೆಯಲ್ಲಿ ಬೈಕ್ ಸವಾರರಿಗೆ ಆಗುತ್ತಿದ್ದ ದೊಡ್ಡ ಕಿರಿಕಿರಿ ತಪ್ಪಿದೆ. ಹಾಗಂತ ಸಂಚಾರಿ ನಿಯಮ ಉಲ್ಲಂಘನೆ ಮಾಡಿ ತಪ್ಪಿಸಿಕೊಳ್ಳುವುದಕ್ಕೆ ಸಾಧ್ಯವಿಲ್ಲ. ಏಕೆಂದರೆ ನಿಮ್ಮ ವಿರುದ್ಧ ಡಿಜಿಟಲ್ ಕೇಸ್ ದಾಖಲಾಗಲಿದ್ದು ನೀವು ಸಂಚಾರಿ ನಿಯಮ ಉಲ್ಲಂಘಿಸಿದರೆ ನಿಮ್ಮ ವಿಳಾಸಕ್ಕೆ ನೋಟಿಸ್ ಬರಲಿದೆ. ಇದಕ್ಕೆ ನೀವು ದಂಡವನ್ನೂ ಪಾವತಿಸಬೇಕಾಗುತ್ತದೆ.

ಬೆಂಗಳೂರು ಮಹಾನಗರದ ರಸ್ತೆಗಳ ಮಧ್ಯೆ ವಾಹನ ತಡೆಯುವುದರಿಂದ ಟ್ರಾಫಿಕ್ ಸಮಸ್ಯೆ ಆಗುವ ಕಾರಣ ಮಾರ್ಗ ಮಧ್ಯೆ ತಡೆದು ನಿಲ್ಲಿಸುವ ಕೆಲಸ ಮಾಡಬೇಡಿ ಎಂದು ಪೊಲೀಸ್ ಇಲಾಖೆಯಿಂದ ಸೂಚನೆ ಬಂದಿದೆ. ಬದಲಿಗೆ ಯಾರು ನಿಯಮ ಉಲ್ಲಂಘನೆ ಮಾಡುತ್ತಾರೋ ಅಂಥವರ ವಿರುದ್ಧ ಪ್ರಕರಣ ದಾಖಲಿಸಲು ಪೋಲಿಸ್ ಇಲಾಖೆ ಸೂಚನೆ ನೀಡಿದೆ.
ಎಲ್ಲೆಂದರಲ್ಲಿ ದ್ವಿಚಕ್ರ ವಾಹನಗಳನ್ನು ನಿಲ್ಲಿಸಿ, ದಂಡ ವಿಧಿಸುವುದರ ಬಗ್ಗೆ ಸೊಶೀಯಲ್ ಮೀಡಿಯಾದಲ್ಲಿ ಭಾರಿ ಚರ್ಚೆ ಆಗಿತ್ತು. ಭಾರೀ ಟೀಕೆಯೂ ಸಾರ್ವಜನಿಕರ ಕಡೆಯಿಂದ ಕೇಳಿಬಂದಿತ್ತು. ಇದರ ಪರಿಣಾಮ ಎಂಬಂತೆ ಪೋಲಿಸ್ ಇಲಾಖೆ ಈ ಕ್ರಮಕ್ಕೆ ಮುಂದಾಗಿದೆ.

ಇದರಂತೆ, ನಿಯಮ ಉಲ್ಲಂಘನೆ ಮಾಡುವ ವಾಹನಗಳನ್ನ ಯಾವುದೇ ಕಾನ್ಸ್ಟೇಬಲ್ ಅಡ್ಡಗಟ್ಟಿ ನಿಲ್ಲಿಸಬಾರದು. ಬದಲಿಗೆ ಮೊಬೈಲ್ ಕ್ಯಾಮೆರಾದಲ್ಲಿ ಚಿತ್ರೀಕರಿಸಿ, ಬೈಕ್ ನಂಬರ್ ಎಂಟ್ರಿ ಮಾಡಿಕೊಂಡು ಕೇಸ್ ದಾಖಲಿಸಬೇಕು ಎಂದು ಸೂಚಿಸಲಾಗಿದೆ. ಆದರೆ ದಿನಕ್ಕೆ ಕನಿಷ್ಟ 25 ಈ ರೀತಿಯ ಕೇಸ್ ದಾಖಲಿಸಬೇಕೆಂಬ ಟಾರ್ಗೆಟ್ ಅನ್ನು ಪೊಲೀಸರಿಗೆ ನೀಡಲಾಗಿದೆ.
ರಸ್ತೆಯಲ್ಲಿ ದಂಡ ವಿಧಿಸುವ ಬದಲು ಆರ್ಟಿಒ ಹಾಗೂ ವಾಯು ಮಾಲಿನ್ಯ ಪ್ರಮಾಣ ತಪಾಸಣೆಗೆ ಬರುವ ವಾಹನಗಳಿಗೆ ಹಳೇ ಕೇಸ್ ಇದ್ದರೆ ದಂಡ ವಿಧಿಸಲಾಗುತ್ತದೆ ಎನ್ನಲಾಗಿದೆ. ಹೀಗೆ ಡಿಜಿಟಲ್ ಪದ್ದತಿ ಜಾರಿಗೆ ಬಂದರೆ ಬಿಲ್ ಕೊಡದೆ ಹಣ ಪಡೆಯುವ ಕ್ರಮ ಕೂಡ ತಪ್ಪಲಿದೆ. ಪೊಲೀಸರಿಂದ ರಸ್ತೆ ಮಧ್ಯೆ ಹಣ ಪೀಕಿಸಿಕೊಳ್ಳುವ ಕಿರಿ ಕಿರಿಯನ್ನು ಬೈಕ್ ಸವಾರರು ತಪ್ಪಿಸಿಕೊಳ್ಳಲಿದ್ದಾರೆ.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm