ಬ್ರೇಕಿಂಗ್ ನ್ಯೂಸ್
09-01-21 01:03 pm Bangalore Correspondent ಕರ್ನಾಟಕ
ಬೆಂಗಳೂರು, ಜ.9: ಸಂಚಾರ ನಿಯಮ ಉಲ್ಲಂಘನೆ ಮಾಡುವ ಮಂದಿಯನ್ನ ರಸ್ತೆಯಲ್ಲಿ ತಡೆದು ದಂಡ ವಿಧಿಸುವ ಕ್ರಮಕ್ಕೆ ಬೆಂಗಳೂರು ಪೋಲಿಸರು ತಿಲಾಂಜಲಿ ಇಟ್ಟಿದ್ದಾರೆ.
ಇದರಿಂದ ನಡು ರಸ್ತೆಯಲ್ಲಿ ಬೈಕ್ ಸವಾರರಿಗೆ ಆಗುತ್ತಿದ್ದ ದೊಡ್ಡ ಕಿರಿಕಿರಿ ತಪ್ಪಿದೆ. ಹಾಗಂತ ಸಂಚಾರಿ ನಿಯಮ ಉಲ್ಲಂಘನೆ ಮಾಡಿ ತಪ್ಪಿಸಿಕೊಳ್ಳುವುದಕ್ಕೆ ಸಾಧ್ಯವಿಲ್ಲ. ಏಕೆಂದರೆ ನಿಮ್ಮ ವಿರುದ್ಧ ಡಿಜಿಟಲ್ ಕೇಸ್ ದಾಖಲಾಗಲಿದ್ದು ನೀವು ಸಂಚಾರಿ ನಿಯಮ ಉಲ್ಲಂಘಿಸಿದರೆ ನಿಮ್ಮ ವಿಳಾಸಕ್ಕೆ ನೋಟಿಸ್ ಬರಲಿದೆ. ಇದಕ್ಕೆ ನೀವು ದಂಡವನ್ನೂ ಪಾವತಿಸಬೇಕಾಗುತ್ತದೆ.

ಬೆಂಗಳೂರು ಮಹಾನಗರದ ರಸ್ತೆಗಳ ಮಧ್ಯೆ ವಾಹನ ತಡೆಯುವುದರಿಂದ ಟ್ರಾಫಿಕ್ ಸಮಸ್ಯೆ ಆಗುವ ಕಾರಣ ಮಾರ್ಗ ಮಧ್ಯೆ ತಡೆದು ನಿಲ್ಲಿಸುವ ಕೆಲಸ ಮಾಡಬೇಡಿ ಎಂದು ಪೊಲೀಸ್ ಇಲಾಖೆಯಿಂದ ಸೂಚನೆ ಬಂದಿದೆ. ಬದಲಿಗೆ ಯಾರು ನಿಯಮ ಉಲ್ಲಂಘನೆ ಮಾಡುತ್ತಾರೋ ಅಂಥವರ ವಿರುದ್ಧ ಪ್ರಕರಣ ದಾಖಲಿಸಲು ಪೋಲಿಸ್ ಇಲಾಖೆ ಸೂಚನೆ ನೀಡಿದೆ.
ಎಲ್ಲೆಂದರಲ್ಲಿ ದ್ವಿಚಕ್ರ ವಾಹನಗಳನ್ನು ನಿಲ್ಲಿಸಿ, ದಂಡ ವಿಧಿಸುವುದರ ಬಗ್ಗೆ ಸೊಶೀಯಲ್ ಮೀಡಿಯಾದಲ್ಲಿ ಭಾರಿ ಚರ್ಚೆ ಆಗಿತ್ತು. ಭಾರೀ ಟೀಕೆಯೂ ಸಾರ್ವಜನಿಕರ ಕಡೆಯಿಂದ ಕೇಳಿಬಂದಿತ್ತು. ಇದರ ಪರಿಣಾಮ ಎಂಬಂತೆ ಪೋಲಿಸ್ ಇಲಾಖೆ ಈ ಕ್ರಮಕ್ಕೆ ಮುಂದಾಗಿದೆ.

ಇದರಂತೆ, ನಿಯಮ ಉಲ್ಲಂಘನೆ ಮಾಡುವ ವಾಹನಗಳನ್ನ ಯಾವುದೇ ಕಾನ್ಸ್ಟೇಬಲ್ ಅಡ್ಡಗಟ್ಟಿ ನಿಲ್ಲಿಸಬಾರದು. ಬದಲಿಗೆ ಮೊಬೈಲ್ ಕ್ಯಾಮೆರಾದಲ್ಲಿ ಚಿತ್ರೀಕರಿಸಿ, ಬೈಕ್ ನಂಬರ್ ಎಂಟ್ರಿ ಮಾಡಿಕೊಂಡು ಕೇಸ್ ದಾಖಲಿಸಬೇಕು ಎಂದು ಸೂಚಿಸಲಾಗಿದೆ. ಆದರೆ ದಿನಕ್ಕೆ ಕನಿಷ್ಟ 25 ಈ ರೀತಿಯ ಕೇಸ್ ದಾಖಲಿಸಬೇಕೆಂಬ ಟಾರ್ಗೆಟ್ ಅನ್ನು ಪೊಲೀಸರಿಗೆ ನೀಡಲಾಗಿದೆ.
ರಸ್ತೆಯಲ್ಲಿ ದಂಡ ವಿಧಿಸುವ ಬದಲು ಆರ್ಟಿಒ ಹಾಗೂ ವಾಯು ಮಾಲಿನ್ಯ ಪ್ರಮಾಣ ತಪಾಸಣೆಗೆ ಬರುವ ವಾಹನಗಳಿಗೆ ಹಳೇ ಕೇಸ್ ಇದ್ದರೆ ದಂಡ ವಿಧಿಸಲಾಗುತ್ತದೆ ಎನ್ನಲಾಗಿದೆ. ಹೀಗೆ ಡಿಜಿಟಲ್ ಪದ್ದತಿ ಜಾರಿಗೆ ಬಂದರೆ ಬಿಲ್ ಕೊಡದೆ ಹಣ ಪಡೆಯುವ ಕ್ರಮ ಕೂಡ ತಪ್ಪಲಿದೆ. ಪೊಲೀಸರಿಂದ ರಸ್ತೆ ಮಧ್ಯೆ ಹಣ ಪೀಕಿಸಿಕೊಳ್ಳುವ ಕಿರಿ ಕಿರಿಯನ್ನು ಬೈಕ್ ಸವಾರರು ತಪ್ಪಿಸಿಕೊಳ್ಳಲಿದ್ದಾರೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:03 pm
HK News Staffer
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm